ಕೇಂದ್ರ ಸರ್ಕಾರದ ಬಜೆಟ್ ವಿರುದ್ದ ಆಕ್ರೋಷ…ಮೈಸೂರು ಕನ್ನಡ ವೇದಿಕೆ ವತಿಯಿಂದ ತೆಂಗಿನ ಚಿಪ್ಪು ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರದ ಬಜೆಟ್ ವಿರುದ್ದ ಆಕ್ರೋಷ…ಮೈಸೂರು ಕನ್ನಡ ವೇದಿಕೆ ವತಿಯಿಂದ ತೆಂಗಿನ ಚಿಪ್ಪು ಹಿಡಿದು ಪ್ರತಿಭಟನೆ

ಮೈಸೂರು,ಫೆ4,Tv10 ಕನ್ನಡ

ಉತ್ತರ ಭಾರತಕ್ಕೆ ಬೆಣ್ಣೆ ದಕ್ಷಿಣ ಭಾರತದ ಬಿಜೆಪಿ ಹೆಚ್ಚಾಗಿರುವ ಕರ್ನಾಟಕಕ್ಕೆ ಸುಣ್ಣ ಕೈಗೆ ಚಿಪ್ಪು ನೀಡಿರುವ ಕೇಂದ್ರ ಬಜೆಟಿನ ವಿರುದ್ಧ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಬಿಜೆಪಿ ಆಗಲಿ ಕಾಂಗ್ರೆಸ್ ಆಗಲಿ ನಿರಂತರವಾಗಿ ಸಾಕಷ್ಟು ಸಂಸದರು ಗೆಲ್ಲಿಸಿ, ಕೇಂದ್ರ ಸರ್ಕಾರದ ರಚನೆಗೆ ಸಹಕಾರ ನೀಡುತ್ತಿರುವ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿರುವುದು ದುರಂತ ಎಂದು ಆಕ್ರೋಷ ವ್ಯಕ್ತಪಡಿಸಿದರು. ಆಂಧ್ರಪ್ರದೇಶದ ವಿಶಾಖಪಟ್ಟಣ ಉಪ್ಪು ಕಾರ್ಖಾನೆಯನ್ನು ಪುನಶ್ಚೇತನ ಗೊಳಿಸಲು ಕೇಂದ್ರ ಸರ್ಕಾರ 11,000 ಕೋಟಿ ಬಿಡುಗಡೆ ಮಾಡಿದೆ ಆದರೆ ಕರ್ನಾಟಕದಲ್ಲಿರುವ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಗೆ ಕವಡೆ ಕಾಸು ನೀಡಲಿಲ್ಲ ಇದರ ಬಗ್ಗೆ ನಮ್ಮ ಸಚಿವರು ಮಾತಾಡಲಿಲ್ಲ ಎಂದು ಟೀಕಿಸಿದರು.ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲ ಸೀತಾರಾಮ್ ರವರು ಎಂಟು ಬಾರಿ ಬಜೆಟ್ ಅನ್ನು ಮಂಡಿಸಿದರೂ ಸಹ ರಾಜ್ಯದ ಬಾಯಾರಿಕೆ ತೀರಿಸುವಂತಹ ರೈತರ ಸಮಸ್ಯೆಯನ್ನು ಬಗೆಹರಿಸುವಂತಹ ಮಹದಾಯಿ ಯೋಜನೆ, ಮೇಕೆದಾಟು ಕುಡಿಯುವ ನೀರಿನ ಯೋಜನೆ, ಬೃಹತ್ ಕೈಗಾರಿಕೆಗಳು ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸದೆ ಇರುವುದು ಕನ್ನಡ ನಾಡಿನ ವಿರೋಧಿ ನೀತಿಯನ್ನು ಎತ್ತು ತೋರುತ್ತಿದೆ. ಇನ್ನಾದರೂ ಎಚ್ಚೆತ್ತು ಪಕ್ಷಾತೀತವಾಗಿ ಸಂಸದರು ಧ್ವನಿಯನ್ನು ಎತ್ತುವ ಮೂಲಕ ರಾಜ್ಯಕ್ಕಾದ ಅನ್ಯಾಯವನ್ನು ಸರಿಪಡಿಸಬೇಕೆಂದು ವೇದಿಕೆ ಆಗ್ರಹಿಸುತ್ತದೆ.
ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷರಾದ ಎಸ್ ಬಾಲಕೃಷ್ಣ, ಪದಾಧಿಕಾರಿಗಳಾದ ನಾಲ ಬೀದಿರವಿ, ಗುರುಬಸಪ್ಪ, ಗೋಪಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಸಿದ್ದಪ್ಪ ಎಲ್ಐಸಿ, ಗೋವಿಂದ್ ರಾಜ್, ಸ್ವಾಮಿ, ಬೀಡಾ ಬಾಬು, ಮನೋಹರ್, ಹರೀಶ್, ಮಾದಪ್ಪ, ಅರವಿಂದ, ಮದನ್, ಸ್ವಾಮಿ ಗೈಡ್, ಚಿನ್ನಪ್ಪ, ಸುನಿಲ್, ಶಿವು ಮುಂತಾದವರು ಭಾಗವಹಿಸಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *