ಅಕ್ರಮ ಮಧ್ಯ ಮಾರಾಟ ಆರೋಪ…ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ…ಕ್ರಮ ಕೈಗೊಳ್ಳದೆ ವಾಪಸ್…ಗ್ರಾಮಸ್ಥರ ಅಸಮಾಧಾನ…

ಅಕ್ರಮ ಮಧ್ಯ ಮಾರಾಟ ಆರೋಪ…ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ…ಕ್ರಮ ಕೈಗೊಳ್ಳದೆ ವಾಪಸ್…ಗ್ರಾಮಸ್ಥರ ಅಸಮಾಧಾನ…

ನಂಜನಗೂಡು,ಮೇ10,Tv10 ಕನ್ನಡ

ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ ಪ್ರಕರಣ ಬೆಳಕಿಗೆ ಬಂದಿದೆ.ಅಬಕಾರಿ ಅಧಿಕಾರಿ ವರ್ತನೆಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಈರೇಗೌಡನ ಹುಂಡಿ ಗ್ರಾಮದ ಚೆನ್ನಪ್ಪ ಅಕ್ರಮ ಮಧ್ಯದ ಚಟಕ್ಕೆ ಬಲಿಯಾಗಿದ್ದಾರೆ.
ನಾಗಣಪುರ ಆದಿವಾಸಿ ಕಾಲೋನಿಯಲ್ಲಿ ಇಂತಹ ಪ್ರಕರಣಗಳು ನಡೆದಿವೆ.
ಬಳ್ಳೂರು ಹುಂಡಿ, ಈರೇಗೌಡನ ಹುಂಡಿ, ಅಂಜನಾಪುರ, ಮಡುವಿನಹಳ್ಳಿ, ಕೊತ್ತನಹಳ್ಳಿ ಆದಿವಾಸಿ ಕಾಲೋನಿ ಇನ್ನು ಅನೇಕ ಗ್ರಾಮಗಳಲ್ಲಿ ಪೆಟ್ಟಿ ಅಂಗಡಿ ಮತ್ತು ಗಿರಣಿ ಅಂಗಡಿಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎಂದು ಸ್ಥಳೀಯರು ಅಬಕಾರಿ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಈರೇಗೌಡನ ಹುಂಡಿ, ಅಂಜನಪುರ ,ಗ್ರಾಮಕ್ಕೆ ಪರಿಶೀಲನೆಗೆ ಬಂದ ಅಬಕಾರಿ ಅಧಿಕಾರಿಗೆ ರಾಶಿ ಕುಡಿದು ಬಿಸಾಡಿರುವ ಕಾಲಿ ಪ್ಯಾಕೆಟ್ ಗಳ ದರ್ಶನವಾಗಿದೆ.ಹೀಗಿದ್ದೂ ಪರಿಶೀಲನೆಗೆ ಬಂದ ಅಧಿಕಾರಿ ಅಫ್ಸಲ್ ಯಾವುದೇ ಕ್ರಮ ಕೈಗೊಳ್ಳದೆ ಬರಿಗೈಲಿ ಹಿಂದಿರುಗಿದ್ದಾರೆ.ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದರೂ ಕ್ಯಾರೆ ಎನ್ನದೆ ಮೌನಕ್ಕೆ ಶರಣಾಗಿದ್ದಾರೆ.
ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಅಫ್ಸಲ್ ವರ್ತನೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎಂದು ಆರೋಪಿಸುವ ಸ್ಥಳೀಯರು ಅಕ್ರಮ ಮಧ್ಯ ಮಾರಾಟಕ್ಕೆ ಬ್ರೇಕ್ ಹಾಕುವುದ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ…

Spread the love

Related post

ಮಾರಕಾಸ್ತ್ರಗಳಿಂದ ವ್ಯಕ್ತಿ ಬರ್ಬರ ಕೊಲೆ…ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು…

ಮಾರಕಾಸ್ತ್ರಗಳಿಂದ ವ್ಯಕ್ತಿ ಬರ್ಬರ ಕೊಲೆ…ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು…

ಮಾರಕಾಸ್ತ್ರಗಳಿಂದ ವ್ಯಕ್ತಿ ಬರ್ಬರ ಕೊಲೆ…ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು… ಟಿ.ನರಸೀಪುರ,ಡಿ13,Tv10 ಕನ್ನಡ ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ…
ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.ದೊಮ್ಮನಗದ್ದೆ, ಪುದುನಗರದ ಉಡುತೊರೆ ಹಳ್ಳ ಪಕ್ಕದ ಜಮೀನಿನಲ್ಲಿ ಗಾಂಜಾ ಗಿಡಗಳನ್ನ ಬೆಳೆದಿದ್ದ ಆರೋಪಿಯ ಬಂಧನ.

ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.ದೊಮ್ಮನಗದ್ದೆ,…

ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.ದೊಮ್ಮನಗದ್ದೆ, ಪುದುನಗರದ ಉಡುತೊರೆ ಹಳ್ಳ ಪಕ್ಕದ ಜಮೀನಿನಲ್ಲಿ ಗಾಂಜಾ ಗಿಡಗಳನ್ನ ಬೆಳೆದಿದ್ದ ಆರೋಪಿಯ ಬಂಧನ.ನಾಗರಾಜು ಅಲಿಯಾಸ್ ರಾಜ…
ಜೈಲಿನ ಖೈದಿಗ ಮಹಿಳೆಯಿಂದ ಗಾಂಜ ಪೇಸ್ಟ್ ಸರಬರಾಜು

ಜೈಲಿನ ಖೈದಿಗ ಮಹಿಳೆಯಿಂದ ಗಾಂಜ ಪೇಸ್ಟ್ ಸರಬರಾಜು

ಜೈಲಿನ ಖೈದಿಗ ಮಹಿಳೆಯಿಂದ ಗಾಂಜ ಪೇಸ್ಟ್ ಸರಬರಾಜು ಮೈಸೂರು,ಡಿ13,Tv10 ಕನ್ನಡ ಜೈಲಿನ ಖೈದಿಗೆ ಮಹಿಳೆಯೊಬ್ಬಳು ಗಾಂಜಾ ಪೇಸ್ಟ್ ನೀಡುವ ವೇಳೆ ಕೆಎಸ್‌ಐಎಸ್‌ಎಫ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಿಡಿದಿದ್ದಾರೆ.ಮೈಸೂರು ಕೇಂದ್ರ…

Leave a Reply

Your email address will not be published. Required fields are marked *