ಅಕ್ರಮ ಮಧ್ಯ ಮಾರಾಟ ಆರೋಪ…ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ…ಕ್ರಮ ಕೈಗೊಳ್ಳದೆ ವಾಪಸ್…ಗ್ರಾಮಸ್ಥರ ಅಸಮಾಧಾನ…

ಅಕ್ರಮ ಮಧ್ಯ ಮಾರಾಟ ಆರೋಪ…ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ…ಕ್ರಮ ಕೈಗೊಳ್ಳದೆ ವಾಪಸ್…ಗ್ರಾಮಸ್ಥರ ಅಸಮಾಧಾನ…

ನಂಜನಗೂಡು,ಮೇ10,Tv10 ಕನ್ನಡ

ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ ಪ್ರಕರಣ ಬೆಳಕಿಗೆ ಬಂದಿದೆ.ಅಬಕಾರಿ ಅಧಿಕಾರಿ ವರ್ತನೆಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಈರೇಗೌಡನ ಹುಂಡಿ ಗ್ರಾಮದ ಚೆನ್ನಪ್ಪ ಅಕ್ರಮ ಮಧ್ಯದ ಚಟಕ್ಕೆ ಬಲಿಯಾಗಿದ್ದಾರೆ.
ನಾಗಣಪುರ ಆದಿವಾಸಿ ಕಾಲೋನಿಯಲ್ಲಿ ಇಂತಹ ಪ್ರಕರಣಗಳು ನಡೆದಿವೆ.
ಬಳ್ಳೂರು ಹುಂಡಿ, ಈರೇಗೌಡನ ಹುಂಡಿ, ಅಂಜನಾಪುರ, ಮಡುವಿನಹಳ್ಳಿ, ಕೊತ್ತನಹಳ್ಳಿ ಆದಿವಾಸಿ ಕಾಲೋನಿ ಇನ್ನು ಅನೇಕ ಗ್ರಾಮಗಳಲ್ಲಿ ಪೆಟ್ಟಿ ಅಂಗಡಿ ಮತ್ತು ಗಿರಣಿ ಅಂಗಡಿಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎಂದು ಸ್ಥಳೀಯರು ಅಬಕಾರಿ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಈರೇಗೌಡನ ಹುಂಡಿ, ಅಂಜನಪುರ ,ಗ್ರಾಮಕ್ಕೆ ಪರಿಶೀಲನೆಗೆ ಬಂದ ಅಬಕಾರಿ ಅಧಿಕಾರಿಗೆ ರಾಶಿ ಕುಡಿದು ಬಿಸಾಡಿರುವ ಕಾಲಿ ಪ್ಯಾಕೆಟ್ ಗಳ ದರ್ಶನವಾಗಿದೆ.ಹೀಗಿದ್ದೂ ಪರಿಶೀಲನೆಗೆ ಬಂದ ಅಧಿಕಾರಿ ಅಫ್ಸಲ್ ಯಾವುದೇ ಕ್ರಮ ಕೈಗೊಳ್ಳದೆ ಬರಿಗೈಲಿ ಹಿಂದಿರುಗಿದ್ದಾರೆ.ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದರೂ ಕ್ಯಾರೆ ಎನ್ನದೆ ಮೌನಕ್ಕೆ ಶರಣಾಗಿದ್ದಾರೆ.
ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಅಫ್ಸಲ್ ವರ್ತನೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎಂದು ಆರೋಪಿಸುವ ಸ್ಥಳೀಯರು ಅಕ್ರಮ ಮಧ್ಯ ಮಾರಾಟಕ್ಕೆ ಬ್ರೇಕ್ ಹಾಕುವುದ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ…

Spread the love

Related post

ಹುಲಿಮರಿ ಸೆರೆ…ತಾಯಿ ಹಾಗೂ ಇನ್ನೆರಡು ಮರಿಗಳ ಸೆರೆಗಾಗಿ ಕಾರ್ಯಾಚರಣೆ…

ಹುಲಿಮರಿ ಸೆರೆ…ತಾಯಿ ಹಾಗೂ ಇನ್ನೆರಡು ಮರಿಗಳ ಸೆರೆಗಾಗಿ ಕಾರ್ಯಾಚರಣೆ…

ಹುಣಸೂರು,ನ13,Tv10 ಕನ್ನಡ ಮೈಸೂರು ಜಿಲ್ಲೆಯ ಹುಣಸೂರು ತಾಲೂಕುಚಿಕ್ಕಾಡಿಗನಹಳ್ಳಿಯಲ್ಲಿ ಹುಲಿ ಮರಿ ಸೆರೆಯಾಗಿದೆ.ಗ್ರಾಮದಲ್ಲಿ ಆಗಾಗ ತಾಯಿ ಹುಲಿ ಮೂರು ಮರಿಗಳು ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು.ಈ ಹಿನ್ನೆಲೆ ಅರಣ್ಯ ಇಲಾಖೆ ಕೂಂಬಿಂಗ್‌…
ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ…ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ FIR

ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ…ಕಟ್ಟಡ ಮಾಲೀಕ ಸೇರಿದಂತೆ…

ಮೈಸೂರು,ನ13,Tv10 ಕನ್ನಡ ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ನಡೆದಿದೆ.ಸುರಕ್ಷತಾ ಕ್ರಮ ಅನುಸರಿಸದ ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ ನಜರಬಾದ್…
ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ಮೈಸೂರು,ನ11,Tv10 ಕನ್ನಡ ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಎಸ್‌ಐಟಿ ತನಿಖೆಯಲ್ಲಿ ದೃಢಪಟ್ಟಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್…

Leave a Reply

Your email address will not be published. Required fields are marked *