
ನಕಲಿ ದಾಖಲೆ ಸೃಷ್ಟಿಸಿ ಐಸಿಐಸಿಐ ಬ್ಯಾಂಕ್ ಗೆ ಧೋಖಾ…ನಾಲ್ವರು ಮಧ್ಯವರ್ತಿಗಳು ಸೇರಿದಂತೆ ಇತರರ ಮೇಲೆ FIR ದಾಖಲು…1.09 ಕೋಟಿ ವಂಚನೆ…
- TV10 Kannada Exclusive
- February 1, 2025
- No Comment
- 348
ಮೈಸೂರು,ಫೆ1,Tv10 ಕನ್ನಡ
ನಕಲಿ ದಾಖಲೆ ಸೃಷ್ಟಿಸಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್ ಗೆ 1.09 ಕೋಟಿ ಗೆ ವಂಚನೆ ಎಸಗಿದ ಆರೋಪದ ಮೇಲೆ ನಾಲ್ವರು ಮಧ್ಯವರ್ತಿಗಳು ಸೇರಿದಂತೆ ಹಲವರ ಮೇಲೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಧ್ಯವರ್ತಿಗಳಾದ ಸುಶೀಲ್ ಕುಮಾರ್,ವರದರಾಜನ್,ಪುಟ್ಟಸ್ವಾಮಿ ಬ್ಯಾಂಕ್ ನ ಹೊರಗುತ್ತಿಗೆ ನೌಕರ ನಿಮಿಷ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಾಗಿದೆ.ಬ್ಯಾಂಕ್ ವ್ಯವಸ್ಥಾಪಕರಾದ ಏಕಾಂತ್ ಪ್ರಕರಣ ದಾಖಲಿಸಿದ್ದಾರೆ.
ಗೀತಾ ಎಂಬುವರು ಜಯಲಕ್ಷ್ಮಿಪುರಂ ಸ್ವತ್ತು ನಂ 23 ಮೇಲೆ ಲ್ಯಾಂಡ್ ಲೋನ್ ಅಪೇಕ್ಷಿಸಿ 1-07-2021 ರಂದು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.ಬ್ಯಾಂಕ್ ಸಿಬ್ಬಂದಿಗಳು ವಕೀಲರ ಬಳಿ ಲೀಗಲ್ ಸಲಹೆ ಪಡೆದು ವಾಲ್ಯುಏಷನ್ ರಿಪೋರ್ಟ್ ಆಧಾರದ ಮೇಲೆ 1,65,00,000/- ಸಾಲ ನೀಡಿದ್ದಾರೆ.ಮೈಸೂರು ದಕ್ಷಿಣ ಉಪನೊಂದಣಾಧಿಕಾರಿ ಕಚೇರಿಯಲ್ಲಿ 1 ನೇ ಪುಸ್ತಕ ನಂ1 Mys-1-01451-2021-22 ರಲ್ಲಿ ನೊಂದಣಿ ಆಗಿದೆ.ಬ್ಯಾಂಕ್ ನ ಹೊರಗುತ್ತಿಗೆ ನೌಕರ ನಿಮಿಷ್ ರವರು ಸ್ವತ್ತಿನ ಮಾರಾಟಗಾರರಾದ ಪುಟ್ಟರಾಜು ರವರಿಗೆ ಚೆಕ್ ನೀಡಿ ದಾಖಲೆಗಳನ್ನ ಪಡೆದಿದ್ದಾರೆ.ಆಗಸ್ಟ್ 23 ರ ವರೆಗೆ ಗೀತಾ ರವರು ಸಾಲದ ಕಂತು ಕಟ್ಟಿ ನಂತರ ಸ್ಥಗಿತಗೊಳಿಸಿದ್ದಾರೆ.ಬ್ಯಾಂಕ್ ಸಿಬ್ಬಂದಿಗಳು ಸಾಲ ಮರುಪಾವತಿಸುವಂತೆ ತಿಳಿಸಿದಾಗ ತಾವು ಮೋಸ ಹೋಗಿರುವುದಾಗಿ ಗೀತಾ ತಿಳಿಸಿದ್ದಾರೆ.ಬ್ಯಾಂಕ್ ನವರು ಪರಿಶೀಲನೆ ಮಾಡಿದಾಗ ನೊಂದಣಿ ಆದ ದಾಖಲೆಯಲ್ಲಿ ಸದರಿ ಪುಸ್ತಕದಲ್ಲಿ ಶ್ವೇತಾ ಮೋಹನ್ ಕುಟ್ಟಂಡ ಹೆಸರಿನಲ್ಲಿ ಸ್ವತ್ತು ನೊಂದಣಿ ಆಗಿರುವುದು ಕಂಡುಬಂದಿದೆ.ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿದಾಗ ಮಧ್ಯವರ್ತಿಗಳಾದ ಸುಶೀಲ್ ಕುಮಾರ್ ನಕಲಿ ದಾಖಲೆಗಳನ್ನ ಸೃಷ್ಟಿಸಿ ಯಾಮಾರಿಸಿರುವುದು ಬೆಳಕಿಗೆ ಬಂದಿದೆ.ಪುಟ್ಟರಾಜು ರವರು ಚೆಕ್ ಪಡೆದು ವರದರಾಜನ್,ವಿಕಾಸಿನಿ ಸೇರದಂತೆ ಹಲವರ ಹೆಸರಲ್ಲಿ ಹಣ ಡ್ರಾ ಮಾಡಿರುವುದು ಕಂಡು ಬಂದಿದೆ.ಇದೀಗ ಗೀತಾ ರವರು ಬ್ಯಾಂಕ್ ಗೆ ಅಸಲು 97,70,391/- ಜೊತೆಗೆ ಬಡ್ಡಿ ಸೇರಿ 1,09,10,780/- ರೂ ಬಾಕಿ ಉಳಿಸಿಕೊಂಡಿದ್ದಾರೆ.ಗೀತಾ ರವರಿಂದ ಹಣ ಮರುಪಾವತಿ ಆಗದ ಹಿನ್ನಲೆ ಬ್ಯಾಂಕ್ ಮ್ಯಾನೇಜರ್ ಏಕಾಂತ್ ಮಧ್ಯವರ್ತಿಗಳ ವಿರುದ್ದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…