ಪೆರೋಲ್ ನಲ್ಲಿ ಬಿಡುಗಡೆಯಾದ 3 ಖೈದಿಗಳು…ಓರ್ವ ಆತ್ಮಹತ್ಯೆ…ಮತ್ತೊಬ್ಬ ಒರಿಸ್ಸಾದಲ್ಲಿ ಅಂದರ್…ಮತ್ತೊಬ್ಬ ನಾಪತ್ತೆ…

ಪೆರೋಲ್ ನಲ್ಲಿ ಬಿಡುಗಡೆಯಾದ 3 ಖೈದಿಗಳು…ಓರ್ವ ಆತ್ಮಹತ್ಯೆ…ಮತ್ತೊಬ್ಬ ಒರಿಸ್ಸಾದಲ್ಲಿ ಅಂದರ್…ಮತ್ತೊಬ್ಬ ನಾಪತ್ತೆ…

ಮೈಸೂರು,ಫೆ27,Tv10 ಕನ್ನಡ

ಪೆರೋಲ್ ನಲ್ಲಿ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ಮೂವರು ಖೈದಿಗಳ ಪೈಕಿ ಓರ್ವ ಆತ್ಮಹತ್ಯೆ ಮಾಡಿಕೊಂಡರೆ ಮತ್ತೊಬ್ಬ ಒರಿಸ್ಸಾದಲ್ಲಿ ಗಾಂಜಾ ಪ್ರಕರಣದಲ್ಲಿ ಬಂಧನವಾದರೆ ಮತ್ತೊಬ್ಬ ನಾಪತ್ತೆಯಾಗಿದ್ದಾನೆ.ಈ ಸಂಭಂಧ ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಮೋಹನ್ ಕುಮಾರ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಸಜಾ ಖೈದಿಯಾಗಿದ್ದ ಹಾಸನ ಮೂಲದ ನವೀನ್ 60 ದಿನಗಳ ಅವಧಿಗೆ ಪೆರೋಲ್ ನಲ್ಲಿ ತೆರಳಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ.ಮತ್ತೊಬ್ಬ ಒರಿಸ್ಸಾ ರಾಜ್ಯದ ಸುನಿಲ್ ಬೀರಾ ಪೆರೋಲ್ ನಲ್ಲಿ ಬಿಡುಗಡೆಯಾದ ನಂತರ ನಾಪತ್ತೆಯಾಗಿದ್ದಾನೆ.ಮತ್ತೊಬ್ಬ ಖೈದಿ ವೆಂಕಣ್ಣ ಆಂದ್ರ ರಾಜ್ಯದ ವಿಶಾಖಪಟ್ಟಣ ನಿವಾಸಿ ವೆಂಕಣ್ಣ ಪೆರೋಲ್ ನಲ್ಲಿ ಬಿಡುಗಡೆಯಾಗಿ ತೆರಳಿದ ನಂತರ ಒರಿಸ್ಸಾನಲ್ಲಿ ಗಾಂಜಾ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.

ಹಾಸನದ ನವೀನ್ ಡಿಸೆಂಬರ್ 6 ರಂದು 60 ದಿನಗಳ ಅವಧಿಗೆ ಬಿಡುಗಡೆಯಾಗಿ ಸ್ವಗ್ರಾಮ ಹಲಸನಹಳ್ಳಿಗೆ ತೆರಳಿದ್ದಾನೆ.ಫೆ2 ರಂದು ಅವಧಿ ಮುಗಿದು ಶರಣಾಗಬೇಕಿತ್ತು.ಆದ್ರೆ ನವೀನ್ ಈ ಮಧ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಒರಿಸ್ಸಾ ಮೂಲದ ಸುನಿಲ್ ಬೀರಾ ಡಿ.12 ರಂದು 60 ದಿನಗಳ ಅವಧಿಗೆ ಬಿಡುಗಡೆಯಾಗಿ ಪೆರೋಲ್ ಮೇಲೆ ತೆರಳಿದ್ದಾನೆ.ನಿಗದಿತ ಸಮಯಕ್ಕೆ ಶರಣಾಗದೆ ನಾಪತ್ತೆಯಾಗಿದ್ದಾನೆ.

ಆಂಧ್ರ ರಾಜ್ಯ ವಿಶಾಖಪಟ್ಟಣದ ವೆಂಕಣ್ಣ ಡಿಸೆಂಬರ್ ನಲ್ಲಿ ತೆರಳಿದವರು ನಿಗದಿತ ಸಮಯಕ್ಕೆ ಹಿಂದಿರುಗಿ ಶರಣಾಗಿಲ್ಲ.ಈತ ಒರಿಸ್ಸಾದಲ್ಲಿ ಗಾಂಜಾ ಪ್ರಕರಣದಲ್ಲಿ ಸಿಲುಕಿ ಜೈಲುವಾಸಿಯಾಗಿದ್ದಾನೆ.

ವೆಂಕಣ್ಣ ಪ್ರಕರಣದಲ್ಲಿ ಒರಿಸ್ಸಾ ನ್ಯಾಯಾಲಯ ಜಾಮೀನು ನೀಡಿದ ನಂತರ ಮೈಸೂರು ಪೊಲೀಸರು ವಶಕ್ಕೆ ಪಡೆಯಬೇಕಿದೆ.ಸುನಿಲ್ ಬೀರಾ ಪ್ರಕರಣದಲ್ಲಿ ನಾಪತ್ತೆಯಾದವನನ್ನ ಹುಡುಕಬೇಕಿದೆ.ನವೀನ್ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ.ಒಟ್ಟಾರೆ ಪೆರೋಲ್ ನಲ್ಲಿ ತೆರಳಿದ ಖೈದಿಗಳು ಮೈಸೂರಿನ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *