ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು,ಜ21,Tv10 ಕನ್ನಡ

ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯುವ ಉದ್ದೇಶದಿಂದ ನಂಜನಗೂಡು ನಗರಸಭೆ ಬಜೆಟ್ ನ ಪೂರ್ವಭಾವಿ ಸಭೆ ಇಂದು ಕರೆಯಲಾಗಿತ್ತು.ಬಜೆಟ್ ಗೆ ಅಭಿಪ್ರಾಯಗಳನ್ನ ನೀಡಬೇಕಿದ್ದ ಸಾರ್ವಜನಿಕರೇ ಇಲ್ಲದ ಕಾರಣ ನೀರಸ ಪ್ರತಿಕ್ರಿಯೆ ದೊರೆಯಿತು.

ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಕಂಠಸ್ವಾಮಿ ಹಾಗೂ ಪೌರಾಯುಕ್ತರಾದ ವಿಜಯ್ ರವರ ನೇತೃತ್ವದಲ್ಲಿ 2025-26 ನೇ ಸಾಲಿನ ಆಯವ್ಯಯ ಸಿದ್ದಪಡಿಸಲು ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯಲು ಆಯೋಜಿಸಲಾಗಿತ್ತು.ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಂಘಟನೆಯ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನ ತಿಳಿಸಬೇಕಿತ್ತು.ಆದ್ರೆ ಸಭೆ ಆರಂಭವಾಗಿ ಗಂಟೆಗಳು ಉರುಳಿದರೂ ಸಾರ್ವಜನಿಕರು ಆಗಮಿಸದೆ ಸಭೆ ಮಂಕಾಯಿತು.ಕೆಲವು ಪತ್ರಕರ್ತರು ಬೆರಳೆಣಿಕೆಯ ಸಾಋವಜನಿಕರು ಹೊರತುಪಡಿಸಿದ್ರೆ ಸಭೆಗೆ ನೀರಸ ಪ್ರತಿಕ್ರಿಯೆ ದೊರೆಯಿತು.ಸಭೆಯಲ್ಲಿ ಸಾರ್ವಜನಿಕರ ಅನುಪಸ್ಥಿತಿ ಅಧ್ಯಕ್ಷರು ಹಾಗೂ ಪೌರಾಯುಕ್ತರಿಗೆ ಮುಜುಗರ ತಂದಿತ್ತು.ನಂಜನಗೂಡು ನಗರದಲ್ಲಿ ಕಾಡುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆಧ್ಯತೆ ನೀಡುವುದಾಗಿ ತಿಳಿಸಿ ಸಭೆಯನ್ನ ಅಂತ್ಯಗೊಳಿಸಿದರು.

ಅಭಿವೃದ್ದಿಗೆ ಒತ್ತು ನೀಡದ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಬೇಸತ್ತಿರುವ ಸಾರ್ವಜನಿಕರು ಸಭೆಗೆ ಗೈರಾಗಿರುವ ಮಾಹಿತಿ ಇದೆ. ಈ ಬೆಳವಣಿಗೆ ನಂಜನಗೂಡಿನ ಸರ್ವತೋಮುಖ ಅಭಿವೃದ್ದಿಗೆ ಮಾರಕ ಎಂದೇ ಹೇಳಲಾಗುತ್ತಿದೆ.ಸಾರ್ವಜನಿಕರ ಗೈರಂತೂ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷತೆ ವಹಿಸಿದವರಿಗೆ ಮುಖಭಂಗವಾದಂತಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *