ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ ಗುಳುಂ…ವರದಿ ಸಲ್ಲಿಸುವಂತೆ ಆಡಳಿತ ಮಂಡಳಿಗೆ ನೋಟೀಸ್…

ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ ಗುಳುಂ…ವರದಿ ಸಲ್ಲಿಸುವಂತೆ ಆಡಳಿತ ಮಂಡಳಿಗೆ ನೋಟೀಸ್…

ನಂಜನಗೂಡು,ಫೆ19,Tv10 ಕನ್ನಡ

ನಂಜನಗೂಡು ತಾಲೂಕು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸಿಬ್ಬಂದಿಗಳು ಸೇರಿ ನಡೆಸಿದ ಅವ್ಯವಹಾರ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದೆ.12,35,916/- ರೂ ಅವ್ಯವಹಾರ ನಡೆದಿರುವುದು ಪರಿಶೀಲನೆಯಲ್ಲಿ ಖಚಿತವಾದ ಹಿನ್ನಲೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಮನೋಜ್ ಕುಮಾರ್ ರವರು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನೋಟೀಸ್ ನೀಡಿ ಮುಖ್ಯ ಕಾರ್ಯನಿರ್ವಾಹಕರು ನಡೆಸಿದ ಅವ್ಯವಹಾರಗಳ ಬಗ್ಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ 7 ದಿನಗಳ ಒಳಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.

ಮುಖ್ಯ ಕಾರ್ಯನಿರ್ವಾಹಕ ಹಾಗೂ ಸಿಬ್ಬಂದಿಗಳು ಸೇರಿ ಉತ್ಪಾದಕರಿಂದ ಶೇಖರಿಸಿದ ಹಾಲಿಗೆ ನೀರು ಹಾಗೂ ಇತರ ಸಾಮಗ್ರಿಗಳನ್ನ ಮಿಶ್ರಣ ಒಕ್ಕೂಟಕ್ಕೆ ಸರಬರಾಜು ಮಾಡಿದ್ದಾರೆ.ಹೈನುಗಾರಿಕೆ ಮಾಡದ ತಮ್ಮ ಸಂಭಂಧಿಕರ ಹೆಸರಿಗೆ ಹೆಚ್ಚುವರಿ ಪ್ರಮಾಣದ ಹಾಲನ್ನ ನಮೂದಿಸಿ ಹಣ ಪಾವತಿ ಮಾಡಿದ್ದಾರೆ.5/- ರೂ ಪ್ರೋತ್ಸಾಹ ಧನ ನೀಡುವಲ್ಲಿ ಭೋಗಸ್ ಕಾರ್ಡ್ ಸೃಷ್ಟಿಸಿದ್ದಾರೆ.ಮುಖ್ಯ ಕಾರ್ಯನಿರ್ವಾಹಕರ 10 ಸಂಭಂಧಿಕರು ಹಾಗೂ ನಿಕಟವರ್ತಿಗಳ ಹೆಸರಲ್ಲಿ ನಕಲಿ ಕಾರ್ಡ್ ಸೃಷ್ಟಿಸಿದ್ದಾರೆ.ಪರಿಶೀಲನೆ ವೇಳೆ 12,35,916/- ರೂ ಅವ್ಯವಹಾರ ನಡೆದಿರುವುದು ಸಾಬೀತಾಗಿದೆ.ಹಾಲು ಶೇಖರಣೆ ಮಾಡಿರುವ ಖರೀದಿಗೂ ಹಾಗೂ ಬಟವಾಡೆ ಮಾಡಿರುವ ಮೊತ್ತಕ್ಕೂ ವೆತ್ಯಾಸ ಕಂಡುಬಂದಿದೆ.ಸಂಘದ ಆಡಳಿತ ಮಂಡಳಿ ಗಮನಕ್ಕೆ ಬಾರದೆ ಹುರಾ ಹಾಲು ಉತ್ಪಾದಕರ ಸಂಘದಿಂದ 1 ಲಕ್ಷ ಹಣ ಪಾವತಿ ಮಾಡಿರುವುದು ಸಹ ಕಂಡುಬಂದಿದೆ.ಸಂಘದ ಕಂಪ್ಯೂಟರ್ ನಲ್ಲಿರುವ ಬಟವಾಡೆ ಪಟ್ಟಿಗೂ ಬ್ಯಾಂಕ್ ಗೆ ಒದಗಿಸಿರುವ ಬಟವಾಡ ಪಟ್ಟಿಗೂ ವೆತ್ಯಾಸ ಕಂಡು ಬಂದಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಪೂರ್ಣ ವರದಿ ಸಲ್ಲಿಸುವಂತೆ ನೋಟೀಸ್ ನೀಡಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *