ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ನಂಜನಗೂಡು,ಫೆ19,Tv10 ಕನ್ನಡ

ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೊಂಬೆಗಳನ್ನ ಅಳವಡಿಸುವುದನ್ನ ನೋಡಿದ್ದೇವೆ.ಆದ್ರೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ

ಹುಡುಕಿದ್ದಾನೆ.ಅರೆಬೆತ್ತಲೆಯಾಗಿ ಇರುವ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರ ಚರ್ಚೆಗೆ ಗ್ರಾಸವಾಗಿದ್ದಾರೆ

ನಂಜನಗೂಡಿನಿಂದ ಮಡಹಳ್ಳಿ ಹಾಗೂ ತಗಡೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕಕ್ಕರಹಟ್ಟಿ ಗ್ರಾಮದ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ

ಗ್ರಾಸವಾಗಿದ್ದಾನೆ.ತನ್ನ ನಾಲ್ಕು ಎಕ್ರೆಯಲ್ಲಿ ಬೆಳೆದ ಬಾಳೆ ಬೆಳೆ ಸೊಗಸಾಗಿ ಮೂಡಿ ಬಂದಿದೆ.ಬೆಳೆ ಮೇಲೆ ಸಾರ್ವಜನಿಕರ ದೃಷ್ಟಿ ಬೀಳಬಾರದು ಎಂಬ ಕಾರಣಕ್ಕೆ ದೃಷ್ಟಿ ಬೊಂಬೆಗಳನ್ನ ಅಳವಡಿಸುವ ಬದಲು ಮಾಡೆಲ್ ಗಳ ಅರೆಬೆತ್ತಲೆ ಫೋಟೋಗಳನ್ನ ಅಳವಡಿಸಿದ್ದಾನೆ.ತನ್ನ ಜಮೀನಿನ ಸುತ್ತು ಸುಮಾರು 10 ಸ್ಥಳಗಳಲ್ಲಿ ಮಾಡೆಲ್ ಗಳ ಚಿತ್ರಗಳು ರಾರಾಜಿಸುತ್ತಿವೆ.ದಾರಿಹೋಕರಂತೂ ಸೊಗಸಾಗಿ ಸಮೃದ್ದಿಯಾಗಿ ಬೆಳೆದ ಬಾಳೆ ಗಿಡಗಳ ಮೇಲೆ ದೃಷ್ಟಿ ಹರಿಸದೆ ಮಾಡೆಲ್ ಗಳನ್ನ ಕಣ್ತುಂಬಿಕೊಂಡು ಸಾಗುತ್ತಿದ್ದಾರಂತೆ.ರೈತ ಸೋಮೇಶ್ ಐನಾತಿ ಐಡಿಯಾ ಕೆಲವು ಗ್ರಾಮಸ್ಥರನ್ನ ಕೆರಳಿಸಿದ್ರೆ ಪೆಡ್ಡೆ ಹುಡುಗರ ನಿದ್ದೆ ಕೆಡಿಸಿರುವುದಂತೂ ನಿಜ.ಒಟ್ಟಾರೆ ಸೋಮೇಶ್ ರವರ ಐಡಿಯಾನ ಹೊಗಳಬೇಕೋ…ತೆಗಳಬೇಕೋ…? ಗ್ರಾಮಸ್ಥರ ನಿರ್ಧಾರಕ್ಕೆ ಬಿಟ್ಟಿದ್ದು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *