ಸೈಬರ್ ಅಪರಾಧ ಜಾಗೃತಿ ಮಾಹಿತಿ ಒಳಗೊಂಡ ಕ್ಯಾಲೆಂಡರ್ ಬಿಡುಗಡೆ…ಕೆಎಂಪಿಕೆ ಟ್ರಸ್ಟ್ ನಿಂದ ಉಪಯುಕ್ತ ಮಾಹಿತಿ…

ಸೈಬರ್ ಅಪರಾಧ ಜಾಗೃತಿ ಮಾಹಿತಿ ಒಳಗೊಂಡ ಕ್ಯಾಲೆಂಡರ್ ಬಿಡುಗಡೆ…ಕೆಎಂಪಿಕೆ ಟ್ರಸ್ಟ್ ನಿಂದ ಉಪಯುಕ್ತ ಮಾಹಿತಿ…

ಮೈಸೂರು,ಜ21,Tv10 ಕನ್ನಡ

ಸೈಬರ್‌ ಅಪರಾಧಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಮಾಹಿತಿ ಒಳಗೊಂಡ ಕ್ಯಾಲೆಂಡರ್ ಇಂದು ಬಿಡುಗಡೆಗೊಳಿಸಲಾಯಿತು. ಕೆಎಂಪಿಕೆ ಟ್ರಸ್ಟ್ ಹೊರತಂದ ಉಪಯುಕ್ತ ಕ್ಯಾಲೆಂಡರ್ ನ್ನ ಕರ್ನಾಟಕ ಆಂತರಿಕ ಭದ್ರತಾ ವಿಭಾಗ (ISD), ಪೊಲೀಸ್ ಅಧೀಕ್ಷಕರು(SP) ಡಾ.ಎ ಎನ್ ಪ್ರಕಾಶ್ ಗೌಡ ಬಿಡುಗಡೆಗೊಳಿಸಿದರು.

6 ಪುಟಗಳುಳ್ಳ 2025 ನೇ ಇಸವಿಯ ಕ್ಯಾಲೆಂಡರ್ ನಲ್ಲಿ ಆಕರ್ಷಕವಾಗಿ ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಅರ್ಥವಾಗುವಂತೆ ಮಾಹಿತಿಯನ್ನ ಒದಗಿಸಲಾಗಿದೆ.ಅನಾಮಧೇಯ ವ್ಯಕ್ತಿಗಳಿಗೆ ಯಾವುದೇ ಖಾಸಗಿ ವಿಚಾರಗಳನ್ನ ಹಂಚಿಕೊಳ್ಳುವ ಬಗ್ಗೆ,ಅನುಮಾನಾಸ್ಪದ ಲಿಂಕ್ ಓಪನ್ ಮಾಡದಂತೆ,ಅನಾಮಧೇಯ ವ್ಯಕ್ತಿಗಳಿಗೆ ಬ್ಯಾಂಕ್ ಖಾತೆ ಮಾಹಿತಿ ನೀಡದಂತೆ,ಸರ್ಕಾರಿ ಅಧಿಕಾರಿಗಳ ಹೆಸರಲ್ಲಿ ಆನ್ ಲೈನ್ ನಲ್ಲಿ ವಂಚಿಸುತ್ತಿರುವ ಬಗ್ಗೆ ಸೇರಿದಂತೆ ಜಾಗೃತಿ ವಹಿಸುವ ಕುರಿತಂತೆ ಕ್ಯಾಲೆಂಡರ್ ನಲ್ಲಿ ಮಾಹಿತಿ ಒದಗಿಸಲಾಗಿದೆ.ವಂಚನೆಗೆ ಒಳಗಾದಾಗ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲಾಗಿದೆ.

ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಡಾ.ಪ್ರಕಾಶ್ ಗೌಡ ರವರು ದೇಶದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ.
ಅದರಲ್ಲೂ ವಿದ್ಯಾವಂತ ಜನರೇ ಇದರಲ್ಲಿ ಹೆಚ್ಚಾಗಿ ಮೋಸ ಹೋಗುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹಣ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರಲ್ಲೂ ಡಿಜಿಟಲ್ ಕ್ರೈಂಗಳ ಜಾಗೃತಿ ಅಗತ್ಯವಾಗಿದೆ.
ದುಡಿಯದೆ ಅತಿ ಹೆಚ್ಚು ಹಣ ಗಳಿಸುವ, ಆಫರ್‌ನಲ್ಲಿ ಅತಿ ಹೆಚ್ಚಿನ ಲಾಭ ಪಡೆಯುವ ದುರಾಸೆಗೆ ಸಿಲುಕಿರುವ ಜನರೇ ಹೆಚ್ಚಿನ ಪ್ರಮಾಣದಲ್ಲಿ ಸೈಬ‌ರ್ ವಂಚನೆ ಜಾಲದಲ್ಲಿ ಸಿಲುಕುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಪದವಿ ಹಂತದ ವಿದ್ಯಾರ್ಥಿಗಳು ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ವ್ಯಕ್ತಿಗಳ ಜೊತೆಯಲ್ಲಿ ಗೆಳೆತನ ಮಾಡಿ ವೈಯಕ್ತಿಕ ಹಾಗೂ ಆರ್ಥಿಕ ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ತೊಂದರೆಗೆ ಸಿಲುಕುತ್ತಿದ್ದಾರೆ.
ಶಾಪಿಂಗ್ ಮಾಲ್ ಹಾಗೂ ಎಲ್ಲೆಂದರಲ್ಲಿ ಅಪರಿಚತರಿಗೆ ಫೋನ್ ನಂಬ‌ರ್, ಇಮೇಲ್ ಐಡಿ, ಆಧಾ‌ರ್ ಸಂಖ್ಯೆ, ಬ್ಯಾಂಕ್‌ ಖಾತೆ ವಿವರ, ಎಟಿಎಂ ಪಿನ್, ಇಂಟರ್‌ನೆಟ್‌ ಬ್ಯಾಂಕಿಂಗ್‌ ಪಾಸ್‌ವರ್ಡ್ಗಳ ಬಗ್ಗೆ ಮಾಹಿತಿ ನೀಡಬಾರದೆಂದು ಸಲಹೆ ನೀಡಿದರು.

ಇದೆ ಸಂದರ್ಭದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜಿ ರಾಘವೇಂದ್ರ, ದುರ್ಗಾ ಪ್ರಸಾದ್, ಬಾಲಾಜಿ, ಸಚಿನ್ ನಾಯಕ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *