ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಮೈಸೂರು,ಫೆ1,Tv10 ಕನ್ನಡ

ವಿದೇಶಿ ಮಹಿಳೆಯ ಜೊತೆ ಸೆಲ್ಫೀ ತೆಗೆದುಕೊಳ್ಳುವ ಸಂಭಂಧ ಅಸಭ್ಯವಾಗಿ ವರ್ತಿಸಿದ ಊಬರ್ ಆಟೋ ಡ್ರೈವರ್ ಪೊಲೀಸರ ಅತಿಥಿಯಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಊಬರ್ ಆಟೋ ಡ್ರೈವರ್ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಸ್ಪೇನ್ ದೇಶದ ಮಹಿಳೆ ಮರಿಯಾ ನೋಯಲ್ ಕಟಲಡೋ ರೋಡ್ರಿಗ್ಸ್ ರವರು ಪ್ರಕರಣ ದಾಖಲಿಸಿದ್ದಾರೆ.

ಮರಿಯಾ ರೋಡ್ರಿಗ್ಸ್ ರವರು ನವೆಂಬರ್ ತಿಂಗಳಲ್ಲಿ ಯೋಗ ಟ್ರೈನಿಂಗ್ ಪಡೆಯಲು ಸ್ಪೇನ್ ದೇಶದಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದಿದ್ದು ಇನ್ಫೋಸಿಸ್ ಬಳಿ ಮನೆ ಬಾಡಿಗೆ ಪಡೆದು ತಂಗಿದ್ದಾರೆ.ಜನವರಿ 26 ರಂದು ಗೋಕುಲಂ ನಿಂದ ತಮ್ಮ ಮನೆಗೆ ತೆರಳಲು ಮರಿಯಾ ರೋಡ್ರಿಗ್ಸ್ ರವರು ಊಬರ್ ಆಟೋ ಬುಕ್ ಮಾಡಿದ್ದಾರೆ.KA09 -B 6216. ನೊಂದಣಿ ಸಂಖ್ಯೆಯ ಆಟೋ ಚಾಲಕ ರಂಜನ್ ವಿದೇಶಿ ಮಹಿಳೆಯನ್ನ ತನ್ನ ಆಟೋದಲ್ಲಿ ಕರೆದೊಯ್ಯುವಾಗ ಇನ್ಫೋಸಿಸ್ ಬಳಿ ಸೆಲ್ಫೀ ತೆಗೆಯಲು ಪ್ರಯತ್ನಿಸಿದ್ದಾನೆ.ಈ ಪ್ರಯತ್ನವನ್ನ ಮರಿಯಾ ರೋಡ್ರಿಗ್ಸ್ ವಿರೋಧಿಸಿದ್ದಾರೆ.ನಂತರ ಆಟೋದಿಂದ ಇಳಿದ ರಂಜನ್ ವಿದೇಶಿ ಮಹಿಳೆಯನ್ನ ಹೊರಕ್ಕೆ ಎಳೆಯುವ ಪ್ರಯತ್ನ ಮಾಡಿ ನಂತರ ತಾನೇ ಆಕೆಯ ಪಕ್ಕದಲ್ಲಿ ಕುಳಿತು ಬುಜಗಳ ಮೇಲೆ ಕೈ ಹಾಕಿ ಬಕವಂತವಾಗಿ ಸೆಲ್ಪೀ ತೆಗೆದಿದ್ದಾನೆ.ಈ ವೇಳೆ ಆಕೆಗೆ ಮುತ್ತು ಕೊಡುವ ಪ್ರಯತ್ನ ಮಾಡಿ ವಿರೋಧಿಸುತ್ತಿದ್ದರೂ ಬಿಡದೆ ಬಕವಂತವಾಗಿ ಸೆಲ್ಪೀ ತೆಗೆದುಕೊಂಡಿದ್ದಾನೆ.ಇವೆಲ್ಲಾ ಬೆಳವಣಿಗೆ ನಂತರ ಫೋನ್ ಆಕೆಗೆ ಫೋನ್ ನಂಬರ್ ನೀಡಿ ಮಸಾಜ್ ಬೇಕಿದ್ದಲ್ಲಿ ಕರೆಯಿರಿ ಎಂದು ಅಸಭ್ಯವಾಗಿ ಮಾತನಾಡಿದ್ದಾನೆ.ರಂಜನ್ ಕಪಿಮುಷ್ಠಿಯಿಂದ ಬಿಡಿಸಿಕೊಂಡ ಮರಿಯಾ ರೋಡ್ರಿಗ್ಸ್ ಊಬರ್ ಕಂಪನಿಗೆ ದೂರು ನೀಡಿ ನಂತರ ಹೆಬ್ಬಾಳ್ ಠಾಣೆಗೆ ಬಂದು ರಂಜನ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ವಿದೇಶಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು,ಏ17,Tv10 ಕನ್ನಡ ಮೈಸೂರು ವಿಶ್ವವಿದ್ಯಾನಿಲಯದ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕವಾಗಿದ್ದಾರೆ. ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ನಾಮ ನಿರ್ದೇಶಕರಾಗಿ ನೇಮಕವಾಗಿದ್ದಾರೆಂದು…
ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ…
ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮೈಸೂರು,ಏ16, ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ರಾಮಕೃಷ್ಣನಗರ ಹೆಚ್ ಬ್ಲಾಕ್ ನಲ್ಲಿ ನಡೆದಿದೆ.*ನಾನು ಯಾವತ್ತೋ ಸಾಯಬೇಕಿತ್ತು,ಈಗ ಆತ್ಮಹತ್ಯೆ…

Leave a Reply

Your email address will not be published. Required fields are marked *