ಬಾರ್ ಅಂಡ್ ರೆಸ್ಟೋರೆಂಟ್ ಗೆ ವಂಚಿಸಿದ ಕ್ಯಾಷಿಯರ್…6.70 ಲಕ್ಷಕ್ಕೆ ಉಂಡೆನಾಮ…ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಬಾರ್ ಅಂಡ್ ರೆಸ್ಟೋರೆಂಟ್ ಗೆ ವಂಚಿಸಿದ ಕ್ಯಾಷಿಯರ್…6.70 ಲಕ್ಷಕ್ಕೆ ಉಂಡೆನಾಮ…ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ನಂಜನಗೂಡು,ಫೆ26,Tv10 ಕನ್ನಡ

ಬ್ಯಾಂಕ್ ಗೆ ಕಟ್ಟಬೇಕಿದ್ದ ಹಣವನ್ನ ಕ್ಯಾಶಿಯರ್ ಲಪಟಾಯಿಸಿದ ಪ್ರಕರಣ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.6.7 ಲಕ್ಷ ಹೊತ್ತೊಯ್ದ ಕ್ಯಾಷಿಯರ್ ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಗಾಜನೂರು ಗ್ರಾಮದ ಮಹದೇವ್ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಹಲವು ತಿಂಗಳಿಂದ ಮಹದೇವ್ ನಂಜನಗೂಡು ಗುಂಡ್ಲುಪೇಟ್ ಮುಖ್ಯ ರಸ್ತೆಯಲ್ಲಿರುವ ಎಸ್.ಎಲ್.ವಿ.ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ.ಅಲ್ಲಿ ವ್ಯವಸ್ಥಾಪಕರಾಗಿದ್ದ ಆನಂದ್ ಎಂಬುವರು ಕಳೆದ ವರ್ಷ ಜುಲೈ ನಲ್ಲಿ ಕಾರ್ಯನಿಮಿತ್ತ ರಜೆ ಪಡೆದು ತೆರಳಿದ್ದಾಗ ವ್ಯಾಪಾರ ವಹಿವಾಟಿನಲ್ಲಿ ಬಂದ ಹಣವನ್ನ ಬ್ಯಾಂಕ್ ಗೆ ಕಟ್ಟುವಂತೆ ಮಹದೇವ್ ಗೆ ತಿಳಿಸಿ ತೆರಳಿದ್ದರು.ರಜೆ ಮುಗಿಸಿ ವಾಪಸ್ ಬಂದಾಗ ವ್ಯಾಪಾರವಾಗಿ ಸಂಗ್ರಹವಾಗಿದ್ದ 6.70 ಲಕ್ಷ ಹಣ ಕ್ಯಾಶಿಯರ್ ಮಹದೇವ್ ಕಟ್ಟದೆ ಕೆಲಸಕ್ಕೂ ಬಾರದೆ ನಾಪತ್ತೆಯಾಗಿದ್ದರು.ಮಹದೇವ್ ರನ್ನ ಪತ್ತೆ ಹಚ್ಚಿ ಹಣ ಹಿಂದಿರುಗಿಸುವಂತೆ ಕೇಳಿದಾಗ ಸಮಯಾವಕಾಶ ಪಡೆದಿದ್ದರು.ಹಣ ಹಿಂದಿರುಗಿಸದ ಹಿನ್ನಲೆ ಆನಂದ್ ರವರು ಮಹದೇವ್ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *