ಸೈಬರ್ ಅಪರಾಧ ಜಾಗೃತಿ ಮಾಹಿತಿ ಒಳಗೊಂಡ ಕ್ಯಾಲೆಂಡರ್ ಬಿಡುಗಡೆ…ಕೆಎಂಪಿಕೆ ಟ್ರಸ್ಟ್ ನಿಂದ ಉಪಯುಕ್ತ ಮಾಹಿತಿ…

ಸೈಬರ್ ಅಪರಾಧ ಜಾಗೃತಿ ಮಾಹಿತಿ ಒಳಗೊಂಡ ಕ್ಯಾಲೆಂಡರ್ ಬಿಡುಗಡೆ…ಕೆಎಂಪಿಕೆ ಟ್ರಸ್ಟ್ ನಿಂದ ಉಪಯುಕ್ತ ಮಾಹಿತಿ…

ಮೈಸೂರು,ಜ21,Tv10 ಕನ್ನಡ

ಸೈಬರ್‌ ಅಪರಾಧಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಮಾಹಿತಿ ಒಳಗೊಂಡ ಕ್ಯಾಲೆಂಡರ್ ಇಂದು ಬಿಡುಗಡೆಗೊಳಿಸಲಾಯಿತು. ಕೆಎಂಪಿಕೆ ಟ್ರಸ್ಟ್ ಹೊರತಂದ ಉಪಯುಕ್ತ ಕ್ಯಾಲೆಂಡರ್ ನ್ನ ಕರ್ನಾಟಕ ಆಂತರಿಕ ಭದ್ರತಾ ವಿಭಾಗ (ISD), ಪೊಲೀಸ್ ಅಧೀಕ್ಷಕರು(SP) ಡಾ.ಎ ಎನ್ ಪ್ರಕಾಶ್ ಗೌಡ ಬಿಡುಗಡೆಗೊಳಿಸಿದರು.

6 ಪುಟಗಳುಳ್ಳ 2025 ನೇ ಇಸವಿಯ ಕ್ಯಾಲೆಂಡರ್ ನಲ್ಲಿ ಆಕರ್ಷಕವಾಗಿ ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಅರ್ಥವಾಗುವಂತೆ ಮಾಹಿತಿಯನ್ನ ಒದಗಿಸಲಾಗಿದೆ.ಅನಾಮಧೇಯ ವ್ಯಕ್ತಿಗಳಿಗೆ ಯಾವುದೇ ಖಾಸಗಿ ವಿಚಾರಗಳನ್ನ ಹಂಚಿಕೊಳ್ಳುವ ಬಗ್ಗೆ,ಅನುಮಾನಾಸ್ಪದ ಲಿಂಕ್ ಓಪನ್ ಮಾಡದಂತೆ,ಅನಾಮಧೇಯ ವ್ಯಕ್ತಿಗಳಿಗೆ ಬ್ಯಾಂಕ್ ಖಾತೆ ಮಾಹಿತಿ ನೀಡದಂತೆ,ಸರ್ಕಾರಿ ಅಧಿಕಾರಿಗಳ ಹೆಸರಲ್ಲಿ ಆನ್ ಲೈನ್ ನಲ್ಲಿ ವಂಚಿಸುತ್ತಿರುವ ಬಗ್ಗೆ ಸೇರಿದಂತೆ ಜಾಗೃತಿ ವಹಿಸುವ ಕುರಿತಂತೆ ಕ್ಯಾಲೆಂಡರ್ ನಲ್ಲಿ ಮಾಹಿತಿ ಒದಗಿಸಲಾಗಿದೆ.ವಂಚನೆಗೆ ಒಳಗಾದಾಗ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲಾಗಿದೆ.

ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಡಾ.ಪ್ರಕಾಶ್ ಗೌಡ ರವರು ದೇಶದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ.
ಅದರಲ್ಲೂ ವಿದ್ಯಾವಂತ ಜನರೇ ಇದರಲ್ಲಿ ಹೆಚ್ಚಾಗಿ ಮೋಸ ಹೋಗುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹಣ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರಲ್ಲೂ ಡಿಜಿಟಲ್ ಕ್ರೈಂಗಳ ಜಾಗೃತಿ ಅಗತ್ಯವಾಗಿದೆ.
ದುಡಿಯದೆ ಅತಿ ಹೆಚ್ಚು ಹಣ ಗಳಿಸುವ, ಆಫರ್‌ನಲ್ಲಿ ಅತಿ ಹೆಚ್ಚಿನ ಲಾಭ ಪಡೆಯುವ ದುರಾಸೆಗೆ ಸಿಲುಕಿರುವ ಜನರೇ ಹೆಚ್ಚಿನ ಪ್ರಮಾಣದಲ್ಲಿ ಸೈಬ‌ರ್ ವಂಚನೆ ಜಾಲದಲ್ಲಿ ಸಿಲುಕುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಪದವಿ ಹಂತದ ವಿದ್ಯಾರ್ಥಿಗಳು ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ವ್ಯಕ್ತಿಗಳ ಜೊತೆಯಲ್ಲಿ ಗೆಳೆತನ ಮಾಡಿ ವೈಯಕ್ತಿಕ ಹಾಗೂ ಆರ್ಥಿಕ ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ತೊಂದರೆಗೆ ಸಿಲುಕುತ್ತಿದ್ದಾರೆ.
ಶಾಪಿಂಗ್ ಮಾಲ್ ಹಾಗೂ ಎಲ್ಲೆಂದರಲ್ಲಿ ಅಪರಿಚತರಿಗೆ ಫೋನ್ ನಂಬ‌ರ್, ಇಮೇಲ್ ಐಡಿ, ಆಧಾ‌ರ್ ಸಂಖ್ಯೆ, ಬ್ಯಾಂಕ್‌ ಖಾತೆ ವಿವರ, ಎಟಿಎಂ ಪಿನ್, ಇಂಟರ್‌ನೆಟ್‌ ಬ್ಯಾಂಕಿಂಗ್‌ ಪಾಸ್‌ವರ್ಡ್ಗಳ ಬಗ್ಗೆ ಮಾಹಿತಿ ನೀಡಬಾರದೆಂದು ಸಲಹೆ ನೀಡಿದರು.

ಇದೆ ಸಂದರ್ಭದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜಿ ರಾಘವೇಂದ್ರ, ದುರ್ಗಾ ಪ್ರಸಾದ್, ಬಾಲಾಜಿ, ಸಚಿನ್ ನಾಯಕ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಹುಣಸೂರು,ಮೇ2,Tv10 ಕನ್ನಡ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಿಡಿಯಮ್ಮನ ಜಾತ್ರಾ ಮಹೋತ್ಸವ ಅದ್ದೂರಿಯಿಂದ ನೆರವೇರಿತು.ಹಲವಾರು ಐತಿಹ್ಯವುಳ್ಳ, ರಾಜ್ಯಾದ್ಯಂತ ಭಕ್ತರನ್ನು ಹೊಂದಿರುವ, ಪವಾಡದ ಜಾತ್ರೆಯೆಂದೇ ಪ್ರತಿಬಿಂಬಿತವಾಗಿರುವ ಗ್ರಾಮದೇವತೆ ಜಾತ್ರಾ ಮಹೋತ್ಸವದಲ್ಲಿ…
ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು ಮುರಿತ…

ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು…

ಮಂಡ್ಯ,ಏ30,Tv10 ಕನ್ನಡ ಅರಳಿ ಮರದ ಕೆಳಗೆ ವಿರಮಿಸುತ್ತಿದ್ದ ರೈತನ ಕಾಲುಗಳ ಮೇಲೆ ಟಿಪ್ಪರ್ ಹರಿದ ಮಂಡ್ಯ ಜಿಲ್ಲೆ ಕೆ.ಆರ್‌‌.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟೇಗೌಡ ಎಂಬುವವರ ಮೇಲೆ ಹರಿದ…
ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮೈಸೂರು,ಏ30,Tv10 ಕನ್ನಡ ನಿನ್ನೆ ಸುರಿದ ಭಾರಿ ಮಳೆಗೆ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿದೆ.ಮೈಸೂರಿನ ಬೃಂದಾವನ ಬಡಾವಣೆ 7 ನೇ ಕ್ರಾಸ್ ನ ಪ್ರಿಯದರ್ಶಿನಿ ಆಸ್ಪತ್ರೆ…

Leave a Reply

Your email address will not be published. Required fields are marked *