ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಮೈಸೂರು,ಜ21,Tv10 ಕನ್ನಡ

ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ರವರ ಮಾರ್ಗದರ್ಶನದಲ್ಲಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ನಡೆಯುವ ಪಂಚಗರುಡೋತ್ಸವ ಕಾರ್ಯಕ್ಕೆ ಕೆ.ಅರ್.ಕ್ಷೇತ್ರದ ಶಾಸಕರು ಸಮಿತಿಯ ಕಾರ್ಯಧ್ಯಕ್ಷರಾದ ಟಿ.ಎಸ್. ಶ್ರೀ ವತ್ಸ ರವರು ಚಾಲನೆ ನೀಡಿದರು.ಇದೇ ವೇಳೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ನಂತರ ಟಿ.ಎಸ.ಶ್ರೀ ವತ್ಸ ರವರು ಮಾತನಾಡಿ ಲೋಕ ಕಲ್ಯಾಣಕ್ಕಾಗಿ ಎರಡನೆ ಬಾರಿಗೆ ಪಂಚಗರೋಡತ್ಸವ ಸೇವೆಯನ್ನು ಪ್ರಾರಂಭಮಾಡಲಾಗಿದೆ.
ಶಾಸ್ತ್ರಗಳಲ್ಲಿ ಉಲ್ಲೇಖದಂತೆ ಭಕ್ತಿ ಭಾವದಿಂದ ಸ್ವಾಮಿ ನಿಷ್ಠೆ ಇರುವ ಗರುಡನ ಮೇಲೆ ಬರುವ ಸ್ವಾಮಿಯ ದರ್ಶನ ಮಾಡುವುದರಿಂದ ನಮ್ಮ ಜೀವನ ಸಾರ್ಥಕವಾಗುತ್ತದೆ ಆರೋಗ್ಯ ಸುಧಾರಿಸುತ್ತದೆ ಸಜ್ಜನರ ಸಹವಾಸ ಸದಾ ಇರುತ್ತದೆ ಲೋಕ ಕಲ್ಯಾಣವಾಗಿ ಸಕಲ ಸೌಭಾಗ್ಯ ದೊರೆಯುತ್ತದೆ ಎಂದರು.
ಜನವರಿ 29 ಸಂಜೆ 5 ಗಂಟೆಗೆ ಪ್ರಾರಂಭವಾಗಿ ವೇದಿಕೆ ಕಾರ್ಯಕ್ರಮ,ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಪಂಚಗರಡೋತ್ಸವ ಉತ್ಸವ ಮಾಡಲಾಗುವುದು ಎಂದರು.ಈ ಸಭಾ ಕಾರ್ಯಕ್ರಮದಲ್ಲಿ ಬ್ರಹ ತಂತ್ರ ಪರಕಾಲ ಮಠದ ಸ್ವಾಮಿ ಜೀ,ಯತಿರಾಜ ನಾರಯಣ ಜೀ ರವರು, ಸಂಸದರಾದ ಶ್ರೀ ಕೃಷ್ಣ ದತ್ತ ನರಸಿಂಹರಾಜ ಒಡೆಯರ್,ಭಾಷ್ಯಂ ಸ್ವಾಮೀ ಜೀ ಉಪಸ್ಥಿತಿ ಇರುವರು.

ಈ ಸಂಧರ್ಭದಲ್ಲಿ ಯೋಗಾ ನರಸಿಂಹನ್,ವೀರ ರಾಘವನ್,ಪ್ರದೀಪ್, ಶ್ರೀಮತಿನಾಗಲಕ್ಷಿ,ಜಾನಕಿಶೇಷಾದ್ರಿ,ರಾಧಿಕಾ,ರಾಮಸ್ವಾಮಿ ಅಯ್ಯಂಗಾರ್, ಶೇಷಾದ್ರಿ ಅಯ್ಯಂಗಾರ್,ಜಗದೀಶ್, ಪ್ರಸನ್ನ, ಶಾಂತರಾಮ್,ಆನಂದ್,ರಾಜಗೋಪಾಲ್ ಮುಂತಾದವರು ಇದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *