ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ನಂಜನಗೂಡು,ಫೆ19,Tv10 ಕನ್ನಡ

ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೊಂಬೆಗಳನ್ನ ಅಳವಡಿಸುವುದನ್ನ ನೋಡಿದ್ದೇವೆ.ಆದ್ರೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ

ಹುಡುಕಿದ್ದಾನೆ.ಅರೆಬೆತ್ತಲೆಯಾಗಿ ಇರುವ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರ ಚರ್ಚೆಗೆ ಗ್ರಾಸವಾಗಿದ್ದಾರೆ

ನಂಜನಗೂಡಿನಿಂದ ಮಡಹಳ್ಳಿ ಹಾಗೂ ತಗಡೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕಕ್ಕರಹಟ್ಟಿ ಗ್ರಾಮದ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ

ಗ್ರಾಸವಾಗಿದ್ದಾನೆ.ತನ್ನ ನಾಲ್ಕು ಎಕ್ರೆಯಲ್ಲಿ ಬೆಳೆದ ಬಾಳೆ ಬೆಳೆ ಸೊಗಸಾಗಿ ಮೂಡಿ ಬಂದಿದೆ.ಬೆಳೆ ಮೇಲೆ ಸಾರ್ವಜನಿಕರ ದೃಷ್ಟಿ ಬೀಳಬಾರದು ಎಂಬ ಕಾರಣಕ್ಕೆ ದೃಷ್ಟಿ ಬೊಂಬೆಗಳನ್ನ ಅಳವಡಿಸುವ ಬದಲು ಮಾಡೆಲ್ ಗಳ ಅರೆಬೆತ್ತಲೆ ಫೋಟೋಗಳನ್ನ ಅಳವಡಿಸಿದ್ದಾನೆ.ತನ್ನ ಜಮೀನಿನ ಸುತ್ತು ಸುಮಾರು 10 ಸ್ಥಳಗಳಲ್ಲಿ ಮಾಡೆಲ್ ಗಳ ಚಿತ್ರಗಳು ರಾರಾಜಿಸುತ್ತಿವೆ.ದಾರಿಹೋಕರಂತೂ ಸೊಗಸಾಗಿ ಸಮೃದ್ದಿಯಾಗಿ ಬೆಳೆದ ಬಾಳೆ ಗಿಡಗಳ ಮೇಲೆ ದೃಷ್ಟಿ ಹರಿಸದೆ ಮಾಡೆಲ್ ಗಳನ್ನ ಕಣ್ತುಂಬಿಕೊಂಡು ಸಾಗುತ್ತಿದ್ದಾರಂತೆ.ರೈತ ಸೋಮೇಶ್ ಐನಾತಿ ಐಡಿಯಾ ಕೆಲವು ಗ್ರಾಮಸ್ಥರನ್ನ ಕೆರಳಿಸಿದ್ರೆ ಪೆಡ್ಡೆ ಹುಡುಗರ ನಿದ್ದೆ ಕೆಡಿಸಿರುವುದಂತೂ ನಿಜ.ಒಟ್ಟಾರೆ ಸೋಮೇಶ್ ರವರ ಐಡಿಯಾನ ಹೊಗಳಬೇಕೋ…ತೆಗಳಬೇಕೋ…? ಗ್ರಾಮಸ್ಥರ ನಿರ್ಧಾರಕ್ಕೆ ಬಿಟ್ಟಿದ್ದು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *