ನಾಲೆ ನೀರು ಹರಿಯಲು ಬಿಡದ ತ್ಯಾಜ್ಯ…ಅಧಿಕಾರಿಗಳನ್ನ ನಾಚಿಸುತ್ತಿರುವ ರಾಶಿ ರಾಶಿ ಮಧ್ಯದ ಪ್ಯಾಕೆಟ್ ಗಳು…ಧಾರ್ಮಿಕ ಪುಣ್ಯಕ್ಷೇತ್ರದಲ್ಲಿ ಇದೆಂತಹ ದುರ್ವ್ಯವಸ್ಥೆ

ನಾಲೆ ನೀರು ಹರಿಯಲು ಬಿಡದ ತ್ಯಾಜ್ಯ…ಅಧಿಕಾರಿಗಳನ್ನ ನಾಚಿಸುತ್ತಿರುವ ರಾಶಿ ರಾಶಿ ಮಧ್ಯದ ಪ್ಯಾಕೆಟ್ ಗಳು…ಧಾರ್ಮಿಕ ಪುಣ್ಯಕ್ಷೇತ್ರದಲ್ಲಿ ಇದೆಂತಹ ದುರ್ವ್ಯವಸ್ಥೆ

ನಂಜನಗೂಡು,ಫೆ4,Tv10 ಕನ್ನಡ

ದಕ್ಷಿಣಕಾಶಿ ನಂಜನಗೂಡು ಧಾರ್ಮಿಕ ಪುಣ್ಯಕ್ಷೇತ್ರವೆಂದೇ ಪ್ರಖ್ಯಾತಿ ಹೊಂದಿದೆ.ಇಲ್ಲಿಗೆ ಬರುವ ಭಕ್ತರು ಕಪಿಲೆಯಲ್ಲಿ ಮಿಂದು ಪಾಪ ಕಳೆಯಲು ಬರುತ್ತಾರೆ.ಆದ್ರೆ ಕಪಿಲೆಯ ಒಡಲಲ್ಲಿ ಸೇರುತ್ತಿರುವ ತ್ಯಾಜ್ಯ ಭಕ್ತರನ್ನ ಮಲಿನಗೊಳಿಸುತ್ತಿದೆ.ತ್ಯಾಜ್ಯದ ಜೊತೆಗೆ ಮಧ್ಯದ ಖಾಲಿ ಪ್ಯಾಕೆಟ್ ಗಳು ಸಹ ಭಕ್ತರನ್ನ ಪಾವನಗೊಳಿಸುತ್ತಿದೆ…!

ಹೌದು…ಇದು ನಂಜನಗೂಡಿನ ನಗರಸಭೆ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳ ದಿವ್ಯನಿರ್ಲಕ್ಷ್ಯಕ್ಕೆ ಸ್ಪಷ್ಟ ಉದಾಹರಣೆ.ನಂಜನಗೂಡು ಸರ್ಕಾರಿ ಬಸ್ ನಿಲ್ದಾಣದ ಕೆನರಾ ಬ್ಯಾಂಕ್ ಸಮೀಪದಲ್ಲಿ ನುಗುನಾಲೆ ಹರಿಯುತ್ತಿದೆ.ಈ ನಾಲೆ ನೀರು ಗುಂಡ್ಲಾನದಿ ಸೇರಿ ನಂತರ ಕಪಿಲೆಯನ್ನ ಬೆರೆಯುತ್ತದೆ.ಆದ್ರೆ ವಿಷಾದದ ಸಂಗತಿ ಅಂದ್ರೆ ನಾಲೆಗೆ ತ್ಯಾಜ್ಯದ ರಾಶಿ ಸುರಿಯಲಾಗುತ್ತಿದೆ.ಮಧ್ಯದ ಪ್ಯಾಕೆಟ್ ಗಳು,ಕಸ,ಕೋಳಿ ರೆಕ್ಕೆಪುಕ್ಕಗಳು ನಾಲೆ ನೀರು ಸೇರುತ್ತಿದೆ.ಕಸದರಾಶಿ ನೀರನ್ನ ಸರಾಗವಾಗಿ ಹರಿಯಲು ಬಿಡದೆ ತಡೆಹಿಡಿಯುತ್ತಿದೆ.ಕಸದರಾಶಿಯಿಂದ ನುಸುಳಿ ಮಲಿನವಾಗಿ ಹೋಗುತ್ತಿರುವ ನೀರು ಗುಂಡ್ಲಾನದಿ ಮೂಲಕ ಕಪಿಲೆ ಒಡಲು ಸೇರುತ್ತಿದೆ.ಇದೇ ಮಲಿನ ನೀರಿನಲ್ಲಿ ಮಿಂದೇಳುವ ಭಕ್ತರು ಪಾಪಗಳನ್ನ ತೊಳೆದುಕೊಳ್ಳಲು ಮುಂದಾಗಿದ್ದಾರೆ.ಭಕ್ತರ ಆರೋಗ್ಯದ ಜೊತೆ ನಗರಸಭೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ.ಬಾರ್ ಅಂಡ್ ರೆಸ್ಟೋರೆಂಟ್ ಗಳಿಂದ ಬರುತ್ತಿರುವ ಖಾಲಿ ಮಧ್ಯದ ಪ್ಯಾಕೆಟ್ ಗಳಿಗೆ ನಾಲೆ ಆವಾಸ ಸ್ಥಾನವಾಗಿ ಪರಿಣಮಿಸಿದೆ.ಅಬಕಾರಿ ಇಲಾಖೆ ಅಧಿಕಾರಿಗಳಂತೂ ಇದ್ಯಾವುದರ ಪರಿವೆ ಇಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ.ಬೇಸಿಗೆ ಸನಿಹವಾಗುವ ಸಮಯ.ನಗರಸಭೆ ಅಧಿಕಾರಿಗಳು ಇತ್ತ ಗಮನಹರಿಸಿ ಭಕ್ತರ ಒಳಿತಿಗಾಗಿ ಸ್ವಚ್ಛತೆ ಕಾಪಾಡಬೇಕಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *