ಪೆರೋಲ್ ನಲ್ಲಿ ಬಿಡುಗಡೆಯಾದ 3 ಖೈದಿಗಳು…ಓರ್ವ ಆತ್ಮಹತ್ಯೆ…ಮತ್ತೊಬ್ಬ ಒರಿಸ್ಸಾದಲ್ಲಿ ಅಂದರ್…ಮತ್ತೊಬ್ಬ ನಾಪತ್ತೆ…

ಪೆರೋಲ್ ನಲ್ಲಿ ಬಿಡುಗಡೆಯಾದ 3 ಖೈದಿಗಳು…ಓರ್ವ ಆತ್ಮಹತ್ಯೆ…ಮತ್ತೊಬ್ಬ ಒರಿಸ್ಸಾದಲ್ಲಿ ಅಂದರ್…ಮತ್ತೊಬ್ಬ ನಾಪತ್ತೆ…

ಮೈಸೂರು,ಫೆ27,Tv10 ಕನ್ನಡ

ಪೆರೋಲ್ ನಲ್ಲಿ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ಮೂವರು ಖೈದಿಗಳ ಪೈಕಿ ಓರ್ವ ಆತ್ಮಹತ್ಯೆ ಮಾಡಿಕೊಂಡರೆ ಮತ್ತೊಬ್ಬ ಒರಿಸ್ಸಾದಲ್ಲಿ ಗಾಂಜಾ ಪ್ರಕರಣದಲ್ಲಿ ಬಂಧನವಾದರೆ ಮತ್ತೊಬ್ಬ ನಾಪತ್ತೆಯಾಗಿದ್ದಾನೆ.ಈ ಸಂಭಂಧ ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಮೋಹನ್ ಕುಮಾರ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಸಜಾ ಖೈದಿಯಾಗಿದ್ದ ಹಾಸನ ಮೂಲದ ನವೀನ್ 60 ದಿನಗಳ ಅವಧಿಗೆ ಪೆರೋಲ್ ನಲ್ಲಿ ತೆರಳಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ.ಮತ್ತೊಬ್ಬ ಒರಿಸ್ಸಾ ರಾಜ್ಯದ ಸುನಿಲ್ ಬೀರಾ ಪೆರೋಲ್ ನಲ್ಲಿ ಬಿಡುಗಡೆಯಾದ ನಂತರ ನಾಪತ್ತೆಯಾಗಿದ್ದಾನೆ.ಮತ್ತೊಬ್ಬ ಖೈದಿ ವೆಂಕಣ್ಣ ಆಂದ್ರ ರಾಜ್ಯದ ವಿಶಾಖಪಟ್ಟಣ ನಿವಾಸಿ ವೆಂಕಣ್ಣ ಪೆರೋಲ್ ನಲ್ಲಿ ಬಿಡುಗಡೆಯಾಗಿ ತೆರಳಿದ ನಂತರ ಒರಿಸ್ಸಾನಲ್ಲಿ ಗಾಂಜಾ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.

ಹಾಸನದ ನವೀನ್ ಡಿಸೆಂಬರ್ 6 ರಂದು 60 ದಿನಗಳ ಅವಧಿಗೆ ಬಿಡುಗಡೆಯಾಗಿ ಸ್ವಗ್ರಾಮ ಹಲಸನಹಳ್ಳಿಗೆ ತೆರಳಿದ್ದಾನೆ.ಫೆ2 ರಂದು ಅವಧಿ ಮುಗಿದು ಶರಣಾಗಬೇಕಿತ್ತು.ಆದ್ರೆ ನವೀನ್ ಈ ಮಧ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಒರಿಸ್ಸಾ ಮೂಲದ ಸುನಿಲ್ ಬೀರಾ ಡಿ.12 ರಂದು 60 ದಿನಗಳ ಅವಧಿಗೆ ಬಿಡುಗಡೆಯಾಗಿ ಪೆರೋಲ್ ಮೇಲೆ ತೆರಳಿದ್ದಾನೆ.ನಿಗದಿತ ಸಮಯಕ್ಕೆ ಶರಣಾಗದೆ ನಾಪತ್ತೆಯಾಗಿದ್ದಾನೆ.

ಆಂಧ್ರ ರಾಜ್ಯ ವಿಶಾಖಪಟ್ಟಣದ ವೆಂಕಣ್ಣ ಡಿಸೆಂಬರ್ ನಲ್ಲಿ ತೆರಳಿದವರು ನಿಗದಿತ ಸಮಯಕ್ಕೆ ಹಿಂದಿರುಗಿ ಶರಣಾಗಿಲ್ಲ.ಈತ ಒರಿಸ್ಸಾದಲ್ಲಿ ಗಾಂಜಾ ಪ್ರಕರಣದಲ್ಲಿ ಸಿಲುಕಿ ಜೈಲುವಾಸಿಯಾಗಿದ್ದಾನೆ.

ವೆಂಕಣ್ಣ ಪ್ರಕರಣದಲ್ಲಿ ಒರಿಸ್ಸಾ ನ್ಯಾಯಾಲಯ ಜಾಮೀನು ನೀಡಿದ ನಂತರ ಮೈಸೂರು ಪೊಲೀಸರು ವಶಕ್ಕೆ ಪಡೆಯಬೇಕಿದೆ.ಸುನಿಲ್ ಬೀರಾ ಪ್ರಕರಣದಲ್ಲಿ ನಾಪತ್ತೆಯಾದವನನ್ನ ಹುಡುಕಬೇಕಿದೆ.ನವೀನ್ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ.ಒಟ್ಟಾರೆ ಪೆರೋಲ್ ನಲ್ಲಿ ತೆರಳಿದ ಖೈದಿಗಳು ಮೈಸೂರಿನ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *