ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ನಂಜನಗೂಡು,ಫೆ19,Tv10 ಕನ್ನಡ

ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೊಂಬೆಗಳನ್ನ ಅಳವಡಿಸುವುದನ್ನ ನೋಡಿದ್ದೇವೆ.ಆದ್ರೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ

ಹುಡುಕಿದ್ದಾನೆ.ಅರೆಬೆತ್ತಲೆಯಾಗಿ ಇರುವ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರ ಚರ್ಚೆಗೆ ಗ್ರಾಸವಾಗಿದ್ದಾರೆ

ನಂಜನಗೂಡಿನಿಂದ ಮಡಹಳ್ಳಿ ಹಾಗೂ ತಗಡೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕಕ್ಕರಹಟ್ಟಿ ಗ್ರಾಮದ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ

ಗ್ರಾಸವಾಗಿದ್ದಾನೆ.ತನ್ನ ನಾಲ್ಕು ಎಕ್ರೆಯಲ್ಲಿ ಬೆಳೆದ ಬಾಳೆ ಬೆಳೆ ಸೊಗಸಾಗಿ ಮೂಡಿ ಬಂದಿದೆ.ಬೆಳೆ ಮೇಲೆ ಸಾರ್ವಜನಿಕರ ದೃಷ್ಟಿ ಬೀಳಬಾರದು ಎಂಬ ಕಾರಣಕ್ಕೆ ದೃಷ್ಟಿ ಬೊಂಬೆಗಳನ್ನ ಅಳವಡಿಸುವ ಬದಲು ಮಾಡೆಲ್ ಗಳ ಅರೆಬೆತ್ತಲೆ ಫೋಟೋಗಳನ್ನ ಅಳವಡಿಸಿದ್ದಾನೆ.ತನ್ನ ಜಮೀನಿನ ಸುತ್ತು ಸುಮಾರು 10 ಸ್ಥಳಗಳಲ್ಲಿ ಮಾಡೆಲ್ ಗಳ ಚಿತ್ರಗಳು ರಾರಾಜಿಸುತ್ತಿವೆ.ದಾರಿಹೋಕರಂತೂ ಸೊಗಸಾಗಿ ಸಮೃದ್ದಿಯಾಗಿ ಬೆಳೆದ ಬಾಳೆ ಗಿಡಗಳ ಮೇಲೆ ದೃಷ್ಟಿ ಹರಿಸದೆ ಮಾಡೆಲ್ ಗಳನ್ನ ಕಣ್ತುಂಬಿಕೊಂಡು ಸಾಗುತ್ತಿದ್ದಾರಂತೆ.ರೈತ ಸೋಮೇಶ್ ಐನಾತಿ ಐಡಿಯಾ ಕೆಲವು ಗ್ರಾಮಸ್ಥರನ್ನ ಕೆರಳಿಸಿದ್ರೆ ಪೆಡ್ಡೆ ಹುಡುಗರ ನಿದ್ದೆ ಕೆಡಿಸಿರುವುದಂತೂ ನಿಜ.ಒಟ್ಟಾರೆ ಸೋಮೇಶ್ ರವರ ಐಡಿಯಾನ ಹೊಗಳಬೇಕೋ…ತೆಗಳಬೇಕೋ…? ಗ್ರಾಮಸ್ಥರ ನಿರ್ಧಾರಕ್ಕೆ ಬಿಟ್ಟಿದ್ದು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *