ಐಪಿಎಲ್ ಬೆಟ್ಟಿಂಗ್ ಎಫೆಕ್ಟ್…ತಂಗಿಗೆ ಸಾಲದ ಹೊರೆ…ಒಬ್ಬ ಅಣ್ಣ ಸೆಲ್ಫೀ ವಿಡಿಯೋ ಮಾಡಿ ನೇಣಿಗೆ ಶರಣು…ಪ್ರಕರಣ ದಾಖಲಾಗುತ್ತಿದ್ದಂತೆಯೇ ಮತ್ತೊಬ್ಬ ಅಣ್ಣ ಅತ್ತಿಗೆ ಆತ್ಮಹತ್ಯೆ…ಸಾಲದ ಉರುಳಿಗೆ ಮೂವರು ಬಲಿ…

ಐಪಿಎಲ್ ಬೆಟ್ಟಿಂಗ್ ಎಫೆಕ್ಟ್…ತಂಗಿಗೆ ಸಾಲದ ಹೊರೆ…ಒಬ್ಬ ಅಣ್ಣ ಸೆಲ್ಫೀ ವಿಡಿಯೋ ಮಾಡಿ ನೇಣಿಗೆ ಶರಣು…ಪ್ರಕರಣ ದಾಖಲಾಗುತ್ತಿದ್ದಂತೆಯೇ ಮತ್ತೊಬ್ಬ ಅಣ್ಣ ಅತ್ತಿಗೆ ಆತ್ಮಹತ್ಯೆ…ಸಾಲದ ಉರುಳಿಗೆ ಮೂವರು ಬಲಿ…

ಮೈಸೂರು,ಫೆ18,Tv10 ಕನ್ನಡ

ಐಪಿಎಲ್ ಬೆಟ್ಟಿಂಗ್ ಹಿನ್ನಲೆ ತಂಗಿಗೆ ಸ್ವಂತ ಅಣ್ಣ ಹಾಗೂ ಅತ್ತಿಗೆ ಮಾಡಿಸಿದ ಸಾಲ ಇಂದು ಒಂದೇ ಕುಟುಂಬದ ಮೂವರ ಸಾವಿಗೆ ಕಾರಣವಾಗಿದೆ.ತಂಗಿ ಮೇಲಿದ್ದ ಸಾಲದ ಕಿರುಕುಳಕ್ಕೆ ಬೇಸತ್ತ ಒಬ್ಬ ಅಣ್ಣ ಸೆಲ್ಫೀ ವಿಡಿಯೋ ಮಾಡಿ ನೇಣಿಗೆ ಶರಣಾದ ಬೆನ್ನ ಹಿಂದೆಯೇ ಪ್ರಕರಣ ದಾಖಲಾದ ಹಿನ್ನಲೆ ಮತ್ತೊಬ್ಬ ಅಣ್ಣ ಹಾಗೂ ಅತ್ತಿಗೆ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಸಂಭಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಾಗೂ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆ.17 ರಂದು ಒಬ್ಬ ಅಣ್ಣ ಸೆಲ್ಫೀ ವಿಡಿಯೋ ಮಾಡಿ ತನ್ನ ತಮ್ಮ ಹಾಗೂ ಆತನ ಪತ್ನಿ ವಿರುದ್ದ ಆರೋಪ ಮಾಡಿ ರಮ್ಮನಹಳ್ಳಿ ಸ್ಮಶಾನದ ಬಳಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡರೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪ ಹೊತ್ತ ಮತ್ತೊಬ್ಬ ಅಣ್ಣ ಹಾಗೂ ಪತ್ನಿ ವಾಟರ್ ಟ್ಯಾಂಕ್ ಗೆ ಅಳವಡಿಸಿದ ಮೆಟ್ಟಿಲುಗಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜೋಷಿ ಆಂಟೋನಿ(46) ರಮ್ಮನಹಳ್ಳಿಯಲ್ಲಿ ಸೆಲ್ಫೀ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದವರು.ಇವರ ತಮ್ಮ ಜೋಬಿ ಆಂಟೋನಿ ಹಾಗೂ ಪತ್ನಿ ಶರ್ಮಿಳಾ.@.ಸ್ವಾತಿ ವಿಜಯನಗರ ವಾಟರ್ ಟ್ಯಾಂಕ್ ಬಳಿ ನೇಣಿಗೆ ಶರಣಾದವರು.ಸಾಲದ ವಿಚಾರದಲ್ಲಿ ಶುರುವಾದ ವಿವಾದ ಒಂದೇ ಕುಟುಂಬದ ಮೂವರನ್ನ ಬಲಿ ಪಡೆದಿದೆ.

ಮೇರಿಷಿಲಿನ್ ಗೆ ಇಬ್ಬರು ಅಣ್ಣಂದಿರು.ಓರ್ವ ಜೋಷಿ ಆಂಟೋನಿ ಹಾಗೂ ಮತ್ತೊಬ್ಬ ಜೋಬಿ ಆಂಟೋನಿ.ಜೋಬಿ ಆಂಟೋನಿ ತನ್ನ ತಂಗಿ ಮೇರಿಷಿಯಸ್ ಗೆ ಲಕ್ಷಾಂತರ ರೂ ಸಾಲ ಮಾಡಿಸಿದ್ದಾನೆ.ಐಪಿಎಲ್ ನಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಜೋಬಿ ಆಂಟೋನಿ ತಂಗಿ ಹೆಸರಲ್ಲಿ ಹಣ ಕಳೆದಿದ್ದಾನೆ.ಇದಕ್ಕೆ ಜೋಬಿ ಆಂಟೋನಿ ಪತ್ನಿ ಶರ್ಮಿಳಾ.ಆ.ಸ್ವಾತಿ ಕುಮ್ಮಕ್ಕು ಇದೆ.ಲಕ್ಷಾಂತರ ಸಾಲ ನೀಡಿದ ಜನ ಮೇರಿಷಿಯಸ್ ಗೆ ದುಂಬಾಲು ಬಿದ್ದಿದ್ದಾರೆ.ಸಾಲ ತೀರಿಸಲಾಗದೆ ಮೇರಿಷಿಯಸ್ ಒತ್ತಡಕ್ಕೆ ಬಿದ್ದಿದ್ದಾರೆ.ತಂಗಿಗೆ ಸಾಲಗಾರರ ಕಿರುಕುಳ ಹೆಚ್ಚಾಗುತ್ತಿದ್ದಂತೆಯೇ ಬೇಸತ್ತ ಮತ್ತೊಬ್ಬ ಅಣ್ಣ ಜೋಷಿ ಆಂಟೋನಿ ನೊಂದಿದ್ದಾರೆ.ತಂಗಿಗೆ ಬಂದ ಸ್ಥಿತಿಗೆ ಮರುಗಿದ ಜೋಷಿ ಆಂಟೋನಿ ಫೆ.17 ರಂದು ರಮ್ಮನಹಳ್ಳಿ ಸ್ಮಶಾನದ ಬಳಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಸೆಲ್ಫೀ ವಿಡಿಯೋ ಮಾಡಿ ತನ್ನ ತಂಗಿಯ ಪರಿಸ್ಥಿತಿಗೆ ನನ್ನ ತಮ್ಮ ಜೋಬಿ ಆಂಟೋನಿ ಹಾಗೂ ಆತ್ಮ ಪತ್ನಿ ಶರ್ಮಿಳಾ.ಆ.ಸ್ವಾತಿ ಕಾರಣ ಇವರನ್ನ ಸುಮ್ಮನೆ ಬಿಡಬೇಡಿ ಎಂದು ಕಣ್ಣೀರಿಡುತ್ತಾ ಸೆಲ್ಫೀ ಮಾಡಿ ವಿಡಿಯೋವನ್ನ ತಂಗಿ ಮಗಳ ಮೊಬೈಲ್ ಗೆ ಸೆಂಡ್ ಮಾಡಿ ನೇಣಿಗೆ ಶರಣಾಗಿದ್ದಾರೆ.ತಂದೆ ತಾಯಿಯನ್ನ ದಫನ್ ಮಾಡಿದ ಸ್ಥಳದಲ್ಲೇ ಜೋಷಿ ಆಂಟೋನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಸಂಭಂಧ ಮೇರಿಷಿಯಸ್ ರವರು ಮತ್ತೊಬ್ಬ ಅಣ್ಣ ಜೋಬಿ ಆಂಟೋನಿ ಮತ್ತು ಅತ್ತಿಗೆ ಶರ್ಮಿಳಾ.ಆ.ಸ್ವಾತಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಈ ಮಾಹಿತಿ ಅರಿತ ಅಣ್ಣ ಜೋಬಿ ಆಂಟೋನಿ ಹಾಗೂ ಪತ್ನಿ ಶರ್ಮಿಳಾ.ಆ.ಸ್ವಾತಿ ವಿಜಯನಗರ ವಾಟರ್ ಟ್ಯಾಂಕ್ ಮೆಟ್ಟಿಲುಗಳಿಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಐಪಿಎಲ್ ಬೆಟ್ಟಿಂಗ್ ದಂಧೆ ಹಿನ್ನಲೆ ಮಾಡಿದ ಸಾಲ ಇಂದು ಒಂದೇ ಕುಟುಂಬದ ಮೂವರ ಆತ್ಮಹತ್ಯೆಗೆ ಕಾರಣವಾಗಿದೆ.

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *