ಸ್ಮಶಾನದಲ್ಲಿ ಗಾಂಜಾ ಗಮ್ಮತ್ತು…ರಾಜಾರೋಷವಾಗಿ ಧಂ ಎಳೆಯುವ ವ್ಯಸನಿಗಳು…ದೂರು ನೀಡಿದ್ರೂ ಕ್ಯಾರೆ ಎನ್ನದ ಪೊಲೀಸ್ರು…ಮೇಟಗಳ್ಳಿ ಸ್ಮಶಾನದ ದುಃಸ್ಥಿತಿ…

ಸ್ಮಶಾನದಲ್ಲಿ ಗಾಂಜಾ ಗಮ್ಮತ್ತು…ರಾಜಾರೋಷವಾಗಿ ಧಂ ಎಳೆಯುವ ವ್ಯಸನಿಗಳು…ದೂರು ನೀಡಿದ್ರೂ ಕ್ಯಾರೆ ಎನ್ನದ ಪೊಲೀಸ್ರು…ಮೇಟಗಳ್ಳಿ ಸ್ಮಶಾನದ ದುಃಸ್ಥಿತಿ…

ಮೈಸೂರು,ಫೆ16,Tv10 ಕನ್ನಡ

ಮೃತಪಟ್ಟವರ ಆತ್ಮ ಚಿರಶಾಂತಿಗೆ ಜಾರಬೇಕಾದ ಸ್ಮಶಾನ ಗಾಂಜಾ ವ್ಯಸನಿಗಳ ಆವಾಸ ಸ್ಥಾನವಾಗಿ ಪರಿಣಮಿಸಿದೆ.ಹಗಲು ಇರುಳೆನ್ನದೆ ಬೈಕ್ ನಲ್ಲಿ ಬರುವ ವ್ಯಸನಿಗಳು ಸ್ಮಶಾನ ಹಾಗೂ

ಅಕ್ಕಪಕ್ಕದಲ್ಲಿರು ಪೊದೆಗಳ ಆಶ್ರಯ ಪಡೆದು ರಾಜಾರೋಷವಾಗಿ ಗಾಂಜಾ ಸೇವನೆ ಮಾಡುತ್ತಿದ್ದಾರೆ.ಈ ಬಗ್ಗೆ ಸ್ಥಳೀಯರಾದ ಬಿ.ಎನ್.ನಾಗೇಂದ್ರ ಮೇಟಗಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ.ಮೃತಪಟ್ಟವರು ಚಿರನಿದ್ರೆಗೆ ಜಾರಬೇಕಾದ ಸ್ಥಳವೀಗ ಗಾಂಜಾ ವ್ಯಸನಿಗಳ ಗಮ್ಮತ್ತಿಗೆ ಬಲಿಯಾಗುತ್ತಿದೆ

ಹೌದು…ಇದು ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 5 ಹಾಗೂ ವಾರ್ಡ್ ನಂ.7 ರ ವ್ಯಾಪ್ತಿಯಲ್ಲಿ ಬರುವ ಸ್ಮಶಾನದ ದುಃಸ್ಥಿತಿ.ಸ್ಮಶಾನದ ಅಭಿವೃದ್ದಿಗಾಗಿ ಮೈಸೂರು ಮಹಾನಗರಪಾಲಿಕೆ ಲಕ್ಷಾಂತರ ರೂ ಖರ್ಚು ಮಾಡಿದೆ.ಹೈ ಮಾಸ್ಕ್ ಸೇರಿದಂತೆ ದೀಪಗಳನ್ನ ಅಳವಡಿಸಿದೆ.ಕಳೆದ ಮೂರು ತಿಂಗಳಿಂದ ಇಲ್ಲಿನ ದೀಪಗಳು ಬೆಳಕು ನೀಡುವುದನ್ನ ಸ್ಥಗಿತಗೊಳಿಸಿದೆ.ಕತ್ತಲನ್ನೇ ಬಳಸಿಕೊಳ್ಳುತ್ತಿರುವ ಗಾಂಜಾ ವ್ಯಸನಿಗಳು ರಾಜಾರೋಷವಾಗಿ ಸ್ಮಶಾನಕ್ಕೆ ಪ್ರವೇಶಿಸಿ ಧಂ ಎಳೆದು ಮತ್ತೇರಿಸಿಕೊಳ್ಳುತ್ತಿದ್ದಾರೆ.ಸ್ಮಶಾನದ ಪಕ್ಕದಲ್ಲೇ ಇರುವ ಆಲದ ಮರದ ಕೆಳಗೆ ಧಂ ಎಳೆಯುವ ದೃಶ್ಯ ಪ್ರತಿನಿತ್ಯ ಕಾಣಿಸುತ್ತಿದೆ.ಪಕ್ಕದಲ್ಲೇ ಹಾದು ಹೋಗಿರುವ ರೈಲ್ವೆ ಹಳಿಯನ್ನೂ ಬಿಡದ ವ್ಯಸನಿಗಳು ಹಳಿ ಮೇಲೇ ಕುಳಿತು ಧಂ ಎಳೆಯುತ್ತಿದ್ದಾರೆ.ಲಕ್ಷಾಂತರ ರೂ ಖರ್ಚು ಮಾಡಿ ಅಭಿವೃದ್ದಿ ಪಡಿಸಿದ ಸ್ಮಶಾನ ನಿರ್ವಹಣೆ ಕೊರತೆಯಿಂದ ಸೊರಗುತ್ತಿದೆ.ಗಾಂಜಾ ವ್ಯಸನಿಗಳನ್ನ ಪ್ರಶ್ನಿಸಿದ ಸಾರ್ವಜನಿಕರ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣಗಳೂ ನಡೆದಿವೆ.ಈ ಬಗ್ಗೆ ಮೇಟಗಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *