ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಮೈಸೂರು,ಫೆ1,Tv10 ಕನ್ನಡ

ವಿದೇಶಿ ಮಹಿಳೆಯ ಜೊತೆ ಸೆಲ್ಫೀ ತೆಗೆದುಕೊಳ್ಳುವ ಸಂಭಂಧ ಅಸಭ್ಯವಾಗಿ ವರ್ತಿಸಿದ ಊಬರ್ ಆಟೋ ಡ್ರೈವರ್ ಪೊಲೀಸರ ಅತಿಥಿಯಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಊಬರ್ ಆಟೋ ಡ್ರೈವರ್ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಸ್ಪೇನ್ ದೇಶದ ಮಹಿಳೆ ಮರಿಯಾ ನೋಯಲ್ ಕಟಲಡೋ ರೋಡ್ರಿಗ್ಸ್ ರವರು ಪ್ರಕರಣ ದಾಖಲಿಸಿದ್ದಾರೆ.

ಮರಿಯಾ ರೋಡ್ರಿಗ್ಸ್ ರವರು ನವೆಂಬರ್ ತಿಂಗಳಲ್ಲಿ ಯೋಗ ಟ್ರೈನಿಂಗ್ ಪಡೆಯಲು ಸ್ಪೇನ್ ದೇಶದಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದಿದ್ದು ಇನ್ಫೋಸಿಸ್ ಬಳಿ ಮನೆ ಬಾಡಿಗೆ ಪಡೆದು ತಂಗಿದ್ದಾರೆ.ಜನವರಿ 26 ರಂದು ಗೋಕುಲಂ ನಿಂದ ತಮ್ಮ ಮನೆಗೆ ತೆರಳಲು ಮರಿಯಾ ರೋಡ್ರಿಗ್ಸ್ ರವರು ಊಬರ್ ಆಟೋ ಬುಕ್ ಮಾಡಿದ್ದಾರೆ.KA09 -B 6216. ನೊಂದಣಿ ಸಂಖ್ಯೆಯ ಆಟೋ ಚಾಲಕ ರಂಜನ್ ವಿದೇಶಿ ಮಹಿಳೆಯನ್ನ ತನ್ನ ಆಟೋದಲ್ಲಿ ಕರೆದೊಯ್ಯುವಾಗ ಇನ್ಫೋಸಿಸ್ ಬಳಿ ಸೆಲ್ಫೀ ತೆಗೆಯಲು ಪ್ರಯತ್ನಿಸಿದ್ದಾನೆ.ಈ ಪ್ರಯತ್ನವನ್ನ ಮರಿಯಾ ರೋಡ್ರಿಗ್ಸ್ ವಿರೋಧಿಸಿದ್ದಾರೆ.ನಂತರ ಆಟೋದಿಂದ ಇಳಿದ ರಂಜನ್ ವಿದೇಶಿ ಮಹಿಳೆಯನ್ನ ಹೊರಕ್ಕೆ ಎಳೆಯುವ ಪ್ರಯತ್ನ ಮಾಡಿ ನಂತರ ತಾನೇ ಆಕೆಯ ಪಕ್ಕದಲ್ಲಿ ಕುಳಿತು ಬುಜಗಳ ಮೇಲೆ ಕೈ ಹಾಕಿ ಬಕವಂತವಾಗಿ ಸೆಲ್ಪೀ ತೆಗೆದಿದ್ದಾನೆ.ಈ ವೇಳೆ ಆಕೆಗೆ ಮುತ್ತು ಕೊಡುವ ಪ್ರಯತ್ನ ಮಾಡಿ ವಿರೋಧಿಸುತ್ತಿದ್ದರೂ ಬಿಡದೆ ಬಕವಂತವಾಗಿ ಸೆಲ್ಪೀ ತೆಗೆದುಕೊಂಡಿದ್ದಾನೆ.ಇವೆಲ್ಲಾ ಬೆಳವಣಿಗೆ ನಂತರ ಫೋನ್ ಆಕೆಗೆ ಫೋನ್ ನಂಬರ್ ನೀಡಿ ಮಸಾಜ್ ಬೇಕಿದ್ದಲ್ಲಿ ಕರೆಯಿರಿ ಎಂದು ಅಸಭ್ಯವಾಗಿ ಮಾತನಾಡಿದ್ದಾನೆ.ರಂಜನ್ ಕಪಿಮುಷ್ಠಿಯಿಂದ ಬಿಡಿಸಿಕೊಂಡ ಮರಿಯಾ ರೋಡ್ರಿಗ್ಸ್ ಊಬರ್ ಕಂಪನಿಗೆ ದೂರು ನೀಡಿ ನಂತರ ಹೆಬ್ಬಾಳ್ ಠಾಣೆಗೆ ಬಂದು ರಂಜನ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ವಿದೇಶಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *