ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ…

ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ…

ನಂಜನಗೂಡು,ಫೆ5,Tv10 ಕನ್ನಡ

ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.ವಿಚಿತ್ರವಾದ ಕಣ್ಣು ಮತ್ತು ತುಟಿ ಮೈಯೆಲ್ಲಾ ಇದ್ದಲಿನಂತೆ ಕಪ್ಪು ಬಣ್ಣ.ನೋಡುಗರನ್ನ ಬೆಚ್ಚಿಬೀಳುವಂತಹ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನ ಹುಬ್ಬೇರುವಂತೆ ಮಾಡಿದೆ.ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮ ಒಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ.ಮಗುವಿನ ಆಕಾರ ಮತ್ತು ರೂಪಕ್ಕೆ ಗ್ರಾಮಸ್ಥರು ಮತ್ತು ದಂಪತಿ ಕುಟುಂಬಸ್ಥರು ಶಾಕ್ ಆಗಿದ್ದಾರೆ.ಕೆಲವೇ ಗಂಟೆಗಳ ಹಿಂದೆ ಹುಟ್ಟಿದ ಮಗುವನ್ನು ಉಳಿಸಿಕೊಳ್ಳಲು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ವಿಚಿತ್ರ ರೂಪದ ಮಗುವನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಳು ದಿನಗಳ ಕಾಲ ತುರ್ತು ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಿದ್ದಾರೆ.
ಕಳೆದ ವರ್ಷಗಳ ಇದೇ ದಂಪತಿ ಇಂತದ್ದೇ ರೂಪ ಹೊಂದಿದ ಮಗುವಿಗೆ ಜನ್ಮ ನೀಡಿತ್ತು. ನಾಲ್ಕೈದು ದಿನಗಳ ಸಾವನ್ನಪ್ಪಿತ್ತು.
ಮತ್ತೆ ಈ ಬಾರಿಯೂ ಕೂಡ ಇದೇ ರೀತಿ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸುವಂತಹ ವಿಚಿತ್ರ ಮಗು ಈ ದಂಪತಿಗೆ ಹುಟ್ಟಿದೆ.ಈ ಹಿಂದೆ ನಡೆದ ಪ್ರಕರಣದ ನಂತರ ಆರೋಗ್ಯ ಇಲಾಖೆ ನೀಡಿದ್ದ ಸಲಹೆ ಸೂಚನೆಗಳನ್ನ ದಂಪತಿ ಪಾಲಿಸಿಲ್ಲ ಎಂದು ಹೇಳಲಾಗಿದೆ. ಮಗುವನ್ನ ಉಳಿಸಿಕೊಳ್ಳಲು ಚೆಲುವಾಂಬಾ ಆಸ್ಪತ್ರೆಯ ತುರ್ತು ಘಟಕದಲ್ಲಿ ಹರಸಾಹಸ ನಡೆಸಲಾಗುತ್ತಿದೆ.ವಿಸ್ಮಯವಾದ ಮಗು ಹುಟ್ಟುವ ಮೂಲಕ ವೈದ್ಯಲೋಕಕ್ಕೆ ಇದು ಸವಾಲು ಎನ್ನುವಂತಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *