ಪುರೋಹಿತ ಕಾರ್ಮಿಕ ಫೆಡರೇಷನ್‌ ಅಸ್ತಿತ್ವಕ್ಕೆ… ಕಚೇರಿ ಉದ್ಘಾಟನೆ…

ಪುರೋಹಿತ ಕಾರ್ಮಿಕ ಫೆಡರೇಷನ್‌ ಅಸ್ತಿತ್ವಕ್ಕೆ… ಕಚೇರಿ ಉದ್ಘಾಟನೆ…

ಮೈಸೂರು,ಮಾ5,Tv10 ಕನ್ನಡ

ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್‌ನ ಮೈಸೂರು ಜಿಲ್ಲಾ ಮತ್ತು ತಾಲೂಕು ಘಟಕದ ಕಚೇರಿ ಅಸ್ತಿತ್ವಕ್ಕೆ ಬಂದಿದೆ.ಮೈಸೂರಿನ ವಿದ್ಯಾರಣ್ಯಪುರಂನ ಅಂದಾನಿ ವೃತ್ತದ ಸಮೀಪದಲ್ಲಿ ಆರಂಭಿ ಸಿರುವ ಕಚೇರಿಯನ್ನ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಮ.ವಿ.ರಾಮ್ ಪ್ರಸಾದ್ ಉದ್ಘಾಟಿಸಿದ್ದಾರೆ.ನಂತರ ಮಾತನಾಡಿ ಪುರೋಹಿತರು ಎಂದರೆ ಹಿಂದೆ ಪುರದಹಿತ ಕಾಯು ವವರು ಎನ್ನುತ್ತಿದ್ದರು. ಈ ನಿಟ್ಟಿನಲ್ಲಿ ಒಕ್ಕೂಟ ಹೆಜ್ಜೆ ಇಡಬೇಕು. ಪುರೋ ಹಿತರು ಜನರೊಂದಿಗೆ ನಿಕಟ ಸಂಪರ್ಕ ಹೊಂದಬೇಕು ಎಂದು ತಿಳಿಸಿದರು.ಅಭ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಧಾರ್ಮಿಕ ವಿಧಿವಿಧಾನ, ಶಾಸ್ತ್ರಗಳ ಕುರಿತಂತೆ ಜ್ಞಾನ ವೃದ್ಧಿಸಿಕೊಳ್ಳಬೇಕು. ಇದರಿಂದ ನಮ್ಮ – ಸಂಸ್ಕೃತಿಯ ಬಗ್ಗೆ ಜ್ಞಾನ ಮತ್ತು ಅದರ – ಆಚಾರ-ವಿಚಾರಗಳಲ್ಲಿ ಪುರೋಹಿತ – ವರ್ಗ ಪರಿಣತಿ ಸಾಧಿಸಲು ಸಾಧ್ಯವಾ ಗಲಿದೆ ಎಂದರು. ಸರ್ಕಾರ ವಿವಿಧ ಯೋಜನೆಗಳ ಪ್ರಯೋಜನವನ್ನು ಸಂಘಟನೆ ಮೂಲಕ
ಪಡೆಯಲು ಮುಂದಾಗಬೇಕು. ಪುರೋಹಿತರನ್ನು ಒಕ್ಕೂಟದ ಪದಾಧಿಕಾರಿಗಳು ಭೇಟಿ ಮಾಡಿ, ಸದಸ್ಯತ್ವ ಮಾಡಿಸಿ ಸಂಘಟನೆ ಮಾಡಬೇಕು. ಸದಸ್ಯತ್ವ ಮಾಡಿಕೊಳ್ಳುವುದರಿಂದ ದೊರೆಯುವ ಪ್ರಯೋಜನಗಳ ಬಗ್ಗೆ ಕರಪತ್ರದ ಮೂಲಕ ಮನವರಿಕೆ ಮಾಡಿಕೊಡಬೇಕು
ಎಂದು ಸಲಹೆ ನೀಡಿದರು.
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ಅಯ್ಯಂಗಾರ್ ಮಾತನಾಡಿ, ಪುರೋಹಿತ ವರ್ಗದ ಶ್ರೇಯೋಭಿವೃದ್ಧಿಗಾಗ ಇಂತಹ ಸಂಘಟನೆ ನಿಜಕ್ಕೂ ಅಗತ್ಯವಿತ್ತು. ಮಂಗಳ ಕಾರ್ಯಗಳ ನೇತೃತ್ವ ವಹಿಸು ವಲ್ಲಿ ಪುರೋಹಿತರ ಪಾತ್ರ ಸಮಾಜದಲ್ಲಿ ಮಹತ್ವ ಹೊಂದಿದೆ ಎಂದು ತಿಳಿಸಿದರು.

ಇದೇ ವೇಳೆ ಜೀವ ವಿಮೆ ಪತ್ರಗಳನ್ನು ಒಕ್ಕೂಟದ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಯಿತು. ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸತೀಶ್ ಸಿಂಹ, ಜಿಲ್ಲಾ ಮತ್ತ ತಾಲೂಕು ಘಟಕದ ಅಧ್ಯಕ ಸಂತೋಷ್‌ ಕುಮಾರ್ ದೇಶಿಕ್, ಗೌರವಾ ಧ್ಯಕ್ಷ ಎನ್.ಲಕ್ಷ್ಮೀಶ,
ಉಪಾಧ್ಯಕ್ಷರಾದ ವಿದ್ವಾನ್ ಮಧುಶಂಕರ್ ಭಟ್, ಕಾರ್ಯದರ್ಶಿ ರವಿಶಂಕರ್, ಖಜಾಂಜಿ
ಮನೋಹರ್, ಪದಾಧಿಕಾರಿಗಳಾದ ಗಣೇಶ್ ಎಂ ವಿ, ಗುರುರಾಜ್, ವೆಂಕಟೇಶ್, ವಿಜಯ ವಿಠಲಾಚಾರ್ಯ, ರಾಜಣ್ಣ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *