ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು,ಜ21,Tv10 ಕನ್ನಡ

ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯುವ ಉದ್ದೇಶದಿಂದ ನಂಜನಗೂಡು ನಗರಸಭೆ ಬಜೆಟ್ ನ ಪೂರ್ವಭಾವಿ ಸಭೆ ಇಂದು ಕರೆಯಲಾಗಿತ್ತು.ಬಜೆಟ್ ಗೆ ಅಭಿಪ್ರಾಯಗಳನ್ನ ನೀಡಬೇಕಿದ್ದ ಸಾರ್ವಜನಿಕರೇ ಇಲ್ಲದ ಕಾರಣ ನೀರಸ ಪ್ರತಿಕ್ರಿಯೆ ದೊರೆಯಿತು.

ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಕಂಠಸ್ವಾಮಿ ಹಾಗೂ ಪೌರಾಯುಕ್ತರಾದ ವಿಜಯ್ ರವರ ನೇತೃತ್ವದಲ್ಲಿ 2025-26 ನೇ ಸಾಲಿನ ಆಯವ್ಯಯ ಸಿದ್ದಪಡಿಸಲು ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯಲು ಆಯೋಜಿಸಲಾಗಿತ್ತು.ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಂಘಟನೆಯ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನ ತಿಳಿಸಬೇಕಿತ್ತು.ಆದ್ರೆ ಸಭೆ ಆರಂಭವಾಗಿ ಗಂಟೆಗಳು ಉರುಳಿದರೂ ಸಾರ್ವಜನಿಕರು ಆಗಮಿಸದೆ ಸಭೆ ಮಂಕಾಯಿತು.ಕೆಲವು ಪತ್ರಕರ್ತರು ಬೆರಳೆಣಿಕೆಯ ಸಾಋವಜನಿಕರು ಹೊರತುಪಡಿಸಿದ್ರೆ ಸಭೆಗೆ ನೀರಸ ಪ್ರತಿಕ್ರಿಯೆ ದೊರೆಯಿತು.ಸಭೆಯಲ್ಲಿ ಸಾರ್ವಜನಿಕರ ಅನುಪಸ್ಥಿತಿ ಅಧ್ಯಕ್ಷರು ಹಾಗೂ ಪೌರಾಯುಕ್ತರಿಗೆ ಮುಜುಗರ ತಂದಿತ್ತು.ನಂಜನಗೂಡು ನಗರದಲ್ಲಿ ಕಾಡುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆಧ್ಯತೆ ನೀಡುವುದಾಗಿ ತಿಳಿಸಿ ಸಭೆಯನ್ನ ಅಂತ್ಯಗೊಳಿಸಿದರು.

ಅಭಿವೃದ್ದಿಗೆ ಒತ್ತು ನೀಡದ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಬೇಸತ್ತಿರುವ ಸಾರ್ವಜನಿಕರು ಸಭೆಗೆ ಗೈರಾಗಿರುವ ಮಾಹಿತಿ ಇದೆ. ಈ ಬೆಳವಣಿಗೆ ನಂಜನಗೂಡಿನ ಸರ್ವತೋಮುಖ ಅಭಿವೃದ್ದಿಗೆ ಮಾರಕ ಎಂದೇ ಹೇಳಲಾಗುತ್ತಿದೆ.ಸಾರ್ವಜನಿಕರ ಗೈರಂತೂ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷತೆ ವಹಿಸಿದವರಿಗೆ ಮುಖಭಂಗವಾದಂತಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *