ಸ್ಮಶಾನದಲ್ಲಿ ಗಾಂಜಾ ಗಮ್ಮತ್ತು…ರಾಜಾರೋಷವಾಗಿ ಧಂ ಎಳೆಯುವ ವ್ಯಸನಿಗಳು…ದೂರು ನೀಡಿದ್ರೂ ಕ್ಯಾರೆ ಎನ್ನದ ಪೊಲೀಸ್ರು…ಮೇಟಗಳ್ಳಿ ಸ್ಮಶಾನದ ದುಃಸ್ಥಿತಿ…

ಸ್ಮಶಾನದಲ್ಲಿ ಗಾಂಜಾ ಗಮ್ಮತ್ತು…ರಾಜಾರೋಷವಾಗಿ ಧಂ ಎಳೆಯುವ ವ್ಯಸನಿಗಳು…ದೂರು ನೀಡಿದ್ರೂ ಕ್ಯಾರೆ ಎನ್ನದ ಪೊಲೀಸ್ರು…ಮೇಟಗಳ್ಳಿ ಸ್ಮಶಾನದ ದುಃಸ್ಥಿತಿ…

ಮೈಸೂರು,ಫೆ16,Tv10 ಕನ್ನಡ

ಮೃತಪಟ್ಟವರ ಆತ್ಮ ಚಿರಶಾಂತಿಗೆ ಜಾರಬೇಕಾದ ಸ್ಮಶಾನ ಗಾಂಜಾ ವ್ಯಸನಿಗಳ ಆವಾಸ ಸ್ಥಾನವಾಗಿ ಪರಿಣಮಿಸಿದೆ.ಹಗಲು ಇರುಳೆನ್ನದೆ ಬೈಕ್ ನಲ್ಲಿ ಬರುವ ವ್ಯಸನಿಗಳು ಸ್ಮಶಾನ ಹಾಗೂ

ಅಕ್ಕಪಕ್ಕದಲ್ಲಿರು ಪೊದೆಗಳ ಆಶ್ರಯ ಪಡೆದು ರಾಜಾರೋಷವಾಗಿ ಗಾಂಜಾ ಸೇವನೆ ಮಾಡುತ್ತಿದ್ದಾರೆ.ಈ ಬಗ್ಗೆ ಸ್ಥಳೀಯರಾದ ಬಿ.ಎನ್.ನಾಗೇಂದ್ರ ಮೇಟಗಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ.ಮೃತಪಟ್ಟವರು ಚಿರನಿದ್ರೆಗೆ ಜಾರಬೇಕಾದ ಸ್ಥಳವೀಗ ಗಾಂಜಾ ವ್ಯಸನಿಗಳ ಗಮ್ಮತ್ತಿಗೆ ಬಲಿಯಾಗುತ್ತಿದೆ

ಹೌದು…ಇದು ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 5 ಹಾಗೂ ವಾರ್ಡ್ ನಂ.7 ರ ವ್ಯಾಪ್ತಿಯಲ್ಲಿ ಬರುವ ಸ್ಮಶಾನದ ದುಃಸ್ಥಿತಿ.ಸ್ಮಶಾನದ ಅಭಿವೃದ್ದಿಗಾಗಿ ಮೈಸೂರು ಮಹಾನಗರಪಾಲಿಕೆ ಲಕ್ಷಾಂತರ ರೂ ಖರ್ಚು ಮಾಡಿದೆ.ಹೈ ಮಾಸ್ಕ್ ಸೇರಿದಂತೆ ದೀಪಗಳನ್ನ ಅಳವಡಿಸಿದೆ.ಕಳೆದ ಮೂರು ತಿಂಗಳಿಂದ ಇಲ್ಲಿನ ದೀಪಗಳು ಬೆಳಕು ನೀಡುವುದನ್ನ ಸ್ಥಗಿತಗೊಳಿಸಿದೆ.ಕತ್ತಲನ್ನೇ ಬಳಸಿಕೊಳ್ಳುತ್ತಿರುವ ಗಾಂಜಾ ವ್ಯಸನಿಗಳು ರಾಜಾರೋಷವಾಗಿ ಸ್ಮಶಾನಕ್ಕೆ ಪ್ರವೇಶಿಸಿ ಧಂ ಎಳೆದು ಮತ್ತೇರಿಸಿಕೊಳ್ಳುತ್ತಿದ್ದಾರೆ.ಸ್ಮಶಾನದ ಪಕ್ಕದಲ್ಲೇ ಇರುವ ಆಲದ ಮರದ ಕೆಳಗೆ ಧಂ ಎಳೆಯುವ ದೃಶ್ಯ ಪ್ರತಿನಿತ್ಯ ಕಾಣಿಸುತ್ತಿದೆ.ಪಕ್ಕದಲ್ಲೇ ಹಾದು ಹೋಗಿರುವ ರೈಲ್ವೆ ಹಳಿಯನ್ನೂ ಬಿಡದ ವ್ಯಸನಿಗಳು ಹಳಿ ಮೇಲೇ ಕುಳಿತು ಧಂ ಎಳೆಯುತ್ತಿದ್ದಾರೆ.ಲಕ್ಷಾಂತರ ರೂ ಖರ್ಚು ಮಾಡಿ ಅಭಿವೃದ್ದಿ ಪಡಿಸಿದ ಸ್ಮಶಾನ ನಿರ್ವಹಣೆ ಕೊರತೆಯಿಂದ ಸೊರಗುತ್ತಿದೆ.ಗಾಂಜಾ ವ್ಯಸನಿಗಳನ್ನ ಪ್ರಶ್ನಿಸಿದ ಸಾರ್ವಜನಿಕರ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣಗಳೂ ನಡೆದಿವೆ.ಈ ಬಗ್ಗೆ ಮೇಟಗಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *