ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ ಗುಳುಂ…ವರದಿ ಸಲ್ಲಿಸುವಂತೆ ಆಡಳಿತ ಮಂಡಳಿಗೆ ನೋಟೀಸ್…

ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ ಗುಳುಂ…ವರದಿ ಸಲ್ಲಿಸುವಂತೆ ಆಡಳಿತ ಮಂಡಳಿಗೆ ನೋಟೀಸ್…

ನಂಜನಗೂಡು,ಫೆ19,Tv10 ಕನ್ನಡ

ನಂಜನಗೂಡು ತಾಲೂಕು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸಿಬ್ಬಂದಿಗಳು ಸೇರಿ ನಡೆಸಿದ ಅವ್ಯವಹಾರ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದೆ.12,35,916/- ರೂ ಅವ್ಯವಹಾರ ನಡೆದಿರುವುದು ಪರಿಶೀಲನೆಯಲ್ಲಿ ಖಚಿತವಾದ ಹಿನ್ನಲೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಮನೋಜ್ ಕುಮಾರ್ ರವರು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನೋಟೀಸ್ ನೀಡಿ ಮುಖ್ಯ ಕಾರ್ಯನಿರ್ವಾಹಕರು ನಡೆಸಿದ ಅವ್ಯವಹಾರಗಳ ಬಗ್ಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ 7 ದಿನಗಳ ಒಳಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.

ಮುಖ್ಯ ಕಾರ್ಯನಿರ್ವಾಹಕ ಹಾಗೂ ಸಿಬ್ಬಂದಿಗಳು ಸೇರಿ ಉತ್ಪಾದಕರಿಂದ ಶೇಖರಿಸಿದ ಹಾಲಿಗೆ ನೀರು ಹಾಗೂ ಇತರ ಸಾಮಗ್ರಿಗಳನ್ನ ಮಿಶ್ರಣ ಒಕ್ಕೂಟಕ್ಕೆ ಸರಬರಾಜು ಮಾಡಿದ್ದಾರೆ.ಹೈನುಗಾರಿಕೆ ಮಾಡದ ತಮ್ಮ ಸಂಭಂಧಿಕರ ಹೆಸರಿಗೆ ಹೆಚ್ಚುವರಿ ಪ್ರಮಾಣದ ಹಾಲನ್ನ ನಮೂದಿಸಿ ಹಣ ಪಾವತಿ ಮಾಡಿದ್ದಾರೆ.5/- ರೂ ಪ್ರೋತ್ಸಾಹ ಧನ ನೀಡುವಲ್ಲಿ ಭೋಗಸ್ ಕಾರ್ಡ್ ಸೃಷ್ಟಿಸಿದ್ದಾರೆ.ಮುಖ್ಯ ಕಾರ್ಯನಿರ್ವಾಹಕರ 10 ಸಂಭಂಧಿಕರು ಹಾಗೂ ನಿಕಟವರ್ತಿಗಳ ಹೆಸರಲ್ಲಿ ನಕಲಿ ಕಾರ್ಡ್ ಸೃಷ್ಟಿಸಿದ್ದಾರೆ.ಪರಿಶೀಲನೆ ವೇಳೆ 12,35,916/- ರೂ ಅವ್ಯವಹಾರ ನಡೆದಿರುವುದು ಸಾಬೀತಾಗಿದೆ.ಹಾಲು ಶೇಖರಣೆ ಮಾಡಿರುವ ಖರೀದಿಗೂ ಹಾಗೂ ಬಟವಾಡೆ ಮಾಡಿರುವ ಮೊತ್ತಕ್ಕೂ ವೆತ್ಯಾಸ ಕಂಡುಬಂದಿದೆ.ಸಂಘದ ಆಡಳಿತ ಮಂಡಳಿ ಗಮನಕ್ಕೆ ಬಾರದೆ ಹುರಾ ಹಾಲು ಉತ್ಪಾದಕರ ಸಂಘದಿಂದ 1 ಲಕ್ಷ ಹಣ ಪಾವತಿ ಮಾಡಿರುವುದು ಸಹ ಕಂಡುಬಂದಿದೆ.ಸಂಘದ ಕಂಪ್ಯೂಟರ್ ನಲ್ಲಿರುವ ಬಟವಾಡೆ ಪಟ್ಟಿಗೂ ಬ್ಯಾಂಕ್ ಗೆ ಒದಗಿಸಿರುವ ಬಟವಾಡ ಪಟ್ಟಿಗೂ ವೆತ್ಯಾಸ ಕಂಡು ಬಂದಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಪೂರ್ಣ ವರದಿ ಸಲ್ಲಿಸುವಂತೆ ನೋಟೀಸ್ ನೀಡಲಾಗಿದೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *