ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…

ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…

ಮೈಸೂರು,ಜ28,Tv10 ಕನ್ನಡ

ಸಂಭಂಧಿಕನೊಬ್ಬ ವಿವಾಹಿತ ಮಹಿಳೆಯ ಫೋಟೋಸ್ ಕೆಟ್ಟದಾಗಿ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನೊಂದ ಮಹಿಳೆ ಯುವತಿ ಸೇರಿದಂತೆ ಮೂವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗುತ್ತಿದ್ದಂತೆಯೇ ಯುವತಿ ನೇಣಿಗೆ ಶರಣಾಗಿದ್ದಾಳೆ.ಎಡಿಟ್ ಮಾಡಿದ ಫೋಟೋಗಳು ಗಂಡನ ಮೊಬೈಲ್ ಗೆ ರವಾನೆ ಆಗುತ್ತಿದ್ದಂತೆಯೇ ವಿವಾಹಿತ ಮಹಿಳೆಯ ಸಂಸಾದಲ್ಲಿ ಬಿರುಕು ಮೂಡಿದೆ.ಸಂಭಂಧಿಕನೊಬ್ಬನ ಜೊತೆ ಮಹಿಳೆ ಮಾಡಿದ ಸ್ನೇಹದ ಪರಿಣಾಮ ಆಕೆಯ ಸಂಸಾರ ಬಿರುಗಾಳಿಗೆ ಸಿಲುಕಿದ ಹಡಗಿನಂತಾದರೆ ಮತ್ತೊಂದೆಡೆ ಓರ್ವ ಅಮಾಯಕಿ ಸಾವಿಗೆ ಕಾರಣವಾಗಿದೆ.

ವಿಜಯನಗರ ನಿವಾಸಿ ಕಾವೇರಿ ಹಾಗೂ ಗುಂಡ್ಲುಪೇಟೆ ನಿವಾಸಿ ನಂದೀಶ್ ಕುಮಾರ್ ನಡುವಿನ ಸ್ನೇಹ ಸಾಕಷ್ಟು ಎಡವಟ್ಟುಗಳಿಗೆ ಕಾರಣವಾಗಿದೆ.ಕಾವೇರಿಗೆ ನಂದೀಶ್ ಕುಮಾರ್ ದೂರದ ಸಂಭಂಧಿಕ.ಪರಿಚಯದಿಂದಾಗಿ ಹಿಂದೆ ಇಬ್ಬರೂ ಕೆಲವು ಫೋಟೋಗಳನ್ನ ತೆಗೆದುಕೊಂಡಿದ್ದಾರೆ.2023 ರಲ್ಲಿ ಕಾವೇರಿ ಶಿವು ಎಂಬಾತನ ಜೊತೆ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ರು.ಮದುವೆ ನಂತರ ಕಾವೇರಿಗೆ ನಂದೀಶ್ ಕುಮಾರ್ ತನ್ನ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಪೀಡಿಸಿದ್ದಾನೆ.ಇದನ್ನ ನಿರಾಕರಿಸಿದಾಗ ಹಿಂದೆ ಜೊತೆ ಇದ್ದ ಫೋಟೋಗಳನ್ನ ಎಡಿಟ್ ಮಾಡಿ ಗಂಡನಿಗೆ ಕಳುಹಿಸಿದ್ದಾನೆ.ನಾನುಬಕರೆದಾಗ ಬರಲಿಲ್ಲ ಅಂದ್ರೆ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾನೆ.ನಂದೀಶ್ವಕುಮಾರ್ ಟಾರ್ಚರ್ ಗೆ ಬೇಸತ್ತ ಕಾವೇರಿ ಕೆಲವು ದಿನಗಳ ಹಿಂದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ನಿನ್ನನ್ನು ಅನುಭವಿಸಲೇ ಬೇಕು ಇಲ್ಲದಿದ್ದಲ್ಲಿ ನಿನ್ನ ಗಂಡನ ಜೊತೆ ಸಂಸಾರ ಮಾಡಲು ಬಿಡುವುದಿಲ್ಲ ಎಂದು ಕಿರುಕುಳ ನೀಡುತ್ತಿದ್ದ ನಂದೀಶ್ ಕುಮಾರ್ ಹಾಗೂ ಬೆಂಬಲ ನೀಡುತ್ತಿರುವ ಮಹೇಶ್ ಮತ್ತು ಕೆಲವು ಫೋಟೋಗಳನ್ನ ನೀಡಿದ ಆರೋಪದ ಮೇಲೆ ಗುಂಡ್ಲುಪೇಟೆಯ ಕವನ ಎಂಬ ಯುವತಿ ಮೇಲೆ ಕಾವೇರಿ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

FIR ದಾಖಲಾಗುತ್ತಿದ್ದಂತೆಯೇ ಗುಂಡ್ಲುಪೇಟೆ ಚೆನ್ನಮಲ್ಲಿಪುರ ಗ್ರಾಮದಲ್ಲಿ ಯುವತಿ ಕವನ ನಾಲ್ಕು ಜನರ ಹೆಸರನ್ನ ಮನೆ ಬಾಗಿಲ ಮೇಲೆ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಈ ಸಂಭಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಕಾವೇರಿ ವಿರುದ್ದ ಪ್ರಕರಣ ದಾಖಲಾಗಿದೆ.ಒಟ್ಟಾರೆ ನಂದೀಶ್ ಕುಮಾರ್ ಎಡಿಟ್ ಮಾಡಿ ಬಿಟ್ಟ ಫೋಟೋಗಳು ತಂದ ಎಡವಟ್ಟು ಓರ್ವ ಯುವತಿಯನ್ನ ಬಲಿ ಪಡೆದಿದೆ.ಓರ್ವ ವಿವಾಹಿತ ಮಹಿಳೆ ಬಾಳಲ್ಲಿ ಬಿರುಗಾಳಿ ಬೀಸಿದಂತಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *