ಬಾರ್ ಅಂಡ್ ರೆಸ್ಟೋರೆಂಟ್ ಗೆ ವಂಚಿಸಿದ ಕ್ಯಾಷಿಯರ್…6.70 ಲಕ್ಷಕ್ಕೆ ಉಂಡೆನಾಮ…ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಬಾರ್ ಅಂಡ್ ರೆಸ್ಟೋರೆಂಟ್ ಗೆ ವಂಚಿಸಿದ ಕ್ಯಾಷಿಯರ್…6.70 ಲಕ್ಷಕ್ಕೆ ಉಂಡೆನಾಮ…ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ನಂಜನಗೂಡು,ಫೆ26,Tv10 ಕನ್ನಡ

ಬ್ಯಾಂಕ್ ಗೆ ಕಟ್ಟಬೇಕಿದ್ದ ಹಣವನ್ನ ಕ್ಯಾಶಿಯರ್ ಲಪಟಾಯಿಸಿದ ಪ್ರಕರಣ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.6.7 ಲಕ್ಷ ಹೊತ್ತೊಯ್ದ ಕ್ಯಾಷಿಯರ್ ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಗಾಜನೂರು ಗ್ರಾಮದ ಮಹದೇವ್ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಹಲವು ತಿಂಗಳಿಂದ ಮಹದೇವ್ ನಂಜನಗೂಡು ಗುಂಡ್ಲುಪೇಟ್ ಮುಖ್ಯ ರಸ್ತೆಯಲ್ಲಿರುವ ಎಸ್.ಎಲ್.ವಿ.ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ.ಅಲ್ಲಿ ವ್ಯವಸ್ಥಾಪಕರಾಗಿದ್ದ ಆನಂದ್ ಎಂಬುವರು ಕಳೆದ ವರ್ಷ ಜುಲೈ ನಲ್ಲಿ ಕಾರ್ಯನಿಮಿತ್ತ ರಜೆ ಪಡೆದು ತೆರಳಿದ್ದಾಗ ವ್ಯಾಪಾರ ವಹಿವಾಟಿನಲ್ಲಿ ಬಂದ ಹಣವನ್ನ ಬ್ಯಾಂಕ್ ಗೆ ಕಟ್ಟುವಂತೆ ಮಹದೇವ್ ಗೆ ತಿಳಿಸಿ ತೆರಳಿದ್ದರು.ರಜೆ ಮುಗಿಸಿ ವಾಪಸ್ ಬಂದಾಗ ವ್ಯಾಪಾರವಾಗಿ ಸಂಗ್ರಹವಾಗಿದ್ದ 6.70 ಲಕ್ಷ ಹಣ ಕ್ಯಾಶಿಯರ್ ಮಹದೇವ್ ಕಟ್ಟದೆ ಕೆಲಸಕ್ಕೂ ಬಾರದೆ ನಾಪತ್ತೆಯಾಗಿದ್ದರು.ಮಹದೇವ್ ರನ್ನ ಪತ್ತೆ ಹಚ್ಚಿ ಹಣ ಹಿಂದಿರುಗಿಸುವಂತೆ ಕೇಳಿದಾಗ ಸಮಯಾವಕಾಶ ಪಡೆದಿದ್ದರು.ಹಣ ಹಿಂದಿರುಗಿಸದ ಹಿನ್ನಲೆ ಆನಂದ್ ರವರು ಮಹದೇವ್ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ…
ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ…
ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ…

Leave a Reply

Your email address will not be published. Required fields are marked *