ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಜೊತೆ ತಹಸೀಲ್ದಾರ್ ಸಭೆ…ಕಿರುಕುಳ ನೀಡದಂತೆ ಎಚ್ಚರಿಕೆ…

ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಜೊತೆ ತಹಸೀಲ್ದಾರ್ ಸಭೆ…ಕಿರುಕುಳ ನೀಡದಂತೆ ಎಚ್ಚರಿಕೆ…

ನಂಜನಗೂಡು,ಜ21,Tv10 ಕನ್ನಡ

ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಗ್ರಾಮ ತೊರೆಯುತ್ತಿರುವ ಕುಟುಂಬಗಳ ಬೆಳವಣಿಗೆಗೆ ಬ್ರೇಕ್ ಹಾಕಲು ನಂಜನಗೂಡು ತಾಲೂಕು ಆಡಳಿತ ಹೆಜ್ಜೆ ಹಾಕಿದೆ.ಇಂದು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ ಹಾಗೂ ಹುಲ್ಲಹಳ್ಳಿ ಠಾಣೆ ನಿರೀಕ್ಷಕರಾದ ಚ‌ಂದ್ರಶೇಖರ್ ಪಿಎಸ್ಸೈ ಚೇತನ್ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು.ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಸಿಬ್ಬಂದಿ ಹಾಗೂ ಮುಖ್ಯಸ್ಥರಿಗೆ ತಹಸೀಲ್ದಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.ಸಾಲ ನೀಡುವ ಮುನ್ನ ವಸೂಲಿ ಮಾಡುವ ರೀತಿಯನ್ನ ತಿಳಿಸುವುದು,ಒಬ್ಬಂಟಿ ಮಹಿಳೆ ಇರುವ ಮನೆಗಳಿಗೆ ಹೋಗಿ ಧಂಕಿ ಹಾಕುವುದನ್ನ ನಿಲ್ಲಿಸಬೇಕು,ಸಾಲ ಪಡೆಯುವಾಗ ಹೆಚ್ಚುವರಿ ಬಡ್ಡಿ ಹಾಕದಂತೆ,ಬಡ್ಡಿಯ ಮಾಹಿತಿಯನ್ನ ತಾಲೂಕು ದಂಡಾಧಿಕಾರಿಗಳು ಹಾಗೂ ಆರ್ ಬಿ ಐ ಗಮನಕ್ಕೆ ಸಂಪೂರ್ಣ ಮಾಹಿತಿ ನೀಡುವುದು,ಸಾಲವನ್ನ ಬಲವಂತವಾಗಿ ವಸೂಲಿ ಮಾಡದೆ ಕಾನೂನು ಬದ್ದವಾಗಿ ವಸೂಲಿ ಮಾಡುವಂತೆ,ಮನೆ ಮುಂದೆ ನಿಂತು ಗೌರವಕ್ಕೆ ಕುಂದು ತರುವ ಪ್ರಕ್ರಿಯೆ ನಿಲ್ಲಿಸಬೇಕು ಎಂಬುದೇ ಸೇರಿದಂತೆ ಇನ್ನಿತರ ಕಂಡೀಷನ್ ಗಳನ್ನ ಹಾಕಿ ವಾರ್ನಿಂಗ್ ನೀಡಿದ್ದಾರೆ.ಹಾಗೊಮ್ಮೆ ಕಿರುಕುಳ ನೀಡುವುದನ್ನ ಮುಂದುವರೆಸಿದ್ದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.ಇದೇ ವೇಳೆ ನಂಜನಗೂಡು ತಾಲೂಕಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮೈಕ್ರೋ ಫೈನಾನ್ಸ್ ಗಳ ಸಿಬ್ಬಂದಿಗಳ ಜೊತೆ ಸಭೆ ನಡೆಸಿ ಎಚ್ಚರಿಕೆ ನೀಡುವಂತೆ ಸಂದೇಶ ರವಾನಿಸಿದ್ದಾರೆ…

Spread the love

Related post

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ…

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ…

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ… ವಿರಾಜಪೇಟೆ,ಜೂ13,Tv10 ಕನ್ನಡ ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟ ಗಜರಾಜ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಮೂಡಿಸಿದ ಘಟನೆ ಕೊಡಗು…
ಕಾವೇರಿ ಆರತಿ,ಅಮ್ಯೂಸ್ ಮೆಂಟ್ ಪಾರ್ಕ್ ಗೆ ವಿರೋಧ…ರೈತರ ಪ್ರತಿಭಟನೆ…

ಕಾವೇರಿ ಆರತಿ,ಅಮ್ಯೂಸ್ ಮೆಂಟ್ ಪಾರ್ಕ್ ಗೆ ವಿರೋಧ…ರೈತರ ಪ್ರತಿಭಟನೆ…

ಮಂಡ್ಯ,ಜೂ12,Tv10 ಕನ್ನಡ ಕೆಆರ್ ಎಸ್ ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಗೆ ತೀವ್ರ ವಿರೋಧ ವ್ಯಕ್ತವಾಗಿದೆ.ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆದಿದೆ.ಕೆಆರ್ ಎಸ್ ಬೃಂದಾವನದ ಬಳಿ…
ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಇ ಆಫೀಸ್ ಕಚೇರಿ ಆರಂಭಕ್ಕೆ ಕ್ಷಣಗಣನೆ…ಸಿಬ್ಬಂದಿಗಳಿಗೆ ತರಬೇತಿ…

ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಇ ಆಫೀಸ್ ಕಚೇರಿ ಆರಂಭಕ್ಕೆ ಕ್ಷಣಗಣನೆ…ಸಿಬ್ಬಂದಿಗಳಿಗೆ ತರಬೇತಿ…

ಮೈಸೂರು,ಜೂ11,Tv10 ಕನ್ನಡ ಸರ್ಕಾರದ ಆದೇಶದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇ ಆಫೀಸ್ ವ್ಯವಸ್ಥೆ ಅನುಷ್ಠಾನಗೊಳಿಸುವುದು ಕಡ್ಡಾಯವಾಗಿದೆ.2021 ರಲ್ಲೇ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಅನುಷ್ಠಾನಗೊಳಿಸಲು ಮೈಸೂರು ಅಭಿವೃದ್ದಿ ಪ್ರಾಧಿಕಾರ…

Leave a Reply

Your email address will not be published. Required fields are marked *