ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು,ಜ21,Tv10 ಕನ್ನಡ

ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯುವ ಉದ್ದೇಶದಿಂದ ನಂಜನಗೂಡು ನಗರಸಭೆ ಬಜೆಟ್ ನ ಪೂರ್ವಭಾವಿ ಸಭೆ ಇಂದು ಕರೆಯಲಾಗಿತ್ತು.ಬಜೆಟ್ ಗೆ ಅಭಿಪ್ರಾಯಗಳನ್ನ ನೀಡಬೇಕಿದ್ದ ಸಾರ್ವಜನಿಕರೇ ಇಲ್ಲದ ಕಾರಣ ನೀರಸ ಪ್ರತಿಕ್ರಿಯೆ ದೊರೆಯಿತು.

ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಕಂಠಸ್ವಾಮಿ ಹಾಗೂ ಪೌರಾಯುಕ್ತರಾದ ವಿಜಯ್ ರವರ ನೇತೃತ್ವದಲ್ಲಿ 2025-26 ನೇ ಸಾಲಿನ ಆಯವ್ಯಯ ಸಿದ್ದಪಡಿಸಲು ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯಲು ಆಯೋಜಿಸಲಾಗಿತ್ತು.ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಂಘಟನೆಯ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನ ತಿಳಿಸಬೇಕಿತ್ತು.ಆದ್ರೆ ಸಭೆ ಆರಂಭವಾಗಿ ಗಂಟೆಗಳು ಉರುಳಿದರೂ ಸಾರ್ವಜನಿಕರು ಆಗಮಿಸದೆ ಸಭೆ ಮಂಕಾಯಿತು.ಕೆಲವು ಪತ್ರಕರ್ತರು ಬೆರಳೆಣಿಕೆಯ ಸಾಋವಜನಿಕರು ಹೊರತುಪಡಿಸಿದ್ರೆ ಸಭೆಗೆ ನೀರಸ ಪ್ರತಿಕ್ರಿಯೆ ದೊರೆಯಿತು.ಸಭೆಯಲ್ಲಿ ಸಾರ್ವಜನಿಕರ ಅನುಪಸ್ಥಿತಿ ಅಧ್ಯಕ್ಷರು ಹಾಗೂ ಪೌರಾಯುಕ್ತರಿಗೆ ಮುಜುಗರ ತಂದಿತ್ತು.ನಂಜನಗೂಡು ನಗರದಲ್ಲಿ ಕಾಡುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆಧ್ಯತೆ ನೀಡುವುದಾಗಿ ತಿಳಿಸಿ ಸಭೆಯನ್ನ ಅಂತ್ಯಗೊಳಿಸಿದರು.

ಅಭಿವೃದ್ದಿಗೆ ಒತ್ತು ನೀಡದ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಬೇಸತ್ತಿರುವ ಸಾರ್ವಜನಿಕರು ಸಭೆಗೆ ಗೈರಾಗಿರುವ ಮಾಹಿತಿ ಇದೆ. ಈ ಬೆಳವಣಿಗೆ ನಂಜನಗೂಡಿನ ಸರ್ವತೋಮುಖ ಅಭಿವೃದ್ದಿಗೆ ಮಾರಕ ಎಂದೇ ಹೇಳಲಾಗುತ್ತಿದೆ.ಸಾರ್ವಜನಿಕರ ಗೈರಂತೂ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷತೆ ವಹಿಸಿದವರಿಗೆ ಮುಖಭಂಗವಾದಂತಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *