RBI ನಲ್ಲಿ ಚಿರತೆ ಸೆರೆ…20 ದಿನಗಳ ಕಾಲ ನಡೆದ ಕಾರ್ಯಾಚರಣೆ ಯಶಸ್ವಿ…

RBI ನಲ್ಲಿ ಚಿರತೆ ಸೆರೆ…20 ದಿನಗಳ ಕಾಲ ನಡೆದ ಕಾರ್ಯಾಚರಣೆ ಯಶಸ್ವಿ…

ಮೈಸೂರು,ಫೆ28,Tv10 ಕನ್ನಡ

ಇನ್ಫೋಸಿಸ್ ನಲ್ಲಿ ಚಿರತೆ ಭೀತಿ ಮಾಸುವ ಮುನ್ನ ನೋಟು ಮುದ್ರಣಾಲಯದಲ್ಲಿ ಸೆರೆ ಸಿಕ್ಕಿದೆ.20 ದಿನಗಳ ಕಾಲ ನಡೆದಿದ ಕಾರ್ಯಾಚರಣೆ ಯಶಸ್ವಿಯಾಗಿದೆ.RBI ಆವರಣದಲ್ಲಿ ಚಿರತೆ ಚಲನವಲನಗಳು ಸಿಸಿ ಕ್ಯಾಮರಾದಲ್ಲಿ ಬೆಳಕಿಗೆ ಬರುತ್ತಿದ್ದಂತೆಯೇ ಮ್ಯಾನೇಜ್ ಮೆಂಟ್ ನವರು ಅರಣ್ಯ ಇಲಾಖೆಗೆ ದೂರು ನೀಡಿ ಸೆರೆ ಹಿಡಿಯುವಂತೆ ಮನವಿ ಸಲ್ಲಿಸಿದ್ದರು.20 ದಿನಗಳಿಂದ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗಿತ್ತು.ನಾಲ್ಕು ಸ್ಥಳಗಳಲ್ಲಿ ಬೋನು ಇರಿಸಲಾಗಿತ್ತು.ವಲಯ ಅರಣ್ಯಾಧಿಕಾರಿಗಳು,ಉಪ ವಲಯ ಅರಣ್ಯಾಧಿಕಾರಿಗಳು,ವನಪಾಲಕರು ಹಾಗೂ ಚಿರತೆ ಸಹಾಯಕ ಕಾರ್ಯಪಡೆ ಒಳಗೊಂಡಂತೆ 30 ಮಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ನೋಟು ಮುದ್ರಣಾಲಯದ ಹೊರಭಾಗದಲ್ಲಿ ಇರಿಸಲಾಗಿದ್ದ ಬೋನಿಗೆ ಇಂದು ಮುಂಜಾನೆ ಗಂಡು ಚಿರತೆ ಸೆರೆ ಸಿಕ್ಕಿದೆ.ಸೆರೆಯಾದ ಚಿರತೆಯನ್ನ ಸುರಕ್ಷಿತವಾಗಿ ಅರಣ್ಯ ಭವನಕ್ಕೆ ಸಾಗಿಸಿ ಪಶುವೈದ್ಯಾಧಿಕಾರಿಗಳಿಂದ ತಪಾಸಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ…

Spread the love

Related post

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ…
ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ…
ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ…

Leave a Reply

Your email address will not be published. Required fields are marked *