ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ ಗುಳುಂ…ವರದಿ ಸಲ್ಲಿಸುವಂತೆ ಆಡಳಿತ ಮಂಡಳಿಗೆ ನೋಟೀಸ್…

ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ ಗುಳುಂ…ವರದಿ ಸಲ್ಲಿಸುವಂತೆ ಆಡಳಿತ ಮಂಡಳಿಗೆ ನೋಟೀಸ್…

ನಂಜನಗೂಡು,ಫೆ19,Tv10 ಕನ್ನಡ

ನಂಜನಗೂಡು ತಾಲೂಕು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸಿಬ್ಬಂದಿಗಳು ಸೇರಿ ನಡೆಸಿದ ಅವ್ಯವಹಾರ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದೆ.12,35,916/- ರೂ ಅವ್ಯವಹಾರ ನಡೆದಿರುವುದು ಪರಿಶೀಲನೆಯಲ್ಲಿ ಖಚಿತವಾದ ಹಿನ್ನಲೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಮನೋಜ್ ಕುಮಾರ್ ರವರು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನೋಟೀಸ್ ನೀಡಿ ಮುಖ್ಯ ಕಾರ್ಯನಿರ್ವಾಹಕರು ನಡೆಸಿದ ಅವ್ಯವಹಾರಗಳ ಬಗ್ಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ 7 ದಿನಗಳ ಒಳಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.

ಮುಖ್ಯ ಕಾರ್ಯನಿರ್ವಾಹಕ ಹಾಗೂ ಸಿಬ್ಬಂದಿಗಳು ಸೇರಿ ಉತ್ಪಾದಕರಿಂದ ಶೇಖರಿಸಿದ ಹಾಲಿಗೆ ನೀರು ಹಾಗೂ ಇತರ ಸಾಮಗ್ರಿಗಳನ್ನ ಮಿಶ್ರಣ ಒಕ್ಕೂಟಕ್ಕೆ ಸರಬರಾಜು ಮಾಡಿದ್ದಾರೆ.ಹೈನುಗಾರಿಕೆ ಮಾಡದ ತಮ್ಮ ಸಂಭಂಧಿಕರ ಹೆಸರಿಗೆ ಹೆಚ್ಚುವರಿ ಪ್ರಮಾಣದ ಹಾಲನ್ನ ನಮೂದಿಸಿ ಹಣ ಪಾವತಿ ಮಾಡಿದ್ದಾರೆ.5/- ರೂ ಪ್ರೋತ್ಸಾಹ ಧನ ನೀಡುವಲ್ಲಿ ಭೋಗಸ್ ಕಾರ್ಡ್ ಸೃಷ್ಟಿಸಿದ್ದಾರೆ.ಮುಖ್ಯ ಕಾರ್ಯನಿರ್ವಾಹಕರ 10 ಸಂಭಂಧಿಕರು ಹಾಗೂ ನಿಕಟವರ್ತಿಗಳ ಹೆಸರಲ್ಲಿ ನಕಲಿ ಕಾರ್ಡ್ ಸೃಷ್ಟಿಸಿದ್ದಾರೆ.ಪರಿಶೀಲನೆ ವೇಳೆ 12,35,916/- ರೂ ಅವ್ಯವಹಾರ ನಡೆದಿರುವುದು ಸಾಬೀತಾಗಿದೆ.ಹಾಲು ಶೇಖರಣೆ ಮಾಡಿರುವ ಖರೀದಿಗೂ ಹಾಗೂ ಬಟವಾಡೆ ಮಾಡಿರುವ ಮೊತ್ತಕ್ಕೂ ವೆತ್ಯಾಸ ಕಂಡುಬಂದಿದೆ.ಸಂಘದ ಆಡಳಿತ ಮಂಡಳಿ ಗಮನಕ್ಕೆ ಬಾರದೆ ಹುರಾ ಹಾಲು ಉತ್ಪಾದಕರ ಸಂಘದಿಂದ 1 ಲಕ್ಷ ಹಣ ಪಾವತಿ ಮಾಡಿರುವುದು ಸಹ ಕಂಡುಬಂದಿದೆ.ಸಂಘದ ಕಂಪ್ಯೂಟರ್ ನಲ್ಲಿರುವ ಬಟವಾಡೆ ಪಟ್ಟಿಗೂ ಬ್ಯಾಂಕ್ ಗೆ ಒದಗಿಸಿರುವ ಬಟವಾಡ ಪಟ್ಟಿಗೂ ವೆತ್ಯಾಸ ಕಂಡು ಬಂದಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಪೂರ್ಣ ವರದಿ ಸಲ್ಲಿಸುವಂತೆ ನೋಟೀಸ್ ನೀಡಲಾಗಿದೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *