ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಮೈಸೂರು,ಫೆ1,Tv10 ಕನ್ನಡ

ವಿದೇಶಿ ಮಹಿಳೆಯ ಜೊತೆ ಸೆಲ್ಫೀ ತೆಗೆದುಕೊಳ್ಳುವ ಸಂಭಂಧ ಅಸಭ್ಯವಾಗಿ ವರ್ತಿಸಿದ ಊಬರ್ ಆಟೋ ಡ್ರೈವರ್ ಪೊಲೀಸರ ಅತಿಥಿಯಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಊಬರ್ ಆಟೋ ಡ್ರೈವರ್ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಸ್ಪೇನ್ ದೇಶದ ಮಹಿಳೆ ಮರಿಯಾ ನೋಯಲ್ ಕಟಲಡೋ ರೋಡ್ರಿಗ್ಸ್ ರವರು ಪ್ರಕರಣ ದಾಖಲಿಸಿದ್ದಾರೆ.

ಮರಿಯಾ ರೋಡ್ರಿಗ್ಸ್ ರವರು ನವೆಂಬರ್ ತಿಂಗಳಲ್ಲಿ ಯೋಗ ಟ್ರೈನಿಂಗ್ ಪಡೆಯಲು ಸ್ಪೇನ್ ದೇಶದಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದಿದ್ದು ಇನ್ಫೋಸಿಸ್ ಬಳಿ ಮನೆ ಬಾಡಿಗೆ ಪಡೆದು ತಂಗಿದ್ದಾರೆ.ಜನವರಿ 26 ರಂದು ಗೋಕುಲಂ ನಿಂದ ತಮ್ಮ ಮನೆಗೆ ತೆರಳಲು ಮರಿಯಾ ರೋಡ್ರಿಗ್ಸ್ ರವರು ಊಬರ್ ಆಟೋ ಬುಕ್ ಮಾಡಿದ್ದಾರೆ.KA09 -B 6216. ನೊಂದಣಿ ಸಂಖ್ಯೆಯ ಆಟೋ ಚಾಲಕ ರಂಜನ್ ವಿದೇಶಿ ಮಹಿಳೆಯನ್ನ ತನ್ನ ಆಟೋದಲ್ಲಿ ಕರೆದೊಯ್ಯುವಾಗ ಇನ್ಫೋಸಿಸ್ ಬಳಿ ಸೆಲ್ಫೀ ತೆಗೆಯಲು ಪ್ರಯತ್ನಿಸಿದ್ದಾನೆ.ಈ ಪ್ರಯತ್ನವನ್ನ ಮರಿಯಾ ರೋಡ್ರಿಗ್ಸ್ ವಿರೋಧಿಸಿದ್ದಾರೆ.ನಂತರ ಆಟೋದಿಂದ ಇಳಿದ ರಂಜನ್ ವಿದೇಶಿ ಮಹಿಳೆಯನ್ನ ಹೊರಕ್ಕೆ ಎಳೆಯುವ ಪ್ರಯತ್ನ ಮಾಡಿ ನಂತರ ತಾನೇ ಆಕೆಯ ಪಕ್ಕದಲ್ಲಿ ಕುಳಿತು ಬುಜಗಳ ಮೇಲೆ ಕೈ ಹಾಕಿ ಬಕವಂತವಾಗಿ ಸೆಲ್ಪೀ ತೆಗೆದಿದ್ದಾನೆ.ಈ ವೇಳೆ ಆಕೆಗೆ ಮುತ್ತು ಕೊಡುವ ಪ್ರಯತ್ನ ಮಾಡಿ ವಿರೋಧಿಸುತ್ತಿದ್ದರೂ ಬಿಡದೆ ಬಕವಂತವಾಗಿ ಸೆಲ್ಪೀ ತೆಗೆದುಕೊಂಡಿದ್ದಾನೆ.ಇವೆಲ್ಲಾ ಬೆಳವಣಿಗೆ ನಂತರ ಫೋನ್ ಆಕೆಗೆ ಫೋನ್ ನಂಬರ್ ನೀಡಿ ಮಸಾಜ್ ಬೇಕಿದ್ದಲ್ಲಿ ಕರೆಯಿರಿ ಎಂದು ಅಸಭ್ಯವಾಗಿ ಮಾತನಾಡಿದ್ದಾನೆ.ರಂಜನ್ ಕಪಿಮುಷ್ಠಿಯಿಂದ ಬಿಡಿಸಿಕೊಂಡ ಮರಿಯಾ ರೋಡ್ರಿಗ್ಸ್ ಊಬರ್ ಕಂಪನಿಗೆ ದೂರು ನೀಡಿ ನಂತರ ಹೆಬ್ಬಾಳ್ ಠಾಣೆಗೆ ಬಂದು ರಂಜನ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ವಿದೇಶಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *