ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಜ20,Tv10 ಕನ್ನಡ

ಆಟೋ ಸೀಟ್ ಬಾಡಿಗೆ ಹೊಡೆಯುವ ವಿಚಾರದಲ್ಲಿ ಇಬ್ಬರು ಯುವಕರು ಕಿರಿಕ್ ತೆಗೆದು ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಾತಗಳ್ಳಿ ನಿವಾಸಿ ನವೀದ್ ಪಾಷಾ (25) ಗಾಯಗೊಂಡವರು.ಓಂಕಾರ್ ಹಾಗೂ ಶೇಖರ ಎಂಬುವರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ನವೀದ್ ಪಾಷಾ ರವರು ಗ್ರಾಮಾಂತರ ಬಸ್ ನಿಲ್ದಾಣದಿಂದ ಶಾಂತಿನಗರ,ಕೆಸರೆ ಬಡಾವಣೆಗೆ ಸೀಟ್ ಬಾಡಿಗೆ ಹೊಡೆಯುತ್ತಾರೆ.ಈ ವಿಚಾರದಲ್ಲಿ ಓಂಕಾರ್ ವಿರೋಧಿಸಿ ಈ ಜಾಗದಲ್ಲಿ ಸೀಟ್ ಬಾಡಿಗೆ ಹೊಡೆಯಬಾರದೆಂದು ಧಂಕಿ ಹಾಕಿದ್ದಾನೆ.ಓಂಕಾರ್ ಮಾತಿಗೆ ಕ್ಯಾರೆ ಎನ್ನದ ನವೀದ್ ಪಾಷ ಬಾಡಿಗೆ ಹೊಡೆಯಲು ಬಂದಾಗ ಎಷ್ಟು ಸಾರಿ ಹೇಳುವುದೋ ಎಂದು ಕಿರಿಕ್ ತೆಗೆದಿದ್ದಾನೆ.ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದ ವೇಳೆ ಜೊತೆಗೆ ಬಂದಿದ್ದ ಶೇಖರ ಚಾಕುವಿನಿಂದ ಮುಖ,ಬೆನ್ನು,ತಲೆಗೆ ಇರಿದಿದ್ದಾನೆ.ಶೇಖರ್ ಜೊತೆಗೆ ಓಂಕಾರ್ ಸಹ ಚಾಕುವಿನಿಂದ ಇರಿದಿದ್ದಾನೆ.ಗಾಯಗೊಂಡ ನವೀದ್ ಪಾಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *