ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಮೈಸೂರು,ಫೆ1,Tv10 ಕನ್ನಡ

ವಿದೇಶಿ ಮಹಿಳೆಯ ಜೊತೆ ಸೆಲ್ಫೀ ತೆಗೆದುಕೊಳ್ಳುವ ಸಂಭಂಧ ಅಸಭ್ಯವಾಗಿ ವರ್ತಿಸಿದ ಊಬರ್ ಆಟೋ ಡ್ರೈವರ್ ಪೊಲೀಸರ ಅತಿಥಿಯಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಊಬರ್ ಆಟೋ ಡ್ರೈವರ್ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಸ್ಪೇನ್ ದೇಶದ ಮಹಿಳೆ ಮರಿಯಾ ನೋಯಲ್ ಕಟಲಡೋ ರೋಡ್ರಿಗ್ಸ್ ರವರು ಪ್ರಕರಣ ದಾಖಲಿಸಿದ್ದಾರೆ.

ಮರಿಯಾ ರೋಡ್ರಿಗ್ಸ್ ರವರು ನವೆಂಬರ್ ತಿಂಗಳಲ್ಲಿ ಯೋಗ ಟ್ರೈನಿಂಗ್ ಪಡೆಯಲು ಸ್ಪೇನ್ ದೇಶದಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದಿದ್ದು ಇನ್ಫೋಸಿಸ್ ಬಳಿ ಮನೆ ಬಾಡಿಗೆ ಪಡೆದು ತಂಗಿದ್ದಾರೆ.ಜನವರಿ 26 ರಂದು ಗೋಕುಲಂ ನಿಂದ ತಮ್ಮ ಮನೆಗೆ ತೆರಳಲು ಮರಿಯಾ ರೋಡ್ರಿಗ್ಸ್ ರವರು ಊಬರ್ ಆಟೋ ಬುಕ್ ಮಾಡಿದ್ದಾರೆ.KA09 -B 6216. ನೊಂದಣಿ ಸಂಖ್ಯೆಯ ಆಟೋ ಚಾಲಕ ರಂಜನ್ ವಿದೇಶಿ ಮಹಿಳೆಯನ್ನ ತನ್ನ ಆಟೋದಲ್ಲಿ ಕರೆದೊಯ್ಯುವಾಗ ಇನ್ಫೋಸಿಸ್ ಬಳಿ ಸೆಲ್ಫೀ ತೆಗೆಯಲು ಪ್ರಯತ್ನಿಸಿದ್ದಾನೆ.ಈ ಪ್ರಯತ್ನವನ್ನ ಮರಿಯಾ ರೋಡ್ರಿಗ್ಸ್ ವಿರೋಧಿಸಿದ್ದಾರೆ.ನಂತರ ಆಟೋದಿಂದ ಇಳಿದ ರಂಜನ್ ವಿದೇಶಿ ಮಹಿಳೆಯನ್ನ ಹೊರಕ್ಕೆ ಎಳೆಯುವ ಪ್ರಯತ್ನ ಮಾಡಿ ನಂತರ ತಾನೇ ಆಕೆಯ ಪಕ್ಕದಲ್ಲಿ ಕುಳಿತು ಬುಜಗಳ ಮೇಲೆ ಕೈ ಹಾಕಿ ಬಕವಂತವಾಗಿ ಸೆಲ್ಪೀ ತೆಗೆದಿದ್ದಾನೆ.ಈ ವೇಳೆ ಆಕೆಗೆ ಮುತ್ತು ಕೊಡುವ ಪ್ರಯತ್ನ ಮಾಡಿ ವಿರೋಧಿಸುತ್ತಿದ್ದರೂ ಬಿಡದೆ ಬಕವಂತವಾಗಿ ಸೆಲ್ಪೀ ತೆಗೆದುಕೊಂಡಿದ್ದಾನೆ.ಇವೆಲ್ಲಾ ಬೆಳವಣಿಗೆ ನಂತರ ಫೋನ್ ಆಕೆಗೆ ಫೋನ್ ನಂಬರ್ ನೀಡಿ ಮಸಾಜ್ ಬೇಕಿದ್ದಲ್ಲಿ ಕರೆಯಿರಿ ಎಂದು ಅಸಭ್ಯವಾಗಿ ಮಾತನಾಡಿದ್ದಾನೆ.ರಂಜನ್ ಕಪಿಮುಷ್ಠಿಯಿಂದ ಬಿಡಿಸಿಕೊಂಡ ಮರಿಯಾ ರೋಡ್ರಿಗ್ಸ್ ಊಬರ್ ಕಂಪನಿಗೆ ದೂರು ನೀಡಿ ನಂತರ ಹೆಬ್ಬಾಳ್ ಠಾಣೆಗೆ ಬಂದು ರಂಜನ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ವಿದೇಶಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *