ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಜೊತೆ ತಹಸೀಲ್ದಾರ್ ಸಭೆ…ಕಿರುಕುಳ ನೀಡದಂತೆ ಎಚ್ಚರಿಕೆ…

ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಜೊತೆ ತಹಸೀಲ್ದಾರ್ ಸಭೆ…ಕಿರುಕುಳ ನೀಡದಂತೆ ಎಚ್ಚರಿಕೆ…

ನಂಜನಗೂಡು,ಜ21,Tv10 ಕನ್ನಡ

ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಗ್ರಾಮ ತೊರೆಯುತ್ತಿರುವ ಕುಟುಂಬಗಳ ಬೆಳವಣಿಗೆಗೆ ಬ್ರೇಕ್ ಹಾಕಲು ನಂಜನಗೂಡು ತಾಲೂಕು ಆಡಳಿತ ಹೆಜ್ಜೆ ಹಾಕಿದೆ.ಇಂದು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ ಹಾಗೂ ಹುಲ್ಲಹಳ್ಳಿ ಠಾಣೆ ನಿರೀಕ್ಷಕರಾದ ಚ‌ಂದ್ರಶೇಖರ್ ಪಿಎಸ್ಸೈ ಚೇತನ್ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು.ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಸಿಬ್ಬಂದಿ ಹಾಗೂ ಮುಖ್ಯಸ್ಥರಿಗೆ ತಹಸೀಲ್ದಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.ಸಾಲ ನೀಡುವ ಮುನ್ನ ವಸೂಲಿ ಮಾಡುವ ರೀತಿಯನ್ನ ತಿಳಿಸುವುದು,ಒಬ್ಬಂಟಿ ಮಹಿಳೆ ಇರುವ ಮನೆಗಳಿಗೆ ಹೋಗಿ ಧಂಕಿ ಹಾಕುವುದನ್ನ ನಿಲ್ಲಿಸಬೇಕು,ಸಾಲ ಪಡೆಯುವಾಗ ಹೆಚ್ಚುವರಿ ಬಡ್ಡಿ ಹಾಕದಂತೆ,ಬಡ್ಡಿಯ ಮಾಹಿತಿಯನ್ನ ತಾಲೂಕು ದಂಡಾಧಿಕಾರಿಗಳು ಹಾಗೂ ಆರ್ ಬಿ ಐ ಗಮನಕ್ಕೆ ಸಂಪೂರ್ಣ ಮಾಹಿತಿ ನೀಡುವುದು,ಸಾಲವನ್ನ ಬಲವಂತವಾಗಿ ವಸೂಲಿ ಮಾಡದೆ ಕಾನೂನು ಬದ್ದವಾಗಿ ವಸೂಲಿ ಮಾಡುವಂತೆ,ಮನೆ ಮುಂದೆ ನಿಂತು ಗೌರವಕ್ಕೆ ಕುಂದು ತರುವ ಪ್ರಕ್ರಿಯೆ ನಿಲ್ಲಿಸಬೇಕು ಎಂಬುದೇ ಸೇರಿದಂತೆ ಇನ್ನಿತರ ಕಂಡೀಷನ್ ಗಳನ್ನ ಹಾಕಿ ವಾರ್ನಿಂಗ್ ನೀಡಿದ್ದಾರೆ.ಹಾಗೊಮ್ಮೆ ಕಿರುಕುಳ ನೀಡುವುದನ್ನ ಮುಂದುವರೆಸಿದ್ದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.ಇದೇ ವೇಳೆ ನಂಜನಗೂಡು ತಾಲೂಕಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮೈಕ್ರೋ ಫೈನಾನ್ಸ್ ಗಳ ಸಿಬ್ಬಂದಿಗಳ ಜೊತೆ ಸಭೆ ನಡೆಸಿ ಎಚ್ಚರಿಕೆ ನೀಡುವಂತೆ ಸಂದೇಶ ರವಾನಿಸಿದ್ದಾರೆ…

Spread the love

Related post

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು,ಏ17,Tv10 ಕನ್ನಡ ಮೈಸೂರು ವಿಶ್ವವಿದ್ಯಾನಿಲಯದ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕವಾಗಿದ್ದಾರೆ. ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ನಾಮ ನಿರ್ದೇಶಕರಾಗಿ ನೇಮಕವಾಗಿದ್ದಾರೆಂದು…
ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ…
ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮೈಸೂರು,ಏ16, ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ರಾಮಕೃಷ್ಣನಗರ ಹೆಚ್ ಬ್ಲಾಕ್ ನಲ್ಲಿ ನಡೆದಿದೆ.*ನಾನು ಯಾವತ್ತೋ ಸಾಯಬೇಕಿತ್ತು,ಈಗ ಆತ್ಮಹತ್ಯೆ…

Leave a Reply

Your email address will not be published. Required fields are marked *