ಲವರ್ ವಿಚಾರದಲ್ಲಿ ಪರ್ಸನಲ್ ಆಗಿ ಮಾತನಾಡಬೇಕೆಂದು ಕರೆಸಿ ಪ್ರಿಯತಮನ ಮೇಲೆ ಹಲ್ಲೆ…10 ಮಂದಿ ವಿರುದ್ದ FIR ದಾಖಲು…

ಲವರ್ ವಿಚಾರದಲ್ಲಿ ಪರ್ಸನಲ್ ಆಗಿ ಮಾತನಾಡಬೇಕೆಂದು ಕರೆಸಿ ಪ್ರಿಯತಮನ ಮೇಲೆ ಹಲ್ಲೆ…10 ಮಂದಿ ವಿರುದ್ದ FIR ದಾಖಲು…

ಮೈಸೂರು,ಮಾ10,Tv10 ಕನ್ನಡ

ಪ್ರೀತಿಸುತ್ತಿರುವ ಯುವತಿಯ ವಿಚಾರ ಮಾತನಾಡಬೇಕೆಂದು ಕರೆಸಿಕೊಂಡ ಯುವಕ ಗುಂಪು ಕಟ್ಟಿಕೊಂಡು ಪ್ರಿಯತಮನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಚೇತನ್ ಚಿನ್ನಪ್ಪ ಸೇರಿದಂತೆ 10 ರಿಂದ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಮಂಡ್ಯ ಮೂಲದ ಶಿವಾರ್ಜುನ್ (29) ಹಲ್ಲೆಗೆ ಒಳಗಾದವರಾಗಿದ್ದು ಹಲ್ಲೆ ನಡೆಸಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ.

ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಶಿವಾರ್ಜುನ್ ಮೈಸೂರಿನ ವಿವಿದೆಡೆ ಕಟ್ಟಡ ನಿರ್ಮಾಣ ಕೆಲಸ ಮಾಡಿಸುತ್ತಿದ್ದಾರೆ.ಕಳೆದ 7 ವರ್ಷಗಳಿಂದ ಮೈಸೂರಿನ ಹಿನಕಲ್ ನ ಯುವತಿಯೊಬ್ಬರನ್ನ ಪ್ರೀತಿಸುತ್ತಿದ್ದಾರೆ.ಪ್ರೀತಿಸುತ್ತಿರುವ ಯುವತಿಯ ಪರ್ಸನಲ್ ವಿಚಾರ ಮಾತನಾಡಬೇಕೆಂದು ಚೇತನ್ ಚಿನ್ನಪ್ಪ ನಾಲ್ಕು ದಿನಗಳ ಹಿಂದೆ ಶಿವಾರ್ಜುನ್ ಗೆ ಫೋನ್ ಮಾಡಿ ಕರೆದಿದ್ದಾರೆ.ಪ್ರಿಯತಮೆಯ ವಿಚಾರ ಎಂದು ತಿಳಿದು ಚೇತನ್ ಚಿನ್ನಪ್ಪ ಕರೆದ ಸ್ಥಳಕ್ಕೆ ಶಿವಾರ್ಜುನ್ ಹೋಗಿದ್ದಾರೆ.ವಿಜಯನಗರ ವಾಟರ್ ಟ್ಯಾಂಕ್ ಬಳಿ ಕರೆಸಿಕೊಂಡ ಚೇತನ್ ಚಿನ್ನಪ್ಪ 10 ರಿಂದ 12 ಮಂದಿ ಗ್ಯಾಂಗ್ ಜೊತೆ ಬಂದು ಹಿಗ್ಗಾಮುಗ್ಗ ಥಳಿಸಿದ್ದಾರೆ.ನಂತರ ಪ್ರಿಯತಮೆಗೆ ಫೋನ್ ಮಾಡಿ ಚೇತನ್ ಚಿನ್ನಪ್ಪ ವಿಳಾಸ ತಿಳಿದುಕೊಂಡ ಶಿವಾರ್ಜುನ್ ಮನೆಗೆ ಹೋಗಿ ತಾಯಿ ಬಳಿ ಮಾತನಾಡಿದ್ದಾರೆ.ಈ ವೇಳೆ ಸ್ನೇಹಿತರ ಜೊತೆ ಮನೆಗೆ ಬಂದ ಚೇತನ್ ಚಿನ್ನಪ್ಪ ಧಂಕಿ ಹಾಕಿ ಕಳಿಸಿದ್ದಾನೆ.ಅನಗತ್ಯವಾಗಿ ಹಲ್ಲೆ ನಡೆಸಿದ ಚೇತನ್ ಚಿನ್ನಪ್ಪ ಹಾಗೂ ಇತರರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಶಿವಾರ್ಜುನ್ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *