ಹುಣಸೂರು:ವೃದ್ದ ದಂಪತಿ ಭೀಕರ ಕೊಲೆ…ಹಾಡುಹಗಲೇ ತೋಟದ ಮನೆಯಲ್ಲಿ ಘಟನೆ…

ಹುಣಸೂರು:ವೃದ್ದ ದಂಪತಿ ಭೀಕರ ಕೊಲೆ…ಹಾಡುಹಗಲೇ ತೋಟದ ಮನೆಯಲ್ಲಿ ಘಟನೆ…

ಹುಣಸೂರು,ಮಾ3Tv10 ಕನ್ನಡ

ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.
ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ ಶಾಂತಮ್ಮ (52)ಮೃತಪಟ್ಟವರು.
ಇವರಿಗೆ ಗ್ರಾಮ‌ ಪಂಚಾಯ್ತಿ ಸದಸ್ಯ ದೇವರಾಜ್ ಸೇರಿದಂತೆ ಇಬ್ಬರು ಗಂಡು ಓರ್ವ ಮಗಳಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಇಂದು ಸಂಜೆ ಶುಂಠಿ ತುಂಬಿಕೊಳ್ಳಲು ಕುಕ್ಕೆ ತರಲು ಕಾರ್ಮಿಕ ಗಣೇಶ್ ತೋಟದ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.ರಕ್ತದ ಮಡುವಿನಲ್ಲಿ ಮೃತದೇಹಗಳನ್ನ ಕಂಡ ಗಣೇಶ್ ಕೂಡಲೇ ಪುತ್ರ ದೇವರಾಜ್ ಗೆ ತಿಳಿಸಿದ್ದಾರೆ.ದೇವರಾಜ್
ಮನೆಗೆ ಬಂದ ವೇಳೆಗೆ ಇಬ್ಬರೂ ಸಾವನ್ನಪ್ಪಿದ್ದರೆಂದು ಹೇಳಲಾಗಿದೆ.ಕೂಡಲೇ ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ,ಎಸ್ಪಿ ವಿಷ್ಣುವರ್ಧನ್ ,ಡಿವೈಎಸ್ಪಿ ಗೋಪಾಲಕೃಷ್ಣ,ಸಬ್ ಇನ್ಸ್ಪೆಕ್ಟರ್ ಲೋಲಾಕ್ಷಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೈಸೂರಿನಿಂದ ಶ್ವಾನದಳ. ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *