ಕೇಂದ್ರ ಸರ್ಕಾರದ ಬಜೆಟ್ ವಿರುದ್ದ ಆಕ್ರೋಷ…ಮೈಸೂರು ಕನ್ನಡ ವೇದಿಕೆ ವತಿಯಿಂದ ತೆಂಗಿನ ಚಿಪ್ಪು ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರದ ಬಜೆಟ್ ವಿರುದ್ದ ಆಕ್ರೋಷ…ಮೈಸೂರು ಕನ್ನಡ ವೇದಿಕೆ ವತಿಯಿಂದ ತೆಂಗಿನ ಚಿಪ್ಪು ಹಿಡಿದು ಪ್ರತಿಭಟನೆ

ಮೈಸೂರು,ಫೆ4,Tv10 ಕನ್ನಡ

ಉತ್ತರ ಭಾರತಕ್ಕೆ ಬೆಣ್ಣೆ ದಕ್ಷಿಣ ಭಾರತದ ಬಿಜೆಪಿ ಹೆಚ್ಚಾಗಿರುವ ಕರ್ನಾಟಕಕ್ಕೆ ಸುಣ್ಣ ಕೈಗೆ ಚಿಪ್ಪು ನೀಡಿರುವ ಕೇಂದ್ರ ಬಜೆಟಿನ ವಿರುದ್ಧ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಬಿಜೆಪಿ ಆಗಲಿ ಕಾಂಗ್ರೆಸ್ ಆಗಲಿ ನಿರಂತರವಾಗಿ ಸಾಕಷ್ಟು ಸಂಸದರು ಗೆಲ್ಲಿಸಿ, ಕೇಂದ್ರ ಸರ್ಕಾರದ ರಚನೆಗೆ ಸಹಕಾರ ನೀಡುತ್ತಿರುವ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿರುವುದು ದುರಂತ ಎಂದು ಆಕ್ರೋಷ ವ್ಯಕ್ತಪಡಿಸಿದರು. ಆಂಧ್ರಪ್ರದೇಶದ ವಿಶಾಖಪಟ್ಟಣ ಉಪ್ಪು ಕಾರ್ಖಾನೆಯನ್ನು ಪುನಶ್ಚೇತನ ಗೊಳಿಸಲು ಕೇಂದ್ರ ಸರ್ಕಾರ 11,000 ಕೋಟಿ ಬಿಡುಗಡೆ ಮಾಡಿದೆ ಆದರೆ ಕರ್ನಾಟಕದಲ್ಲಿರುವ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಗೆ ಕವಡೆ ಕಾಸು ನೀಡಲಿಲ್ಲ ಇದರ ಬಗ್ಗೆ ನಮ್ಮ ಸಚಿವರು ಮಾತಾಡಲಿಲ್ಲ ಎಂದು ಟೀಕಿಸಿದರು.ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲ ಸೀತಾರಾಮ್ ರವರು ಎಂಟು ಬಾರಿ ಬಜೆಟ್ ಅನ್ನು ಮಂಡಿಸಿದರೂ ಸಹ ರಾಜ್ಯದ ಬಾಯಾರಿಕೆ ತೀರಿಸುವಂತಹ ರೈತರ ಸಮಸ್ಯೆಯನ್ನು ಬಗೆಹರಿಸುವಂತಹ ಮಹದಾಯಿ ಯೋಜನೆ, ಮೇಕೆದಾಟು ಕುಡಿಯುವ ನೀರಿನ ಯೋಜನೆ, ಬೃಹತ್ ಕೈಗಾರಿಕೆಗಳು ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸದೆ ಇರುವುದು ಕನ್ನಡ ನಾಡಿನ ವಿರೋಧಿ ನೀತಿಯನ್ನು ಎತ್ತು ತೋರುತ್ತಿದೆ. ಇನ್ನಾದರೂ ಎಚ್ಚೆತ್ತು ಪಕ್ಷಾತೀತವಾಗಿ ಸಂಸದರು ಧ್ವನಿಯನ್ನು ಎತ್ತುವ ಮೂಲಕ ರಾಜ್ಯಕ್ಕಾದ ಅನ್ಯಾಯವನ್ನು ಸರಿಪಡಿಸಬೇಕೆಂದು ವೇದಿಕೆ ಆಗ್ರಹಿಸುತ್ತದೆ.
ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷರಾದ ಎಸ್ ಬಾಲಕೃಷ್ಣ, ಪದಾಧಿಕಾರಿಗಳಾದ ನಾಲ ಬೀದಿರವಿ, ಗುರುಬಸಪ್ಪ, ಗೋಪಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಸಿದ್ದಪ್ಪ ಎಲ್ಐಸಿ, ಗೋವಿಂದ್ ರಾಜ್, ಸ್ವಾಮಿ, ಬೀಡಾ ಬಾಬು, ಮನೋಹರ್, ಹರೀಶ್, ಮಾದಪ್ಪ, ಅರವಿಂದ, ಮದನ್, ಸ್ವಾಮಿ ಗೈಡ್, ಚಿನ್ನಪ್ಪ, ಸುನಿಲ್, ಶಿವು ಮುಂತಾದವರು ಭಾಗವಹಿಸಿದ್ದರು…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *