ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಮೈಸೂರು,ಫೆ1,Tv10 ಕನ್ನಡ

ವಿದೇಶಿ ಮಹಿಳೆಯ ಜೊತೆ ಸೆಲ್ಫೀ ತೆಗೆದುಕೊಳ್ಳುವ ಸಂಭಂಧ ಅಸಭ್ಯವಾಗಿ ವರ್ತಿಸಿದ ಊಬರ್ ಆಟೋ ಡ್ರೈವರ್ ಪೊಲೀಸರ ಅತಿಥಿಯಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಊಬರ್ ಆಟೋ ಡ್ರೈವರ್ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಸ್ಪೇನ್ ದೇಶದ ಮಹಿಳೆ ಮರಿಯಾ ನೋಯಲ್ ಕಟಲಡೋ ರೋಡ್ರಿಗ್ಸ್ ರವರು ಪ್ರಕರಣ ದಾಖಲಿಸಿದ್ದಾರೆ.

ಮರಿಯಾ ರೋಡ್ರಿಗ್ಸ್ ರವರು ನವೆಂಬರ್ ತಿಂಗಳಲ್ಲಿ ಯೋಗ ಟ್ರೈನಿಂಗ್ ಪಡೆಯಲು ಸ್ಪೇನ್ ದೇಶದಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದಿದ್ದು ಇನ್ಫೋಸಿಸ್ ಬಳಿ ಮನೆ ಬಾಡಿಗೆ ಪಡೆದು ತಂಗಿದ್ದಾರೆ.ಜನವರಿ 26 ರಂದು ಗೋಕುಲಂ ನಿಂದ ತಮ್ಮ ಮನೆಗೆ ತೆರಳಲು ಮರಿಯಾ ರೋಡ್ರಿಗ್ಸ್ ರವರು ಊಬರ್ ಆಟೋ ಬುಕ್ ಮಾಡಿದ್ದಾರೆ.KA09 -B 6216. ನೊಂದಣಿ ಸಂಖ್ಯೆಯ ಆಟೋ ಚಾಲಕ ರಂಜನ್ ವಿದೇಶಿ ಮಹಿಳೆಯನ್ನ ತನ್ನ ಆಟೋದಲ್ಲಿ ಕರೆದೊಯ್ಯುವಾಗ ಇನ್ಫೋಸಿಸ್ ಬಳಿ ಸೆಲ್ಫೀ ತೆಗೆಯಲು ಪ್ರಯತ್ನಿಸಿದ್ದಾನೆ.ಈ ಪ್ರಯತ್ನವನ್ನ ಮರಿಯಾ ರೋಡ್ರಿಗ್ಸ್ ವಿರೋಧಿಸಿದ್ದಾರೆ.ನಂತರ ಆಟೋದಿಂದ ಇಳಿದ ರಂಜನ್ ವಿದೇಶಿ ಮಹಿಳೆಯನ್ನ ಹೊರಕ್ಕೆ ಎಳೆಯುವ ಪ್ರಯತ್ನ ಮಾಡಿ ನಂತರ ತಾನೇ ಆಕೆಯ ಪಕ್ಕದಲ್ಲಿ ಕುಳಿತು ಬುಜಗಳ ಮೇಲೆ ಕೈ ಹಾಕಿ ಬಕವಂತವಾಗಿ ಸೆಲ್ಪೀ ತೆಗೆದಿದ್ದಾನೆ.ಈ ವೇಳೆ ಆಕೆಗೆ ಮುತ್ತು ಕೊಡುವ ಪ್ರಯತ್ನ ಮಾಡಿ ವಿರೋಧಿಸುತ್ತಿದ್ದರೂ ಬಿಡದೆ ಬಕವಂತವಾಗಿ ಸೆಲ್ಪೀ ತೆಗೆದುಕೊಂಡಿದ್ದಾನೆ.ಇವೆಲ್ಲಾ ಬೆಳವಣಿಗೆ ನಂತರ ಫೋನ್ ಆಕೆಗೆ ಫೋನ್ ನಂಬರ್ ನೀಡಿ ಮಸಾಜ್ ಬೇಕಿದ್ದಲ್ಲಿ ಕರೆಯಿರಿ ಎಂದು ಅಸಭ್ಯವಾಗಿ ಮಾತನಾಡಿದ್ದಾನೆ.ರಂಜನ್ ಕಪಿಮುಷ್ಠಿಯಿಂದ ಬಿಡಿಸಿಕೊಂಡ ಮರಿಯಾ ರೋಡ್ರಿಗ್ಸ್ ಊಬರ್ ಕಂಪನಿಗೆ ದೂರು ನೀಡಿ ನಂತರ ಹೆಬ್ಬಾಳ್ ಠಾಣೆಗೆ ಬಂದು ರಂಜನ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ವಿದೇಶಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *