ಗೃಹಿಣಿ ಅನುಮಾನಾಸ್ಪದ ಸಾವು…ಮರ್ಯಾದಾ ಹತ್ಯೆ ಶಂಕೆ…ಸಮಗ್ರ ತೆನಿಖೆ ನಡೆಸುವಂತೆ ಗ್ರಾಮಸ್ಥರ ಆಗ್ರಹ…

ಗೃಹಿಣಿ ಅನುಮಾನಾಸ್ಪದ ಸಾವು…ಮರ್ಯಾದಾ ಹತ್ಯೆ ಶಂಕೆ…ಸಮಗ್ರ ತೆನಿಖೆ ನಡೆಸುವಂತೆ ಗ್ರಾಮಸ್ಥರ ಆಗ್ರಹ…

ನಂಜನಗೂಡು,ಫೆ21,Tv10 ಕನ್ನಡ

ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಕೂಗು ಕೇಳಿ ಬರುತ್ತಿದೆ.ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ ಸಾವಿನ ಬಗ್ಗೆ ಸಮಗ್ರ ತೆನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಪತಿ ಹಾಗೂ ತಮ್ಮ ಇಬ್ಬರೂ ಸೇರಿ ಹತ್ಯೆ ಮಾಡಿರಬಹುದೆಂಬ ಶಂಕೆಯನ್ನ ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.ಹುಲ್ಲಹಳ್ಳಿ ಠಾಣೆ ಪೊಲೀಸರು ಕೂಡಲೇ ಈ ಪ್ರಕರಣದ ಬಗ್ಗೆ ತೆನಿಖೆ ಕೈಗೊಳ್ಳಬೇಕಿದೆ.

ದುಗ್ಗಹಳ್ಳಿ ಗ್ರಾಮದ ಸುಚಿತ್ರ(38) ಅನುಮಾನಾಸ್ಪದವಾಗಿ ಮೃತಪಟ್ಟ ಗೃಹಿಣಿ.ಈಕೆಯ ಪತಿ ರವಿ ಹಾಗೂ ಈಕೆಯ ತಮ್ಮ ಸತೀಶ ಸೇರಿ ಕೊಲೆ ಮಾಡಿ ಪ್ರಕರಣವನ್ನ ಮುಚ್ಚಿಹಾಕಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.5 ತಿಂಗಳ ಹಿಂದೆ ಇದ್ದಕ್ಕಿದ್ದಂತೆ ಸುಚಿತ್ರಾ ಸಾವನ್ನಪ್ಪಿದ ಬಗ್ಗೆ ಅನುಮಾನದ ಹುತ್ತ ಎದ್ದಿದೆ.ಸುಮಾರು 15 ವರ್ಷಗಳ ಹಿಂದೆ ದುಗ್ಗಹಳ್ಳಿ ಗ್ರಾಮದ ಸುಚಿತ್ರಾಳನ್ನ ಏಚಗುಂಡ್ಲ ಗ್ರಾಮದ ರವಿ ಜೊತೆ ಅದ್ದೂರಿಯಾಗಿ ವಿವಾಹ ನೆರವೇರಿಸಲಾಗಿತ್ತು.ದಂಪತಿಗೆ ಇಬ್ಬರು ಮಕ್ಕಳೂ ಸಹ ಇದ್ದಾರೆ.ಮೂರ್ನಾಲ್ಕು ವರ್ಷಗಳಿಂದ ಸುಚಿತ್ರಾ ನಡತೆಯ ಬಗ್ಗೆ ರವಿಗೆ ಅನುಮಾನ ಬಂದಿದೆ.ಪಕ್ಕದ ಬಡಾವಣೆಯ ಅನ್ಯಕೋಮಿನ ವಿವಾಹಿತ ವ್ಯಕ್ತಿಯೊಂದಿಗೆ ಸಂಪರ್ಕ ಇಟ್ಟುಕೊಂಡಿರುವ ಮಾಹಿತಿ ಪತಿ ರವಿಗೆ ಬಂದಿದೆ.ಈ ವಿಚಾರವನ್ನ ರವಿ ತನ್ನ ಭಾವಮೈದ ಸತೀಶ್ ಜೊತೆ ಹೇಳಿಕೊಂಡಿದ್ದಾನೆ.ಕೆಲವು ದಿನಗಳ ಕಾಲ ಸುಚಿತ್ರಾಳನ್ನ ಫಾಲೋ ಮಾಡಿದ ಪತಿ ಹಾಗೂ ತಮ್ಮನಿಗೆ ಸಂಪರ್ಕ ಇರುವುದು ಖಚಿತವಾಗಿದೆ.ಕಾರಣ ನೀಡಿ ರವಿ,ಸುಚಿತ್ರ ಹಾಗೂ ಮಕ್ಕಳನ್ನ ಸತೀಶ ದುಗ್ಗಹಳ್ಳಿಗೆ ಕರೆಸಿಕೊಂಡಿದ್ದಾನೆ.22-07-2024 ರಂದು ಸತೀಶನ ಮನೆಗೆ ದಂಪತಿ ಮಕ್ಕಳ ಸಮೇತ ಬಂದಿದ್ದಾರೆ.ಸತೀಶ ಹೊಸದಾಗಿ ನಿರ್ಮಿಸಿದ್ದ ಕೋಳಿಫಾರಂ ನಲ್ಲಿ ಸುಚಿತ್ರ ಸಾವನ್ನಪ್ಪಿದ್ದಾಳೆ.ಈ ವಿಚಾರವನ್ನ ಪೊಲೀಸರಿಗೂ ತಿಳಿಸದೆ ಗ್ರಾಮಸ್ಥರ ಗಮನಕ್ಕೂ ತರದೆ ಏಕಾ ಏಕಿ ಮೃತದೇಹವನ್ನ ಏಚಗುಂಡ್ಲ ಗ್ರಾಮಕ್ಕೆ ಕೊಂಡೊಯ್ದು ತರಾತುರಿಯಲ್ಲಿ ಅಂತ್ಯಕ್ರಿಯೆ ಮಾಡಿ ಕೈತೊಳೆದುಕೊಂಡಿದ್ದಾರೆ.ಆರಂಭದಲ್ಲಿ ಕಿಂಚತ್ತು ಸುಳಿವು ನೀಡದ ಸತೀಶ ಕೆಲವು ದಿನಗಳಿಂದ ರಾಜಾರೋಷವಾಗಿ ಸಾಯಿಸಿದ್ದೀನಿ ಎಂದು ಹೇಳಿಕೊಂಡು ತಿರುಗಾಡುತ್ತಿರುವುದು ಗ್ರಾಮದ ಜನರಿಗೆ ತಲುಪಿದೆ.ಸುಚಿತ್ರಾ ಆರೋಗ್ಯವಾಗಿದ್ದರೂ ಸಾವನ್ನಪ್ಪಿದ್ದು ಹೇಗೆ ಎಂಬ ಪ್ರಶ್ನೆ ಸ್ಥಳೀಯರದ್ದು.ಆತ್ಮಹತ್ಯೆ ಆಗಿದ್ದಲ್ಲಿ ಪೊಲೀಸರಿಗೂ ತಿಳಿಸದೆ ತರಾತುರಿಯಲ್ಲಿ ಅಂತ್ಯಕ್ರಿಯೆ ನಡೆಸಿದ್ದು ಏಕೆ..? ಗ್ರಾಮದ ಜನತೆಯನ್ನ ದೂರವಿರಿಸಿ ಮೃತದೇಹವನ್ನ ಸುಟ್ಟುಹಾಕಿರುವುದು ಅನುಮಾನಗಳಿಗೆ ಪುಷ್ಠಿ ನೀಡುತ್ತಿದೆ.ಈ ಸಾವಿಗೆ ಹೆತ್ತ ಪೋಷಕರಾದ ಶಿವರಾಜಪ್ಪ,ಪ್ರೇಮ ರವರ ಪಾತ್ರವೂ ಇದೆ ಎಂದು ಹೇಳಲಾಗುತ್ತಿದೆ.

ಅನ್ಯಕೋಮಿನ ವ್ಯಕ್ತಿಯೊಡನೆ ಸಂಪರ್ಕ ಬೆಳೆಸಿದ್ದೇ ಸುಚಿತ್ರ ಸಾವಿಗೆ ಕಾರಣವಾಯ್ತೇ…? ತರಾತುರಿಯಲ್ಲಿ ಅಂತ್ಯೆಕ್ರಿಯೆ ನಡೆಸಿದ್ದಾದರೂ ಏಕೆ..?ರಾಜಾರೋಷವಾಗಿ ತಾನೇ ಕೊಲೆ ಮಾಡಿರುವುದಾಗಿ ಹೇಳುತ್ತಿರುವ ಸತೀಶನ ಇಂಗಿತವಾದರೂ ಏನು…? ಇವೆಲ್ಲಾ ಪ್ರಶ್ನೆಗಳಿಗೆ ಪೊಲೀಸರ ತೆನಿಖೆಯಿಂದ ಉತ್ತರ ಸಿಗಬೇಕಿದೆ.ಆದಷ್ಟೂ ಶೀಘ್ರದಲ್ಲಿ ತಮ್ಮ ಸತೀಶ ಹಾಗೂ ಪತಿ ರವಿಯನ್ನ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಬೇಕಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *