ಅಂಬೇಡ್ಕರ್ ಪಾರ್ಕ್ ವಿಚಾರಕ್ಕೆ ಬಂದ್ರೆ ಕೊಲೆ ಮಾಡ್ತೀವಿ…ಪ್ರೊಫೆಸರ್ ಗೆ ಧಂಕಿ ಹಾಕಿ ಹಲ್ಲೆ ನಡೆಸಿದ ಗುಂಪು…4 ಮಂದಿ ವಿರುದ್ದ FIR…

ಅಂಬೇಡ್ಕರ್ ಪಾರ್ಕ್ ವಿಚಾರಕ್ಕೆ ಬಂದ್ರೆ ಕೊಲೆ ಮಾಡ್ತೀವಿ…ಪ್ರೊಫೆಸರ್ ಗೆ ಧಂಕಿ ಹಾಕಿ ಹಲ್ಲೆ ನಡೆಸಿದ ಗುಂಪು…4 ಮಂದಿ ವಿರುದ್ದ FIR…

ಮೈಸೂರು,ಮಾ6,Tv10 ಕನ್ನಡ

ಅಶೋಕಾಪುರಂ ನ ಅಂಬೇಡ್ಕರ್ ಪಾರ್ಕ್ ಸ್ವಚ್ಛತೆ ಕಾಪಾಡುವಂತೆ ಪಾಲಿಕೆ ಸಿಬ್ಬಂದಿ ಗಮನಕ್ಕೆ ತಂದ ಪ್ರೊಫೆಸರ್ ಮನೆಗೆ ನುಗ್ಗಿದ ಯುವಕರ ಗುಂಪು ಹಿಗ್ಗಾಮುಗ್ಗ ಥಳಿಸಿ ಪಾರ್ಕ್ ತಂಟೆಗೆ ಬಂದ್ರೆ ಕೊಲೆ ಮಾಡ್ತೀವಿ ಎಂದು ಬೆದರಿಕೆ ಹಾಕಿದ ಘಟನೆ ಮೈಸೂರಿನ ಅಶೋಕಾಪುರಂ ನಲ್ಲಿ ನಡೆದಿದೆ.ಹಲ್ಲೆಗೊಳಗಾದ ಪ್ರೊಫೆಸರ್ ಪಾರ್ಕ್ ಮೇಂಟೈನನ್ಸ್ ಮಾಡುವ ವ್ಯಕ್ತಿ ಸೇರಿದಂತೆ ನಾಲ್ವರ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಧಾರವಾಡದ ಕರ್ನಾಟಕ ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಆಗಿರುವ ಡಾ.ಎಂ.ಪಿ.ರಮೇಶ್ ರವರು ಹಲ್ಲೆಗೊಳಗಾದವರು.ಪಾರ್ಕ್ ನಿರ್ವಹಣೆ ಜವಾಬ್ದಾರಿ ಹೊತ್ತ ರಕ್ಷಿತ್ ಆರಾಧ್ಯ,ಜಿತೇಂದ್ರ,ಸಮೃದ್ದಿ ಹಾಗೂ ಶ್ರೇಯಸ್ ಹಲ್ಲೆ ನಡೆಸಿದ ಯುವಕರು.

ರಜೆ ಮೇಲೆ ಮೈಸೂರಿಗೆ ಬಂದಿದ್ದ ಡಾ.ರಮೇಶ್ ರವರು ಉದ್ಯಾನವನದಲ್ಲಿರುವ ಗಿಡಗಳಿಗೆ ನೀರು ಹಾಕಿ ಸ್ವಚ್ಛತೆ ಕಾಪಾಡುವಂತೆ ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕುಮಾರ್ ಎಂಬುವರಿಗೆ ಮನವಿ ಮಾಡಿದ್ದಾರೆ.ಇಷ್ಟಕ್ಕೇ ಪಾರ್ಕ್ ಸ್ವಚ್ಛತೆ ಜವಾಬ್ದಾರಿ ಹೊತ್ತಿದ್ದ ರಕ್ಷಿತ್ ಆರಾಧ್ಯ ತನ್ನ ಸ್ನೇಹಿತರಾದ ಜಿತೇಂದ್ರ,ಸಮೃದ್ದಿ,ಶ್ರೇಯಸ್ ರನ್ನ ಕರೆತಂದು ಅಕ್ರಮವಾಗಿ ರಮೇಶ್ ರವರ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತೊಮ್ಮೆ ಪಾರ್ಕ್ ವಿಚಾರಕ್ಕೆ ಬಂದ್ರೆ ಕೊಲೆ ಮಾಡುವುದಾಗಿ ವಾರ್ನಿಂಗ್ ಕೊಟ್ಟು ಓಡಿದ್ದಾರೆ.ಹಲ್ಲೆಗೊಳಗಾದ ಡಾ.ರಮೇಶ್ ಮೆಡಿಕಲ್ ಮಾಡಿಸಿ ಆಶೋಕಪುರಂ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *