ಲವರ್ ವಿಚಾರದಲ್ಲಿ ಪರ್ಸನಲ್ ಆಗಿ ಮಾತನಾಡಬೇಕೆಂದು ಕರೆಸಿ ಪ್ರಿಯತಮನ ಮೇಲೆ ಹಲ್ಲೆ…10 ಮಂದಿ ವಿರುದ್ದ FIR ದಾಖಲು…

ಲವರ್ ವಿಚಾರದಲ್ಲಿ ಪರ್ಸನಲ್ ಆಗಿ ಮಾತನಾಡಬೇಕೆಂದು ಕರೆಸಿ ಪ್ರಿಯತಮನ ಮೇಲೆ ಹಲ್ಲೆ…10 ಮಂದಿ ವಿರುದ್ದ FIR ದಾಖಲು…

ಮೈಸೂರು,ಮಾ10,Tv10 ಕನ್ನಡ

ಪ್ರೀತಿಸುತ್ತಿರುವ ಯುವತಿಯ ವಿಚಾರ ಮಾತನಾಡಬೇಕೆಂದು ಕರೆಸಿಕೊಂಡ ಯುವಕ ಗುಂಪು ಕಟ್ಟಿಕೊಂಡು ಪ್ರಿಯತಮನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಚೇತನ್ ಚಿನ್ನಪ್ಪ ಸೇರಿದಂತೆ 10 ರಿಂದ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಮಂಡ್ಯ ಮೂಲದ ಶಿವಾರ್ಜುನ್ (29) ಹಲ್ಲೆಗೆ ಒಳಗಾದವರಾಗಿದ್ದು ಹಲ್ಲೆ ನಡೆಸಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ.

ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಶಿವಾರ್ಜುನ್ ಮೈಸೂರಿನ ವಿವಿದೆಡೆ ಕಟ್ಟಡ ನಿರ್ಮಾಣ ಕೆಲಸ ಮಾಡಿಸುತ್ತಿದ್ದಾರೆ.ಕಳೆದ 7 ವರ್ಷಗಳಿಂದ ಮೈಸೂರಿನ ಹಿನಕಲ್ ನ ಯುವತಿಯೊಬ್ಬರನ್ನ ಪ್ರೀತಿಸುತ್ತಿದ್ದಾರೆ.ಪ್ರೀತಿಸುತ್ತಿರುವ ಯುವತಿಯ ಪರ್ಸನಲ್ ವಿಚಾರ ಮಾತನಾಡಬೇಕೆಂದು ಚೇತನ್ ಚಿನ್ನಪ್ಪ ನಾಲ್ಕು ದಿನಗಳ ಹಿಂದೆ ಶಿವಾರ್ಜುನ್ ಗೆ ಫೋನ್ ಮಾಡಿ ಕರೆದಿದ್ದಾರೆ.ಪ್ರಿಯತಮೆಯ ವಿಚಾರ ಎಂದು ತಿಳಿದು ಚೇತನ್ ಚಿನ್ನಪ್ಪ ಕರೆದ ಸ್ಥಳಕ್ಕೆ ಶಿವಾರ್ಜುನ್ ಹೋಗಿದ್ದಾರೆ.ವಿಜಯನಗರ ವಾಟರ್ ಟ್ಯಾಂಕ್ ಬಳಿ ಕರೆಸಿಕೊಂಡ ಚೇತನ್ ಚಿನ್ನಪ್ಪ 10 ರಿಂದ 12 ಮಂದಿ ಗ್ಯಾಂಗ್ ಜೊತೆ ಬಂದು ಹಿಗ್ಗಾಮುಗ್ಗ ಥಳಿಸಿದ್ದಾರೆ.ನಂತರ ಪ್ರಿಯತಮೆಗೆ ಫೋನ್ ಮಾಡಿ ಚೇತನ್ ಚಿನ್ನಪ್ಪ ವಿಳಾಸ ತಿಳಿದುಕೊಂಡ ಶಿವಾರ್ಜುನ್ ಮನೆಗೆ ಹೋಗಿ ತಾಯಿ ಬಳಿ ಮಾತನಾಡಿದ್ದಾರೆ.ಈ ವೇಳೆ ಸ್ನೇಹಿತರ ಜೊತೆ ಮನೆಗೆ ಬಂದ ಚೇತನ್ ಚಿನ್ನಪ್ಪ ಧಂಕಿ ಹಾಕಿ ಕಳಿಸಿದ್ದಾನೆ.ಅನಗತ್ಯವಾಗಿ ಹಲ್ಲೆ ನಡೆಸಿದ ಚೇತನ್ ಚಿನ್ನಪ್ಪ ಹಾಗೂ ಇತರರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಶಿವಾರ್ಜುನ್ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *