ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ನಂಜನಗೂಡು,ಫೆ19,Tv10 ಕನ್ನಡ

ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೊಂಬೆಗಳನ್ನ ಅಳವಡಿಸುವುದನ್ನ ನೋಡಿದ್ದೇವೆ.ಆದ್ರೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ

ಹುಡುಕಿದ್ದಾನೆ.ಅರೆಬೆತ್ತಲೆಯಾಗಿ ಇರುವ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರ ಚರ್ಚೆಗೆ ಗ್ರಾಸವಾಗಿದ್ದಾರೆ

ನಂಜನಗೂಡಿನಿಂದ ಮಡಹಳ್ಳಿ ಹಾಗೂ ತಗಡೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕಕ್ಕರಹಟ್ಟಿ ಗ್ರಾಮದ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ

ಗ್ರಾಸವಾಗಿದ್ದಾನೆ.ತನ್ನ ನಾಲ್ಕು ಎಕ್ರೆಯಲ್ಲಿ ಬೆಳೆದ ಬಾಳೆ ಬೆಳೆ ಸೊಗಸಾಗಿ ಮೂಡಿ ಬಂದಿದೆ.ಬೆಳೆ ಮೇಲೆ ಸಾರ್ವಜನಿಕರ ದೃಷ್ಟಿ ಬೀಳಬಾರದು ಎಂಬ ಕಾರಣಕ್ಕೆ ದೃಷ್ಟಿ ಬೊಂಬೆಗಳನ್ನ ಅಳವಡಿಸುವ ಬದಲು ಮಾಡೆಲ್ ಗಳ ಅರೆಬೆತ್ತಲೆ ಫೋಟೋಗಳನ್ನ ಅಳವಡಿಸಿದ್ದಾನೆ.ತನ್ನ ಜಮೀನಿನ ಸುತ್ತು ಸುಮಾರು 10 ಸ್ಥಳಗಳಲ್ಲಿ ಮಾಡೆಲ್ ಗಳ ಚಿತ್ರಗಳು ರಾರಾಜಿಸುತ್ತಿವೆ.ದಾರಿಹೋಕರಂತೂ ಸೊಗಸಾಗಿ ಸಮೃದ್ದಿಯಾಗಿ ಬೆಳೆದ ಬಾಳೆ ಗಿಡಗಳ ಮೇಲೆ ದೃಷ್ಟಿ ಹರಿಸದೆ ಮಾಡೆಲ್ ಗಳನ್ನ ಕಣ್ತುಂಬಿಕೊಂಡು ಸಾಗುತ್ತಿದ್ದಾರಂತೆ.ರೈತ ಸೋಮೇಶ್ ಐನಾತಿ ಐಡಿಯಾ ಕೆಲವು ಗ್ರಾಮಸ್ಥರನ್ನ ಕೆರಳಿಸಿದ್ರೆ ಪೆಡ್ಡೆ ಹುಡುಗರ ನಿದ್ದೆ ಕೆಡಿಸಿರುವುದಂತೂ ನಿಜ.ಒಟ್ಟಾರೆ ಸೋಮೇಶ್ ರವರ ಐಡಿಯಾನ ಹೊಗಳಬೇಕೋ…ತೆಗಳಬೇಕೋ…? ಗ್ರಾಮಸ್ಥರ ನಿರ್ಧಾರಕ್ಕೆ ಬಿಟ್ಟಿದ್ದು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *