ಅಕ್ರಮ ಮಧ್ಯ ಮಾರಾಟ ಆರೋಪ…ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ…ಕ್ರಮ ಕೈಗೊಳ್ಳದೆ ವಾಪಸ್…ಗ್ರಾಮಸ್ಥರ ಅಸಮಾಧಾನ…

ಅಕ್ರಮ ಮಧ್ಯ ಮಾರಾಟ ಆರೋಪ…ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ…ಕ್ರಮ ಕೈಗೊಳ್ಳದೆ ವಾಪಸ್…ಗ್ರಾಮಸ್ಥರ ಅಸಮಾಧಾನ…

ನಂಜನಗೂಡು,ಮೇ10,Tv10 ಕನ್ನಡ

ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ ಪ್ರಕರಣ ಬೆಳಕಿಗೆ ಬಂದಿದೆ.ಅಬಕಾರಿ ಅಧಿಕಾರಿ ವರ್ತನೆಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಈರೇಗೌಡನ ಹುಂಡಿ ಗ್ರಾಮದ ಚೆನ್ನಪ್ಪ ಅಕ್ರಮ ಮಧ್ಯದ ಚಟಕ್ಕೆ ಬಲಿಯಾಗಿದ್ದಾರೆ.
ನಾಗಣಪುರ ಆದಿವಾಸಿ ಕಾಲೋನಿಯಲ್ಲಿ ಇಂತಹ ಪ್ರಕರಣಗಳು ನಡೆದಿವೆ.
ಬಳ್ಳೂರು ಹುಂಡಿ, ಈರೇಗೌಡನ ಹುಂಡಿ, ಅಂಜನಾಪುರ, ಮಡುವಿನಹಳ್ಳಿ, ಕೊತ್ತನಹಳ್ಳಿ ಆದಿವಾಸಿ ಕಾಲೋನಿ ಇನ್ನು ಅನೇಕ ಗ್ರಾಮಗಳಲ್ಲಿ ಪೆಟ್ಟಿ ಅಂಗಡಿ ಮತ್ತು ಗಿರಣಿ ಅಂಗಡಿಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎಂದು ಸ್ಥಳೀಯರು ಅಬಕಾರಿ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಈರೇಗೌಡನ ಹುಂಡಿ, ಅಂಜನಪುರ ,ಗ್ರಾಮಕ್ಕೆ ಪರಿಶೀಲನೆಗೆ ಬಂದ ಅಬಕಾರಿ ಅಧಿಕಾರಿಗೆ ರಾಶಿ ಕುಡಿದು ಬಿಸಾಡಿರುವ ಕಾಲಿ ಪ್ಯಾಕೆಟ್ ಗಳ ದರ್ಶನವಾಗಿದೆ.ಹೀಗಿದ್ದೂ ಪರಿಶೀಲನೆಗೆ ಬಂದ ಅಧಿಕಾರಿ ಅಫ್ಸಲ್ ಯಾವುದೇ ಕ್ರಮ ಕೈಗೊಳ್ಳದೆ ಬರಿಗೈಲಿ ಹಿಂದಿರುಗಿದ್ದಾರೆ.ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದರೂ ಕ್ಯಾರೆ ಎನ್ನದೆ ಮೌನಕ್ಕೆ ಶರಣಾಗಿದ್ದಾರೆ.
ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಅಫ್ಸಲ್ ವರ್ತನೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎಂದು ಆರೋಪಿಸುವ ಸ್ಥಳೀಯರು ಅಕ್ರಮ ಮಧ್ಯ ಮಾರಾಟಕ್ಕೆ ಬ್ರೇಕ್ ಹಾಕುವುದ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *