ನಕಲಿ ದಾಖಲೆ ಸೃಷ್ಟಿಸಿ ಐಸಿಐಸಿಐ ಬ್ಯಾಂಕ್ ಗೆ ಧೋಖಾ…ನಾಲ್ವರು ಮಧ್ಯವರ್ತಿಗಳು ಸೇರಿದಂತೆ ಇತರರ ಮೇಲೆ FIR ದಾಖಲು…1.09 ಕೋಟಿ ವಂಚನೆ…

ನಕಲಿ ದಾಖಲೆ ಸೃಷ್ಟಿಸಿ ಐಸಿಐಸಿಐ ಬ್ಯಾಂಕ್ ಗೆ ಧೋಖಾ…ನಾಲ್ವರು ಮಧ್ಯವರ್ತಿಗಳು ಸೇರಿದಂತೆ ಇತರರ ಮೇಲೆ FIR ದಾಖಲು…1.09 ಕೋಟಿ ವಂಚನೆ…

ಮೈಸೂರು,ಫೆ1,Tv10 ಕನ್ನಡ

ನಕಲಿ ದಾಖಲೆ ಸೃಷ್ಟಿಸಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್ ಗೆ 1.09 ಕೋಟಿ ಗೆ ವಂಚನೆ ಎಸಗಿದ ಆರೋಪದ ಮೇಲೆ ನಾಲ್ವರು ಮಧ್ಯವರ್ತಿಗಳು ಸೇರಿದಂತೆ ಹಲವರ ಮೇಲೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಧ್ಯವರ್ತಿಗಳಾದ ಸುಶೀಲ್ ಕುಮಾರ್,ವರದರಾಜನ್,ಪುಟ್ಟಸ್ವಾಮಿ ಬ್ಯಾಂಕ್ ನ ಹೊರಗುತ್ತಿಗೆ ನೌಕರ ನಿಮಿಷ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಾಗಿದೆ.ಬ್ಯಾಂಕ್ ವ್ಯವಸ್ಥಾಪಕರಾದ ಏಕಾಂತ್ ಪ್ರಕರಣ ದಾಖಲಿಸಿದ್ದಾರೆ.

ಗೀತಾ ಎಂಬುವರು ಜಯಲಕ್ಷ್ಮಿಪುರಂ ಸ್ವತ್ತು ನಂ 23 ಮೇಲೆ ಲ್ಯಾಂಡ್ ಲೋನ್ ಅಪೇಕ್ಷಿಸಿ 1-07-2021 ರಂದು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.ಬ್ಯಾಂಕ್ ಸಿಬ್ಬಂದಿಗಳು ವಕೀಲರ ಬಳಿ ಲೀಗಲ್ ಸಲಹೆ ಪಡೆದು ವಾಲ್ಯುಏಷನ್ ರಿಪೋರ್ಟ್ ಆಧಾರದ ಮೇಲೆ 1,65,00,000/- ಸಾಲ ನೀಡಿದ್ದಾರೆ.ಮೈಸೂರು ದಕ್ಷಿಣ ಉಪನೊಂದಣಾಧಿಕಾರಿ ಕಚೇರಿಯಲ್ಲಿ 1 ನೇ ಪುಸ್ತಕ ನಂ1 Mys-1-01451-2021-22 ರಲ್ಲಿ ನೊಂದಣಿ ಆಗಿದೆ.ಬ್ಯಾಂಕ್ ನ ಹೊರಗುತ್ತಿಗೆ ನೌಕರ ನಿಮಿಷ್ ರವರು ಸ್ವತ್ತಿನ ಮಾರಾಟಗಾರರಾದ ಪುಟ್ಟರಾಜು ರವರಿಗೆ ಚೆಕ್ ನೀಡಿ ದಾಖಲೆಗಳನ್ನ ಪಡೆದಿದ್ದಾರೆ.ಆಗಸ್ಟ್ 23 ರ ವರೆಗೆ ಗೀತಾ ರವರು ಸಾಲದ ಕಂತು ಕಟ್ಟಿ ನಂತರ ಸ್ಥಗಿತಗೊಳಿಸಿದ್ದಾರೆ.ಬ್ಯಾಂಕ್ ಸಿಬ್ಬಂದಿಗಳು ಸಾಲ ಮರುಪಾವತಿಸುವಂತೆ ತಿಳಿಸಿದಾಗ ತಾವು ಮೋಸ ಹೋಗಿರುವುದಾಗಿ ಗೀತಾ ತಿಳಿಸಿದ್ದಾರೆ.ಬ್ಯಾಂಕ್ ನವರು ಪರಿಶೀಲನೆ ಮಾಡಿದಾಗ ನೊಂದಣಿ ಆದ ದಾಖಲೆಯಲ್ಲಿ ಸದರಿ ಪುಸ್ತಕದಲ್ಲಿ ಶ್ವೇತಾ ಮೋಹನ್ ಕುಟ್ಟಂಡ ಹೆಸರಿನಲ್ಲಿ ಸ್ವತ್ತು ನೊಂದಣಿ ಆಗಿರುವುದು ಕಂಡುಬಂದಿದೆ.ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿದಾಗ ಮಧ್ಯವರ್ತಿಗಳಾದ ಸುಶೀಲ್ ಕುಮಾರ್ ನಕಲಿ ದಾಖಲೆಗಳನ್ನ ಸೃಷ್ಟಿಸಿ ಯಾಮಾರಿಸಿರುವುದು ಬೆಳಕಿಗೆ ಬಂದಿದೆ.ಪುಟ್ಟರಾಜು ರವರು ಚೆಕ್ ಪಡೆದು ವರದರಾಜನ್,ವಿಕಾಸಿನಿ ಸೇರದಂತೆ ಹಲವರ ಹೆಸರಲ್ಲಿ ಹಣ ಡ್ರಾ ಮಾಡಿರುವುದು ಕಂಡು ಬಂದಿದೆ.ಇದೀಗ ಗೀತಾ ರವರು ಬ್ಯಾಂಕ್ ಗೆ ಅಸಲು 97,70,391/- ಜೊತೆಗೆ ಬಡ್ಡಿ ಸೇರಿ 1,09,10,780/- ರೂ ಬಾಕಿ ಉಳಿಸಿಕೊಂಡಿದ್ದಾರೆ.ಗೀತಾ ರವರಿಂದ ಹಣ ಮರುಪಾವತಿ ಆಗದ ಹಿನ್ನಲೆ ಬ್ಯಾಂಕ್ ಮ್ಯಾನೇಜರ್ ಏಕಾಂತ್ ಮಧ್ಯವರ್ತಿಗಳ ವಿರುದ್ದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *