ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ10,Tv10 ಕನ್ನಡ

ಪಾರ್ಶ್ವವಾಯು ಪೀಡಿತ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ನನ್ನ ಸಾವಿಗೆ ಕೆಳಗಡೆ ಮನೆಯವರಾದ ಶ್ರೀನಿವಾಸ್ ಹಾಗೂ ಮಂಜುಳ ಕಾರಣ ಎಂದು ಸೆಲ್ಫೀ ವಿಡಿಯೋ ಮಾಡಿರುವ ಹಿನ್ನಲೆ ಮೃತರ ಪತ್ನಿ ತೆನಿಖೆ ನಡೆಸುವಂತೆ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ರಾಜು ಅನುಮಾನಾಸ್ಪದವಾಗಿ ಮೃತಪಟ್ಟವರು.ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದಾರೆ.ಪತ್ನಿ ಜಯಪ್ರದ ಇನ್ಫೋಸಿಸ್ ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಾಜು ಸೆಲ್ಫೀ ವಿಡಿಯೋ ಮಾಡಿದ್ದಾರೆ.ಪತ್ನಿ ಹಾಗೂ ಮಕ್ಕಳಿಗೆ ತಿಳಿದು ಧೈರ್ಯ ತುಂಬಿ ಪ್ರಯತ್ನವನ್ನ ತಡೆಹಿಡಿದಿದ್ದಾರೆ.ಮರುದಿನವೇ ತಾನು ವಿಷ ಕುಡಿದಿರುವುದಾಗಿ ಪರಿಚಯಸ್ತರ ಬಳಿ ಹೇಳಿದ್ದಾರೆ.ಈ ಮಾಹಿತಿ ಜಯಪ್ರದಾ ರವರಿಗೆ ಗೊತ್ತಾಗಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.ಚಿಕಿತ್ಸೆ ಫಲಕಾರಿಯಾಗದೆ ರಾಜು ಮೃತಪಟ್ಟಿದ್ದಾರೆ.ಸೆಲ್ಪೀ ವಿಡಿಯೋ ಪ್ರಕಾರ ಕೆಳಗಡೆ ಮನೆಯವರು ಆಗಾಗ ಜಗಳ ಮಾಡುತ್ತಿದ್ದರು.ನನ್ನ ಸಾವಿಗೆ ಶ್ರೀನಿವಾಸ್ ಹಾಗೂ ಮಂಜುಳಾ ಕಾರಣ ಎಂದು ವಿಡಿಯೋದಲ್ಲಿ ತಿಳಿಸಿರುವ ಹಿನ್ನಲೆ ಪತಿಯ ಸಾವಿನ ಬಗ್ಗೆ ಅನುಮಾನವಿದೆ ತೆನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಳಗಡೆ ಮನೆಯವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ…
ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ…
ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ…

Leave a Reply

Your email address will not be published. Required fields are marked *