ಪುರೋಹಿತ ಕಾರ್ಮಿಕ ಫೆಡರೇಷನ್‌ ಅಸ್ತಿತ್ವಕ್ಕೆ… ಕಚೇರಿ ಉದ್ಘಾಟನೆ…

ಪುರೋಹಿತ ಕಾರ್ಮಿಕ ಫೆಡರೇಷನ್‌ ಅಸ್ತಿತ್ವಕ್ಕೆ… ಕಚೇರಿ ಉದ್ಘಾಟನೆ…

ಮೈಸೂರು,ಮಾ5,Tv10 ಕನ್ನಡ

ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್‌ನ ಮೈಸೂರು ಜಿಲ್ಲಾ ಮತ್ತು ತಾಲೂಕು ಘಟಕದ ಕಚೇರಿ ಅಸ್ತಿತ್ವಕ್ಕೆ ಬಂದಿದೆ.ಮೈಸೂರಿನ ವಿದ್ಯಾರಣ್ಯಪುರಂನ ಅಂದಾನಿ ವೃತ್ತದ ಸಮೀಪದಲ್ಲಿ ಆರಂಭಿ ಸಿರುವ ಕಚೇರಿಯನ್ನ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಮ.ವಿ.ರಾಮ್ ಪ್ರಸಾದ್ ಉದ್ಘಾಟಿಸಿದ್ದಾರೆ.ನಂತರ ಮಾತನಾಡಿ ಪುರೋಹಿತರು ಎಂದರೆ ಹಿಂದೆ ಪುರದಹಿತ ಕಾಯು ವವರು ಎನ್ನುತ್ತಿದ್ದರು. ಈ ನಿಟ್ಟಿನಲ್ಲಿ ಒಕ್ಕೂಟ ಹೆಜ್ಜೆ ಇಡಬೇಕು. ಪುರೋ ಹಿತರು ಜನರೊಂದಿಗೆ ನಿಕಟ ಸಂಪರ್ಕ ಹೊಂದಬೇಕು ಎಂದು ತಿಳಿಸಿದರು.ಅಭ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಧಾರ್ಮಿಕ ವಿಧಿವಿಧಾನ, ಶಾಸ್ತ್ರಗಳ ಕುರಿತಂತೆ ಜ್ಞಾನ ವೃದ್ಧಿಸಿಕೊಳ್ಳಬೇಕು. ಇದರಿಂದ ನಮ್ಮ – ಸಂಸ್ಕೃತಿಯ ಬಗ್ಗೆ ಜ್ಞಾನ ಮತ್ತು ಅದರ – ಆಚಾರ-ವಿಚಾರಗಳಲ್ಲಿ ಪುರೋಹಿತ – ವರ್ಗ ಪರಿಣತಿ ಸಾಧಿಸಲು ಸಾಧ್ಯವಾ ಗಲಿದೆ ಎಂದರು. ಸರ್ಕಾರ ವಿವಿಧ ಯೋಜನೆಗಳ ಪ್ರಯೋಜನವನ್ನು ಸಂಘಟನೆ ಮೂಲಕ
ಪಡೆಯಲು ಮುಂದಾಗಬೇಕು. ಪುರೋಹಿತರನ್ನು ಒಕ್ಕೂಟದ ಪದಾಧಿಕಾರಿಗಳು ಭೇಟಿ ಮಾಡಿ, ಸದಸ್ಯತ್ವ ಮಾಡಿಸಿ ಸಂಘಟನೆ ಮಾಡಬೇಕು. ಸದಸ್ಯತ್ವ ಮಾಡಿಕೊಳ್ಳುವುದರಿಂದ ದೊರೆಯುವ ಪ್ರಯೋಜನಗಳ ಬಗ್ಗೆ ಕರಪತ್ರದ ಮೂಲಕ ಮನವರಿಕೆ ಮಾಡಿಕೊಡಬೇಕು
ಎಂದು ಸಲಹೆ ನೀಡಿದರು.
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ಅಯ್ಯಂಗಾರ್ ಮಾತನಾಡಿ, ಪುರೋಹಿತ ವರ್ಗದ ಶ್ರೇಯೋಭಿವೃದ್ಧಿಗಾಗ ಇಂತಹ ಸಂಘಟನೆ ನಿಜಕ್ಕೂ ಅಗತ್ಯವಿತ್ತು. ಮಂಗಳ ಕಾರ್ಯಗಳ ನೇತೃತ್ವ ವಹಿಸು ವಲ್ಲಿ ಪುರೋಹಿತರ ಪಾತ್ರ ಸಮಾಜದಲ್ಲಿ ಮಹತ್ವ ಹೊಂದಿದೆ ಎಂದು ತಿಳಿಸಿದರು.

ಇದೇ ವೇಳೆ ಜೀವ ವಿಮೆ ಪತ್ರಗಳನ್ನು ಒಕ್ಕೂಟದ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಯಿತು. ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸತೀಶ್ ಸಿಂಹ, ಜಿಲ್ಲಾ ಮತ್ತ ತಾಲೂಕು ಘಟಕದ ಅಧ್ಯಕ ಸಂತೋಷ್‌ ಕುಮಾರ್ ದೇಶಿಕ್, ಗೌರವಾ ಧ್ಯಕ್ಷ ಎನ್.ಲಕ್ಷ್ಮೀಶ,
ಉಪಾಧ್ಯಕ್ಷರಾದ ವಿದ್ವಾನ್ ಮಧುಶಂಕರ್ ಭಟ್, ಕಾರ್ಯದರ್ಶಿ ರವಿಶಂಕರ್, ಖಜಾಂಜಿ
ಮನೋಹರ್, ಪದಾಧಿಕಾರಿಗಳಾದ ಗಣೇಶ್ ಎಂ ವಿ, ಗುರುರಾಜ್, ವೆಂಕಟೇಶ್, ವಿಜಯ ವಿಠಲಾಚಾರ್ಯ, ರಾಜಣ್ಣ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *