ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು,ಜ21,Tv10 ಕನ್ನಡ

ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯುವ ಉದ್ದೇಶದಿಂದ ನಂಜನಗೂಡು ನಗರಸಭೆ ಬಜೆಟ್ ನ ಪೂರ್ವಭಾವಿ ಸಭೆ ಇಂದು ಕರೆಯಲಾಗಿತ್ತು.ಬಜೆಟ್ ಗೆ ಅಭಿಪ್ರಾಯಗಳನ್ನ ನೀಡಬೇಕಿದ್ದ ಸಾರ್ವಜನಿಕರೇ ಇಲ್ಲದ ಕಾರಣ ನೀರಸ ಪ್ರತಿಕ್ರಿಯೆ ದೊರೆಯಿತು.

ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಕಂಠಸ್ವಾಮಿ ಹಾಗೂ ಪೌರಾಯುಕ್ತರಾದ ವಿಜಯ್ ರವರ ನೇತೃತ್ವದಲ್ಲಿ 2025-26 ನೇ ಸಾಲಿನ ಆಯವ್ಯಯ ಸಿದ್ದಪಡಿಸಲು ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯಲು ಆಯೋಜಿಸಲಾಗಿತ್ತು.ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಂಘಟನೆಯ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನ ತಿಳಿಸಬೇಕಿತ್ತು.ಆದ್ರೆ ಸಭೆ ಆರಂಭವಾಗಿ ಗಂಟೆಗಳು ಉರುಳಿದರೂ ಸಾರ್ವಜನಿಕರು ಆಗಮಿಸದೆ ಸಭೆ ಮಂಕಾಯಿತು.ಕೆಲವು ಪತ್ರಕರ್ತರು ಬೆರಳೆಣಿಕೆಯ ಸಾಋವಜನಿಕರು ಹೊರತುಪಡಿಸಿದ್ರೆ ಸಭೆಗೆ ನೀರಸ ಪ್ರತಿಕ್ರಿಯೆ ದೊರೆಯಿತು.ಸಭೆಯಲ್ಲಿ ಸಾರ್ವಜನಿಕರ ಅನುಪಸ್ಥಿತಿ ಅಧ್ಯಕ್ಷರು ಹಾಗೂ ಪೌರಾಯುಕ್ತರಿಗೆ ಮುಜುಗರ ತಂದಿತ್ತು.ನಂಜನಗೂಡು ನಗರದಲ್ಲಿ ಕಾಡುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆಧ್ಯತೆ ನೀಡುವುದಾಗಿ ತಿಳಿಸಿ ಸಭೆಯನ್ನ ಅಂತ್ಯಗೊಳಿಸಿದರು.

ಅಭಿವೃದ್ದಿಗೆ ಒತ್ತು ನೀಡದ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಬೇಸತ್ತಿರುವ ಸಾರ್ವಜನಿಕರು ಸಭೆಗೆ ಗೈರಾಗಿರುವ ಮಾಹಿತಿ ಇದೆ. ಈ ಬೆಳವಣಿಗೆ ನಂಜನಗೂಡಿನ ಸರ್ವತೋಮುಖ ಅಭಿವೃದ್ದಿಗೆ ಮಾರಕ ಎಂದೇ ಹೇಳಲಾಗುತ್ತಿದೆ.ಸಾರ್ವಜನಿಕರ ಗೈರಂತೂ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷತೆ ವಹಿಸಿದವರಿಗೆ ಮುಖಭಂಗವಾದಂತಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *