ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ ಗುಳುಂ…ವರದಿ ಸಲ್ಲಿಸುವಂತೆ ಆಡಳಿತ ಮಂಡಳಿಗೆ ನೋಟೀಸ್…

ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ ಗುಳುಂ…ವರದಿ ಸಲ್ಲಿಸುವಂತೆ ಆಡಳಿತ ಮಂಡಳಿಗೆ ನೋಟೀಸ್…

ನಂಜನಗೂಡು,ಫೆ19,Tv10 ಕನ್ನಡ

ನಂಜನಗೂಡು ತಾಲೂಕು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸಿಬ್ಬಂದಿಗಳು ಸೇರಿ ನಡೆಸಿದ ಅವ್ಯವಹಾರ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದೆ.12,35,916/- ರೂ ಅವ್ಯವಹಾರ ನಡೆದಿರುವುದು ಪರಿಶೀಲನೆಯಲ್ಲಿ ಖಚಿತವಾದ ಹಿನ್ನಲೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಮನೋಜ್ ಕುಮಾರ್ ರವರು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನೋಟೀಸ್ ನೀಡಿ ಮುಖ್ಯ ಕಾರ್ಯನಿರ್ವಾಹಕರು ನಡೆಸಿದ ಅವ್ಯವಹಾರಗಳ ಬಗ್ಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ 7 ದಿನಗಳ ಒಳಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.

ಮುಖ್ಯ ಕಾರ್ಯನಿರ್ವಾಹಕ ಹಾಗೂ ಸಿಬ್ಬಂದಿಗಳು ಸೇರಿ ಉತ್ಪಾದಕರಿಂದ ಶೇಖರಿಸಿದ ಹಾಲಿಗೆ ನೀರು ಹಾಗೂ ಇತರ ಸಾಮಗ್ರಿಗಳನ್ನ ಮಿಶ್ರಣ ಒಕ್ಕೂಟಕ್ಕೆ ಸರಬರಾಜು ಮಾಡಿದ್ದಾರೆ.ಹೈನುಗಾರಿಕೆ ಮಾಡದ ತಮ್ಮ ಸಂಭಂಧಿಕರ ಹೆಸರಿಗೆ ಹೆಚ್ಚುವರಿ ಪ್ರಮಾಣದ ಹಾಲನ್ನ ನಮೂದಿಸಿ ಹಣ ಪಾವತಿ ಮಾಡಿದ್ದಾರೆ.5/- ರೂ ಪ್ರೋತ್ಸಾಹ ಧನ ನೀಡುವಲ್ಲಿ ಭೋಗಸ್ ಕಾರ್ಡ್ ಸೃಷ್ಟಿಸಿದ್ದಾರೆ.ಮುಖ್ಯ ಕಾರ್ಯನಿರ್ವಾಹಕರ 10 ಸಂಭಂಧಿಕರು ಹಾಗೂ ನಿಕಟವರ್ತಿಗಳ ಹೆಸರಲ್ಲಿ ನಕಲಿ ಕಾರ್ಡ್ ಸೃಷ್ಟಿಸಿದ್ದಾರೆ.ಪರಿಶೀಲನೆ ವೇಳೆ 12,35,916/- ರೂ ಅವ್ಯವಹಾರ ನಡೆದಿರುವುದು ಸಾಬೀತಾಗಿದೆ.ಹಾಲು ಶೇಖರಣೆ ಮಾಡಿರುವ ಖರೀದಿಗೂ ಹಾಗೂ ಬಟವಾಡೆ ಮಾಡಿರುವ ಮೊತ್ತಕ್ಕೂ ವೆತ್ಯಾಸ ಕಂಡುಬಂದಿದೆ.ಸಂಘದ ಆಡಳಿತ ಮಂಡಳಿ ಗಮನಕ್ಕೆ ಬಾರದೆ ಹುರಾ ಹಾಲು ಉತ್ಪಾದಕರ ಸಂಘದಿಂದ 1 ಲಕ್ಷ ಹಣ ಪಾವತಿ ಮಾಡಿರುವುದು ಸಹ ಕಂಡುಬಂದಿದೆ.ಸಂಘದ ಕಂಪ್ಯೂಟರ್ ನಲ್ಲಿರುವ ಬಟವಾಡೆ ಪಟ್ಟಿಗೂ ಬ್ಯಾಂಕ್ ಗೆ ಒದಗಿಸಿರುವ ಬಟವಾಡ ಪಟ್ಟಿಗೂ ವೆತ್ಯಾಸ ಕಂಡು ಬಂದಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಪೂರ್ಣ ವರದಿ ಸಲ್ಲಿಸುವಂತೆ ನೋಟೀಸ್ ನೀಡಲಾಗಿದೆ…

Spread the love

Related post

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ…
ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಮೈಸೂರು,ಮಾ17,Tv10 ಕನ್ನಡ ಕಳೆದುಹೋಗಿದ್ದ 37 ಮೊಬೈಲ್ ಫೋನ್ ಗಳನ್ನು ದೇವರಾಜ ಠಾಣೆ ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದರು. ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಘು.ಕೆ.ಆರ್. ಉಪ ನಿರೀಕ್ಷಕರಾದ…
ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಬೆಂಗಳೂರು,ಮಾ17,Tv10 ಕನ್ನಡ ಬೆಂಗಳೂರಿನ ಗುಬ್ಬಿ ವೀರಣ್ಣ ಕಲಾ ಮಂಟಪದಲ್ಲಿ ಸಿಟಿ ಲೈಟ್ಸ್ ಚಿತ್ರೀಕರಣ ನಡೆಯುವ ಸಂಧರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ರವರ ಹುಟ್ಟು ಹಬ್ಬವನ್ನ ಆಚರಿಸಲಾಯಿತು. ಕೇಕ್…

Leave a Reply

Your email address will not be published. Required fields are marked *