ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು,ಜ21,Tv10 ಕನ್ನಡ

ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯುವ ಉದ್ದೇಶದಿಂದ ನಂಜನಗೂಡು ನಗರಸಭೆ ಬಜೆಟ್ ನ ಪೂರ್ವಭಾವಿ ಸಭೆ ಇಂದು ಕರೆಯಲಾಗಿತ್ತು.ಬಜೆಟ್ ಗೆ ಅಭಿಪ್ರಾಯಗಳನ್ನ ನೀಡಬೇಕಿದ್ದ ಸಾರ್ವಜನಿಕರೇ ಇಲ್ಲದ ಕಾರಣ ನೀರಸ ಪ್ರತಿಕ್ರಿಯೆ ದೊರೆಯಿತು.

ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಕಂಠಸ್ವಾಮಿ ಹಾಗೂ ಪೌರಾಯುಕ್ತರಾದ ವಿಜಯ್ ರವರ ನೇತೃತ್ವದಲ್ಲಿ 2025-26 ನೇ ಸಾಲಿನ ಆಯವ್ಯಯ ಸಿದ್ದಪಡಿಸಲು ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯಲು ಆಯೋಜಿಸಲಾಗಿತ್ತು.ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಂಘಟನೆಯ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನ ತಿಳಿಸಬೇಕಿತ್ತು.ಆದ್ರೆ ಸಭೆ ಆರಂಭವಾಗಿ ಗಂಟೆಗಳು ಉರುಳಿದರೂ ಸಾರ್ವಜನಿಕರು ಆಗಮಿಸದೆ ಸಭೆ ಮಂಕಾಯಿತು.ಕೆಲವು ಪತ್ರಕರ್ತರು ಬೆರಳೆಣಿಕೆಯ ಸಾಋವಜನಿಕರು ಹೊರತುಪಡಿಸಿದ್ರೆ ಸಭೆಗೆ ನೀರಸ ಪ್ರತಿಕ್ರಿಯೆ ದೊರೆಯಿತು.ಸಭೆಯಲ್ಲಿ ಸಾರ್ವಜನಿಕರ ಅನುಪಸ್ಥಿತಿ ಅಧ್ಯಕ್ಷರು ಹಾಗೂ ಪೌರಾಯುಕ್ತರಿಗೆ ಮುಜುಗರ ತಂದಿತ್ತು.ನಂಜನಗೂಡು ನಗರದಲ್ಲಿ ಕಾಡುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆಧ್ಯತೆ ನೀಡುವುದಾಗಿ ತಿಳಿಸಿ ಸಭೆಯನ್ನ ಅಂತ್ಯಗೊಳಿಸಿದರು.

ಅಭಿವೃದ್ದಿಗೆ ಒತ್ತು ನೀಡದ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಬೇಸತ್ತಿರುವ ಸಾರ್ವಜನಿಕರು ಸಭೆಗೆ ಗೈರಾಗಿರುವ ಮಾಹಿತಿ ಇದೆ. ಈ ಬೆಳವಣಿಗೆ ನಂಜನಗೂಡಿನ ಸರ್ವತೋಮುಖ ಅಭಿವೃದ್ದಿಗೆ ಮಾರಕ ಎಂದೇ ಹೇಳಲಾಗುತ್ತಿದೆ.ಸಾರ್ವಜನಿಕರ ಗೈರಂತೂ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷತೆ ವಹಿಸಿದವರಿಗೆ ಮುಖಭಂಗವಾದಂತಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *